30.9 C
Mumbai
June 8, 2026
Mumbai News Kannada
ಪ್ರಕಟಣೆ

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜೋಡು ಜೀಟಿಗೆ ನಾಟಕ : ಮಂಗಳೂರಿನ ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ





ದಕ್ಷಿಣ ಕನ್ನಡದ ಮೊದಲ ಮಹಿಳಾ ಸಾರಥ್ಯದ ತಂಡ

ಮಂಗಳೂರು : ಮಸ್ಕಿರಿ ಕುಡ್ಲ ಅರ್ಪಿಸುವ ತುಳು ರಂಗಭೂಮಿಯಲ್ಲಿ ವಿಶೇಷ ರೀತಿಯಾ ರಂಗಪ್ರಯೋಗದಲ್ಲಿ ಮಿನುಗುತ್ತಿರುವ ಈ ವರ್ಷದ ಸೂಪರ್ ಹಿಟ್ ನಾಟಕ ಶಿರಡಿ ಸಾಯಿಬಾಬಾ ಮಂದಿರ ಆಶ್ರಿತ ಸಾಯಿಶಕ್ತಿ ಕಲಾ ಬಳಗ ಅರ್ಪಣೆ ಮಾಡುವ ಎರಡನೇ ಕಲಾಕಾಣಿಕೆ ಜೋಡು ಜೀಟಿಗೆ ನಾಟಕದ 25ನೇ ಅದ್ದೂರಿ ಪ್ರದರ್ಶನ ಮಂಗಳೂರಿನ ಪುರಭವನದಲ್ಲಿ ಇದೇ ಬರುವ ತಾರೀಕು ಮಾರ್ಚ್ 23, 2025, ಭಾನುವಾರ ಸಂಜೆ 5:30ಕ್ಕೆ ನಡೆಯಲಿದೆ.

ತುಳು ರಂಗಭೂಮಿಯ ಇತಿಹಾಸದಲ್ಲಿ ಅದ್ಭುತ ಸಾಧನೆಯೊಂದಕ್ಕೆ ಸಾಯಿಶಕ್ತಿ ಕಲಾ ಬಳಗ ಮುನ್ನುಗ್ಗಿದೆ ಈ ನಾಟಕವು ಮುಂಬಯಿ ಮತ್ತು ಉಡುಪಿ ಮತ್ತು ಕಾಸರಗೋಡಿನಲ್ಲಿ ಏಕಕಾಲದಲ್ಲಿ ಪ್ರದರ್ಶನಗೊಳ್ಳುವ ಮೂಲಕ ವಿಶಿಷ್ಟ ಸಾಧನೆ ಮಾಡಿದೆ.

ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್ ಇವರ ನಿರ್ಮಾಣ ಮತ್ತು ನಿರ್ದೇಶನದ ಶ್ರೀಯುತ ಕೀರ್ತನ್ ಭಂಡಾರಿ ಕುಲಾಯಿ ರಚನೆಯ,ಗೌರವ್ ಶೆಟ್ಟಿಗಾರ್ ಮಠದಕಣಿ ಇವರ ನಿರ್ವಹಣೆಯಲ್ಲಿ ನಾಟಕ ಮೂಡಿ ಬರಲಿದೆ.

ಕಾರ್ಯಕ್ರಮದ ಅತಿಥಿಗಳಾಗಿ ಕರ್ನಾಟಕ ವಿಧಾನಸಭಾ ಸಭಾಧ್ಯಕ್ಷರಾದ ಶ್ರೀ ಯು.ಟಿ. ಖಾದರ್, ಶ್ರೀ ಶಿರಡಿ ಸಾಯಿಬಾಬ ಮಂದಿರ, ಚಿಲಿಂಬಿಯ ಟ್ರಸ್ಟಿ ಶ್ರೀ ವಿಶ್ವಾಸ್ ಕುಮಾರ್ ದಾಸ್ ,
ಜ್ಯೋತಿಷ್ಯರಾದ ಶ್ರೀ ಎಚ್. ಟಿ. ರಾಧಕೃಷ್ಣ ಶಾಸ್ತ್ರಶ್ರೀ, ಶ್ರೀಮತಿ ಚಂದ್ರಿಕಾ ಐಕಳ ಹರೀಶ್ ಶೆಟ್ಟಿ, ಮುಂಬಯಿ, ಕುದ್ರೋಳಿ ಭಗವತಿ ಕ್ಷೇತ್ರ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀ ಉಷಾ ಪ್ರಭಾಕರ್ ಯೆಯ್ಯಾಡಿ, ಹಿಂದುಳಿದ ವಿಭಾಗ ಕಾಂಗ್ರೆಸ್ ಉಳ್ಳಾಲ ಇದರ ಉಪಾಧ್ಯಕ್ಷರಾದ ಶ್ರೀ ಪ್ರಕಾಶ್ ಕುಂಪಲ, ಅಸ್ತ್ರ ಗ್ರೂಪ್ ಇದರ CEO, CATCA ಪ್ರೆಸಿಡೆಂಟ್, ಶ್ರೀ ಲಂಚುಲಾಲ್ ಕೆ.ಎಸ್, ಒಡಿಯೂರು ಶ್ರೀ ವಿವಿದೊದ್ದೇಶ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾದ
ಶ್ರೀ ಗಣೇಶ್ ಅತ್ತಾವರ, ಶ್ರೀ ದಿನೇಶ್ ಕುಲಾಲ್, ಅಧ್ಯಕ್ಷರು, ಶ್ರೀ ವೆಂಕಟೇಶ ಭಜನಾ ಮಂದಿರ, ಬೋಳೂರು, ಶ್ರೀ ಚಿದಾನಂದ ಕೆದಿಲಾಯ, ವಕೀಲರು, ಶ್ರೀ ಲೋಕಯ್ಯ ಶೆಟ್ಟಿಗಾರ್, ಮಾಲಕರು, ಭವಾನಿ ಕೇಟರರ್ಸ್ ಇವರು ಪಾಲ್ಗೊಳ್ಳಲಿದ್ದಾರೆ.

