September 6, 2026
Mumbai News Kannada
ಸುದ್ದಿ

ಮುಲ್ಕಿ ಬಪ್ಪನಾಡು ಕ್ಷೇತ್ರದ ಅನುವಂಶೀಯ ಮೊಕ್ತೇಸರ ಎಸ್. ಎಸ್. ಮನೋಹರ ಶೆಟ್ಟಿ ನಿಧನ.






ಮುಲ್ಕಿ. ಮಾ. 18:ಮುಲ್ಕಿ ಶ್ರೀಕ್ಷೇತ್ರ ಬಪ್ಪನಾಡಿನ ಅನುವಂಶೀಯ ಮೊಕ್ತೇಸರರಾದ ಕಕ್ವಗುತ್ತು ಎಸ್. ಎಸ್. ಮನೋಹರ ಶೆಟ್ಟಿ(87)ರವರು ಅನಾರೋಗ್ಯದಿಂದ ಮಾ. 19ರಂದು ನಿಧನರಾಗಿದ್ದಾರೆ.
ಶೆಟ್ಟಿಯವರು ವಿಜಯಾ ಬ್ಯಾಂಕಿನಲ್ಲಿ ಪ್ರಭಂದಕರಾಗಿದ್ದು ಸಮಾಜ ಸೇವೆಯೊಂದಿಗೆ ನಿವೃತ್ತ ಜೀವನ ನಡೆಸುತ್ತಿದ್ದರು.ಮುಲ್ಕಿ ಸುಂದರ ರಾಮ ಶೆಟ್ಟಿ ಟ್ರಸ್ಟಿನ ಗೌರವ ಸಲಹೆಗಾರರಾಗಿ,ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ 1996ರಿಂದ ಸೇವೆ ಸಲ್ಲಿಸುತ್ತಿದ್ದು ದೇವಸ್ಥಾನದ ಅಭಿವೃದ್ಧಿಗೆ ಬಹಳಷ್ಟು ಶ್ರಮಿಸಿದ್ದರು. ಕುಬೆವೂರು ಶ್ರೀ ಜಾರಂದಾಯ ದೈವಸ್ಥಾನದ ಜೀರ್ಣೋದ್ದಾರ ಸಮಿತಿಯಲ್ಲೂ ಗೌರವಾದ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮುಲ್ಕಿ ಕಕ್ವಗುತ್ತಿನ ಅನುವಂಶೀಯ ಮೊಕ್ತೇಸರರಾದ ದಿ.ಕಾಳಪ್ಪ ಶೆಟ್ಟಿಯವರ ಕುಟುಂಬಿಕರಾದ ಇವರು ಶ್ರೀ ಕ್ಷೇತ್ರ ಬಪ್ಪನಾಡಿನಲ್ಲಿ 29 ವರ್ಷ ಆಡಳಿತ ಮೊಕ್ತೇಸರರಾಗಿ ಸೇವೆ ಸಲ್ಲಿಸಿ ಜನಾನುರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.



Related posts

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಪತ್ರಿಕಾ ಗೋಷ್ಠಿ: ಜಿಲ್ಲೆಗಳ ಶಾಂತಿ ಸೌಹಾರ್ದತೆ, ಘನ ಕೈಗಾರಿಕೋಧ್ಯಮಕ್ಕೆ ಪೂರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ

Mumbai News Desk

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk

ಬಂಟರ ಸಂಘ ಬಂಟವಾಳ  ಯುವ ವಿಭಾಗದ    ಹಬ್ಬ ದೀಪಾವಳಿ ಸಂಭ್ರಮದ  ಬೊಲ್ಪುದ ಐಸಿರಿ-೨ . ಬಂಟರ   ಸಂಸ್ಕೃತಿಯನ್ನು ಬಿಂಬಿಸಿದೆ:  ಐಕಳ ಹರೀಶ್ ಶೆಟ್ಟಿ

Mumbai News Desk

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk