32 C
Mumbai
April 24, 2026
Mumbai News Kannada
ಕ್ರೀಡೆ

27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ : ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಭರ್ಜರಿ ಜಯ





ಮುಂಬಯಿ : ಮಾರ್ಚ್ 8 ರಂದು ಚರ್ಚ್‌ಗೇಟ್ ನ ಕರ್ನಾಟಕ ಸ್ಪೋರ್ಟ್ಸ ಮೈದಾನದಲ್ಲಿ ನಡೆದ, ಕರ್ನಾಟಕ ಸ್ಪೊರ್ಟಿಂಗ್ ಅಸೋಷಿಯೇಶನ್ ಆಯೋಜಿಸಿದ 27ನೇ ರಮಾನಾಥ ಪಯ್ಯಡೆ ಸ್ಮಾರಕ ಕಾಲ್ಚೆಂಡು ಲೀಗ್ ಟೂರ್ನಮೆಂಟ್ ನಲ್ಲಿ ಮಹಾನಗರದ ಹಿರಿಯ ಕ್ರೀಡಾ ತಂಡ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಕರ್ನಾಟಕ ಸ್ಪೊರ್ಟಿಂಗ್ ಕ್ಲಬ್ ಭರ್ಜರಿ ಜಯಗಳಿಸಿದೆ. ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕರ್ನಾಟಕ ಸ್ಪೊರ್ಟಿಂಗ್ ಅಸೋಷಿಯೇಶನ್ ಪೈನಲ್ ಪ್ರವೇಶಿಸಿದ್ದು ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಗೆ ಇದು ಒಂದು ಐತಿಹಾಸಿಕ ವಿಜಯೋತ್ಸವವಾಗಿದೆ.


ಕರ್ನಾಟಕ ಸ್ಪೊರ್ಟಿಂಗ್ ಅಸೋಷಿಯೇಶನ್ ಅಧ್ಯಕ್ಷರಾದ ಡಾ. ಪಿ. ವಿ. ಶೆಟ್ಟಿ, ಕಾರ್ಯದರ್ಶಿ ಜಯ ಶೆಟ್ಟಿ, ಸದಸ್ಯರು ಮತ್ತು ಇತರ ಗಣ್ಯರು, ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನ ಉಪಾಧ್ಯಕ್ಷ ಚಂದ್ರಕಾತ ಎಸ್ ಉಚ್ಚಿಲ್, ದರ್ಶನ್ ಕೆ ಬಟ್ಟಪ್ಪಾಡಿ, ಗುರುದತ್ತ್ ಎಸ್ ಉಚ್ಚಿಲ್ ಮತ್ತಿತರ ಪದಾಧಿಕಾರಿಗಳೂ ಸದಸ್ಯರುಗಳು ಉಪಸ್ಥಿತರಿದ್ದರು.


ಈಗಾಗಲೇ ಕಳೆದ 80 ವರ್ಷಗಳಿಗೂ ಅಧಿಕ ಕಾಲ ಕ್ರೀಡಾ ಕ್ಷೇತ್ರದಲ್ಲಿ ನಿರಂತರವಾಗಿ ಸಾಧನೆ ಮಾಡುತ್ತಾ ಬಂದಿರುವ ಮಹಾನಗರದಲ್ಲಿ ನೆಲಿಸಿರುವ ಕರಾವಳಿಯ ಗಡಿನಾಡಿನ ಮೊಯಾ (ಬೋವಿ) ಸಮುದಾಯದ ಈ ತಂಡವು ಕ್ರೀಡಾ ಕ್ಷೇತ್ರದಲ್ಲಿ ಎಲ್ಲೆಡೆ ಮಿಂಚಿದ್ದು 1969 ರಲ್ಲಿ ಪುತ್ಲಿ ಕಪ್ ಗೆಡ್ಡು ದೊಡ್ಡ ಮಟ್ಟದ ಸಾಧನೆಯನ್ನು ಮಾಡಿದೆ. ಆ ನಂತರವೂ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ನಿರಂತರವಾಗಿ ಗೆಲುವನ್ನು ಸಾದಿಸಿದ್ದು ಇದೀಗ ಇದರ ಸಾಧನೆಗೆ ಮತ್ತೊಂದು ಕಿರೀಟವನ್ನು ಧರಿಸಿದೆ. ಆರ್ಯನ್ ಎಂ. ಸೋಮೇಶ್ವರ್ ಜೈಹಿಂದ್ ತಂಡದ ಗೋಲ್ ಕೀಪರ್ ಆಗಿದ್ದರು.
ಟೂರ್ನಮೆಂಟ್ ನಲ್ಲಿ ಭಾಗವಹಿಸಿದ ಎಲ್ಲಾ ಆಟಗಾರರಿಗೆ ಹಾಗು ಪ್ರತ್ಯಕ್ಷ ಹಾಗೂ ಪ್ರರೋಕ್ಷವಾಗಿ ಸಹಕರಿದಿದ ಎಲ್ಲರಿಗೂ ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ ಕಾರ್ಯಕಾರಿ ಸಮಿತಿಯು ಅಭಿನಂದನೆ ಸಲ್ಲಿಸಿದೆ.



Related posts

ಉದಯ ಶೆಟ್ಟಿ ನೇತೃತ್ವದಲ್ಲಿ ಹರಿಯಾಣದಲ್ಲಿ 5ನೇ ಮಾಸ್ಟರ್ಸ್ ರಾಷ್ಟ್ರೀಯ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 59ನೇ ಆರ್. ಎನ್. ಉಚ್ಚಿಲ್ ಸ್ಮಾರಕ ಅಥ್ಲೆಟಿಕ್ಸ್ ಕ್ರೀಡಾಕೂಟ

Mumbai News Desk

ಡಬ್ಲ್ಯೂ ಐಎಫ್ ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಆಯ್ಕೆ

Mumbai News Desk

ತುಳು ಸಂಘ ಬೊರಿವಲಿ, ಯುವ ವಿಭಾಗದಿಂದ ಗಣ್ಯರ ಉಪಸ್ಥಿತಿಯಲ್ಲಿ ಯಶಸ್ವೀ ಮ್ಯಾರಥಾನ್

Mumbai News Desk

ಎನ್ ಕೆ ಇ ಎಸ್ ಪ್ರೊ ಕಬಡ್ಡಿ ಸೀಸನ್ 1 – ಬಹುಮಾನ ವಿತರಣೆ

Chandrahas

ಕಾಂದಿವಲಿ ಪಶ್ಚಿಮದ ರಂಜಿತ್ ಪೂಜಾರಿಗೆ ವಿಶ್ವ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Mumbai News Desk