ಸನ್ಮಾನ ಕಾರ್ಯಕ್ರಮ
ಈ ಸಂದರ್ಭದಲ್ಲಿ ಖ್ಯಾತ ರಂಗ ನಟ, ಲೇಖಕ ಹಾಗೂ ನಿರ್ದೇಶಕ ಶ್ರೀ ಸುಧೀರ್ ರಾಜ್ ಉರ್ವ ಮತ್ತು ಪ್ರಖ್ಯಾತ ಸಂಗೀತ ನಿರ್ದೇಶಕ ಬಿ.ಎಸ್. ಕಾರಂತ್ ಇವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಉಚಿತ ಪ್ರವೇಶ:
ಈ ಕಾರ್ಯಕ್ರಮದಲ್ಲಿ ಪ್ರೇಕ್ಷಕರಿಗೆ ಉಚಿತ ಪ್ರವೇಶವನ್ನು ನೀಡಲಾಗಿದ್ದು, ಎಲ್ಲಾ ಕಲಾ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಅಪರೂಪದ ಕಲಾ ಕೃತಿಯನ್ನು ಅನುಭವಿಸುವಂತೆ ವಿನಂತಿದ್ದಾರೆ.



Related posts

ಮಲಾಡ್ ಕುರಾರ ಶ್ರೀ ಶನಿ ಮಹಾತ್ಮ ಚಾರಿಟೇಬಲ್ ಟ್ರಸ್ಟ್. ಜೂ22. ಶೈಕ್ಷಣಿಕ ನೆರವು.ಉಚಿತ ಶಾಲಾ ಪರಿಕರ ವಿತರಣೆ.

Mumbai News Desk

ವಿದ್ಯಾವಿಹಾರ್: ಶ್ರೀ ಅಂಬಿಕಾ ಆದಿನಾಥೇಶ್ವರ ಗಣಪತಿ ದೇವಸ್ಥಾನ,ಫೆ. 1ರಂದು ಇಪ್ಪತ್ನಾಲ್ಕು ಕಂತುಗಳ ಶ್ರೀರಾಮ ಕಥಾ ಹೃದಯಂ ಸರಣಿ ತಾಳಮದ್ದಳೆ

Mumbai News Desk

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ

Mumbai News Desk

ಜೂ. 21ರಂದು ವಸಯಿ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ವಿಶ್ವ ಯೋಗ ದಿನಾಚರಣೆ

Mumbai News Desk

ಡಿ.9 ರಂದು ಶ್ರೀ ಸದ್ಗುರು ಶನೇಶ್ವರ ಸೇವಾ ಸಮಿತಿ ಕಾಂದಿವಲ ಇದರ ವತಿಯಿಂದ 49ನೇ ವಾರ್ಷಿಕ ಶ್ರೀ ಶನೀಶ್ವರ ಗ್ರಂಥಪಾರಾಯಣ ಮಹೋತ್ಸವ 

Mumbai News Desk

ಅ.9,ಭಾಯಂದರ್ ಬಿಲ್ಲವರ ಅಸೋಸಿಯೇಶನಿನ ಸ್ಥಳೀಯ ಕಚೇರಿಯ ವತಿಯಿಂದ ‘ಆಟಿಡೊಂಜಿ ಕೂಟ’ ಕಾರ್ಯಕ್ರಮ.

Mumbai News Desk