July 23, 2026
Mumbai News Kannada
ಕರ್ನಾಟಕ

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ








ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲ ಒಂದು ವಸ್ತುಗಳ ಬೆಲೆ ಹೆಚ್ಚಾಗುತ್ತಲೇ ಇವೆ. ಆರಂಭದಲ್ಲಿ ಮಧ್ಯದ ಬೆಲೆ ನಂತರ ಸಾರಿಗೆ ಬಸ್ ಪ್ರಯಾಣ, ಹಾಲಿನ ದರ, ನಮ್ಮ ಮೆಟ್ರೋ ದರ ಇದೀಗ ವಿದ್ಯುತ್ ದರ ಹೆಚ್ಚಳ ಮಾಡಿ ಜನರಿಗೆ ಮತ್ತೆ ಶಾಕ್ ನೀಡಿದೆ.
ಕೆಇಆರ್ಸಿ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಳ ಮಾಡಿದ್ದು, ಏಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ. ಸರಕಾರವು ಗ್ರಹ ಜ್ಯೋತಿ ಯೋಜನೆಯ ಮೂಲಕ 200 ಯುನಿಟ್ ವಿದ್ಯುತ್ ಉಚಿತ ಕೊಟ್ಟಿದ್ದು, 200 ಯೂನಿಟ್ ಮೇಲೆ ಬಳಸಿದವರಿಗೆ ದರ ಏರಿಕೆ ಅನ್ವಯವಾಗುತ್ತದೆ.

ಕರ್ನಾಟಕ ಸರ್ಕಾರವು ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL)ನೌಕರರು, ಸಿಬ್ಬಂದಿಗೆ ವೇತನ, ಪಿಂಚಣಿ, ಗ್ರಾಚುಟಿಗೆ ಹಣ ಹೊಂದಿಸಲು ದರ ಹೆಚ್ಚಿಸಿ ಜನರಿಂದ ಹಣ ವಸೂಲಿಗೆ ಮುಂದಾಗಿದೆ ಎಂದು ಸಾರ್ವಜನಿಕರು, ವಿಪಕ್ಷ ನಾಯಕರು ದೂರಿದ್ದಾರೆ.
ರಾಜ್ಯ ಸರ್ಕಾರ ಒಂದು ಕಡೆ ಉಚಿತ ಕರೆಂಟ್ ನೀಡುವುದಾಗಿ ಘೋಷಿಸಿದೆ ಮತ್ತೊಂದು ಕಡೆ ರಾಜ್ಯ ಲೋಕಾಪಯೋಗಿ ಇಲಾಖೆ ಬರೋಬ್ಬರಿ 8000 ಕೋಟಿ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ, ಹೀಗಾಗಿಯೇ ಸರಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನರಿಗೆ ದರ ಏರಿಕೆ ಬರ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಸರಕಾರದ ವಿರುದ್ಧ ಕಿಡಿ ಕಾರಿದರು.



Related posts

ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿಯ ಕೊಲೆ, ಇಬ್ಬರು ಅಪ್ರಾಪ್ತ ವಯಸ್ಕರ ಬಂಧನ

Mumbai News Desk

ಧರ್ಮಸ್ಥಳ : ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನವಂಬರ್ 12ರವರೆಗೆ ಮಧ್ಯಂತರ ತಡೆ.

Mumbai News Desk

ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮೇಜರ್ ಟ್ವಿಸ್ಟ್, ಮಾಸ್ಕ್ ಮ್ಯಾನ್ ಅರೆಸ್ಟ್.

Mumbai News Desk

ಕರ್ನಾಟಕ : ಋತುಚಕ್ರದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ

Mumbai News Desk

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ. ಆರ್. ಪ್ರತಿಭಾ ಅಧಿಕಾರ ಸ್ವೀಕಾರ: ಜನಪರ ಆಡಳಿತಕ್ಕೆ ಸಂಕಲ್ಪ

Mumbai News Desk

ಬೈಂದೂರು ಅಗ್ನಿಶಾಮಕ ಅಧಿಕಾರಿ ರಾಜೇಶ್ ಶೆಟ್ಟಿಯವರಿಗೆ ಮುಖ್ಯಮಂತ್ರಿ ಪದಕ

Mumbai News Desk