30 C
Mumbai
April 24, 2026
Mumbai News Kannada
ಸುದ್ದಿ

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ





ಮಂಗಳೂರು: ಕಲಾಭಿ(ರಿ) ಮತ್ತು ಅರೆಹೊಳೆ ಪ್ರತಿಷ್ಠಾನವು ಜಂಟಿಯಾಗಿ ಮಂಗಳೂರಿನ ಬೊಂದೆಲ್ ನಲ್ಲಿ ಕಲಾಗ್ರಾಮ ಎಂಬ ನೂತನ ಕಲಾ ವೇದಿಕೆಯ ಉದ್ಘಾಟನೆಗೆ ಸಜ್ಜಾಗಿದೆ. ಈ ರಂಗ ಮಂದಿರವು ಕಲಾತ್ಮಕ ಪ್ರತಿಭೆಗಳಿಗೆ ಹೊಸ ತಳಹದಿಯನ್ನು ಒದಗಿಸುವುದರ ಜೊತೆಗೆ, ನಾಟಕ, ಯಕ್ಷಗಾನ, ಜನಪದ ಕಲೆ, ಸಂಗೀತ, ನೃತ್ಯ ಮತ್ತು ಇತರ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡುವ ಮಹತ್ವದ ಕೇಂದ್ರವಾಗಿ ರೂಪುಗೊಳ್ಳಲಿದೆ.

ಇದರ ಉದ್ಘಾಟನಾ ಸಮಾರಂಭವು ವಿಶ್ವ ರಂಗಭೂಮಿ ದಿನವಾದ ಮಾರ್ಚ್ 27, 2025, ಗುರುವಾರದಂದು ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಕಲಾಭಿ(ರಿ) ತಂಡದ ಕಲಾವಿದರಿಂದ ವಿಭಿನ್ನ ರಂಗ ಪ್ರಯೋಗವಾದ ಎ ಫ್ರೆಂಡ್ ಬಿಯೊಂಡ್ ದಿ ಫೆನ್ಸ್ ನಾಟಕ ಪ್ರದರ್ಶನಗೊಳ್ಳಲಿದೆ. ಈ ನಾಟಕವು ಈಗಾಗಲೇ ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ನಾಟಕೋತ್ಸವಗಳ್ಳಲ್ಲಿ ಪ್ರದರ್ಶನಗೊಂಡು ಜನಮನ್ನಣೆ ಗಳಿಸಿದೆ.

ಈ ನೂತನ ಕಲಾ ಕೇಂದ್ರವು ಯುವ ಕಲಾ ಪ್ರತಿಭೆಗಳಿಗೆ ಒಟ್ಟಾರೆಯಾಗಿ ಪ್ರೋತ್ಸಾಹ ನೀಡಲು, ರಂಗಭೂಮಿ ಅಭ್ಯಾಸದ ಹೊಸ ಆಯಾಮಗಳನ್ನು ಅನ್ವೇಷಿಸಿ ಪ್ರಾಯೋಗಿಸಲು ಹಾಗೂ ಕಲಾತ್ಮಕ ಸಂಸ್ಕೃತಿಯನ್ನು ಬೆಳೆಸಲು ಸಹಕಾರಿಯಾಗಲಿದೆ.



Related posts

ಶಿವಪುರ ಶ್ರೀ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರ ಸಮಾಲೋಚನಾ ಸಭೆ

Mumbai News Desk

ಇಂದು ನಡೆದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಮತ್ತು ವಿವಿಧ ಕ್ಷೇತ್ರಗಳ ಉಪಚುನಾವಣೆಯ ಮತದಾನದ ಪ್ರಕ್ರಿಯೆಯ ಕುರಿತಾದ ಸಮಗ್ರ ವರದಿ

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಶ್ರೀ ಸ್ವಾಮಿ ನಿತ್ಯಾನಂದ ಚಾರಿಟೇಬಲ್ ಟ್ರಸ್ಟ್, ಕಲ್ಯಾಣ್ ವತಿಯಿಂದ ಗಣೇಶಪುರಿಯಲ್ಲಿ  ಭಂಡಾರ ಸೇವೆ ಸಂಪನ್ನ

Mumbai News Desk