July 23, 2026
Mumbai News Kannada
ಮುಂಬಯಿ

ಪಡುಬಿದ್ರಿ ಕಾಡಿಪಟ್ನ ಮೊಗವೀರ ವೆಲ್ಫೇರ್ ಎಸೋಸಿಯೆಷನ್, ಮುಂಬಯಿ : ವಾರ್ಷಿಕ ವಿಹಾರಕೂಟ







ಪಡುಬಿದ್ರಿ ಕಾಡಿಪಟ್ನ ಮೊಗವೀರ ವೆಲ್ಫೇರ್ ಎಸೋಸಿಯೇಷನ್ ಮುಂಬಯಿಯ ವತಿಯಿಂದ ವಾರ್ಷಿಕ ವಿಹಾರ ಕೂಟ 22/3/25ರ ಸಂಜೆಯಿಂದ 23/3/25ರ ಸಂಜೆ ತನಕ ಗೋರೈ ಮುಂಬಯಿಯ ಫಾರ್ಮ್ ರಿಜೆನ್ಸಿ ರೆಸಾರ್ಟ್ ನಲ್ಲಿ ಸಂಭ್ರಮ, ಉಲ್ಲಾಸದಿಂದ ಜರಗಿತು.
22ರ ಸಂಜೆ ನಡೆದ ವಿಚಾರ ವಿನಿಮಯ, ಚರ್ಚಾ ಕೂಟದಲ್ಲಿ ಮಹಾಸಭೆಯ ಮುಂದಿನ ಯೋಜನೆಗಳ ಬಗ್ಗೆ, ಸದಸ್ಯರಿಗೆ ನೀಡುವ ಆರ್ಥಿಕ ಸಹಾಯ ಹಾಗೂ ಇನ್ನಿತರ ವಿಷಯದ ಬಗ್ಗೆ ಚರ್ಚಿಸಲಾಯಿತು.
ಮರುದಿನ ಸದಸ್ಯರು ವಿವಿಧ ಮನೋರಂಜನೆ, ವಿನೋದವಳಿಯಲ್ಲಿ ಭಾಗವಹಿಸಿ ಸಂಭ್ರಮಿಸಿದರು.
ಸಭಾದ ಅಧ್ಯಕ್ಷರಾದ ಹರೀಶ್ ಪುತ್ರನ್ ಅವರ ಮುಂದಾಳತ್ವದಲ್ಲಿ ನಡೆದ ವಿಹಾರಕೂಟದಲ್ಲಿ ಪದಾಧಿಕಾರಿಗಳು, ಸದಸ್ಯರು ಸಹಕರಿಸಿದರು.
ಕಾರ್ಯದರ್ಶಿ ವಿಜಯ ಸಾಲ್ಯಾನ್ ಪಾಲ್ಗೊಂಡ ಎಲ್ಲರಿಗೂ ಕೊನೆಯಲ್ಲಿ ವಂದಿಸಿದರು.


ಅಧ್ಯಕ್ಷರಾದ ಹರೀಶ್ ಪುತ್ರನ್, ಉಪಾಧ್ಯಕ್ಷ ಶಶಿಕಾಂತ್ ಕೋಟ್ಯಾನ್, ಗೌರವ ಕಾರ್ಯದರ್ಶಿ ವಿಜಯ ಸಾಲ್ಯಾನ್, ಕೋಶಾಧಿಕಾರಿ ಹೇಮಂತ್ ಮೆಂಡನ್, ಸದಸ್ಯರುಗಳಾದ ಯುವರಾಜ್ ಶ್ರೀಯಾನ್, ಪುಷ್ಪರಾಜ್ ಕೋಟ್ಯಾನ್, ನಾರಾಯಣ ಕೋಟ್ಯಾನ್, ವಾಸುದೇವ ಸುವರ್ಣ, ಗಂಗಾಧರ ಬಂಗೇರ, ಗಣೇಶ್ ಬಂಗೇರ, ನಾರಾಯಣ ಬಂಗೇರ, ದೀಪಕ್ ಪುತ್ರನ್, ನಾಗೇಶ್ ಸಾಲ್ಯಾನ್, ಮಹೇಂದ್ರ ಕಾಂಚನ್, ದಿನರಾಜ ಸಾಲ್ಯಾನ್, ಜಗದೀಶ್ ಅಮೀನ್, ಜಯಶೀಲ ಕರ್ಕೇರ, ತೇಜಸ್ ಬಂಗೇರ, ಅಶೋಕ್ ಪುತ್ರನ್, ಕಿಶೋರ್ ಕಾಂಚನ್, ಯಶ್ವಂತ್ ಕರ್ಕೇರ, ಮಾಸ್ಟರ್ ಶ್ಲೋಕ್ ಕಾಂಚನ್ ವಿಹಾರ ಕೂಟದಲ್ಲಿ ಪಾಲ್ಗೊಂಡಿದ್ದರು.
ಪಡುಬಿದ್ರಿ ಕಾಡಿಪಟ್ನ ಮೊಗವೀರ ವೆಲ್ಫೇರ್ ಎಸೋಸಿಯೆಷನ್ ಸಮಾಜ ಬಾಂದವರಲ್ಲಿ ಸಹೋದರತ್ವ ಬೆಳೆಸುವುದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ರಂಗದಲ್ಲಿ ಸೇವಾ ನಿರತವಾಗಿದೆ. ವೈದಕೀಯ ಶಿಬಿರ, ರಕ್ತದಾನ ಶಿಬಿರ, ಹಾಗೂ ಸದಸ್ಯರಿಗೆ ಆರ್ಥಿಕ ಸಹಾಯ ಮಾಡುತ್ತಿದೆ.



Related posts

ಬಿಲ್ಲವರ ಅಸೋಸಿಯೇಷನ್ ಮುಂಬೈ, ಡೊಂಬಿವಲಿ ಸ್ಥಳೀಯ ಕಚೇರಿ, ಶಾರದಾ ಪೂಜೆ ಆಚರಣೆ.

Chandrahas

ಫೋರ್ಟ್‌ನಲ್ಲಿ ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿಯ 81ನೇ ವಾರ್ಷಿಕ ಮಹಾಪೂಜೆ ಸಂಪನ್ನ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ಆಷಾಢೋತ್ಸವ

Mumbai News Desk

ಗೋರೆಗಾಂವ್ ಶ್ರೀ ಶಾಂತಾ ದುರ್ಗಾದೇವಿ ದೇವಸ್ಥಾನ -ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ .

Mumbai News Desk

ಡೊಂಬಿವಲಿ: ಬಡ ರೋಗಿಗಳಿಗೆ ಆಸರೆಯಾದ ಉಚಿತ ಡಯಾಲಿಸಿಸ್ ಕೇಂದ್ರ ಲೋಕಾರ್ಪಣೆ: ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಜನಪರ ಆರೋಗ್ಯ ಸೇವೆಗೆ ಚಾಲನೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk