35.8 C
Karnataka
March 31, 2025
ಸುದ್ದಿ

ಮಂಗಳೂರಿಗೊಂದು ಹೊಸ ರಂಗ ಮಂದಿರ – ಕಲಾಗ್ರಾಮದ ಉದ್ಘಾಟನಾ ಸಮಾರಂಭ

ಮಂಗಳೂರು: ಕಲಾಭಿ(ರಿ) ಮತ್ತು ಅರೆಹೊಳೆ ಪ್ರತಿಷ್ಠಾನವು ಜಂಟಿಯಾಗಿ ಮಂಗಳೂರಿನ ಬೊಂದೆಲ್ ನಲ್ಲಿ ಕಲಾಗ್ರಾಮ ಎಂಬ ನೂತನ ಕಲಾ ವೇದಿಕೆಯ ಉದ್ಘಾಟನೆಗೆ ಸಜ್ಜಾಗಿದೆ. ಈ ರಂಗ ಮಂದಿರವು ಕಲಾತ್ಮಕ ಪ್ರತಿಭೆಗಳಿಗೆ ಹೊಸ ತಳಹದಿಯನ್ನು ಒದಗಿಸುವುದರ ಜೊತೆಗೆ, ನಾಟಕ, ಯಕ್ಷಗಾನ, ಜನಪದ ಕಲೆ, ಸಂಗೀತ, ನೃತ್ಯ ಮತ್ತು ಇತರ ಕಲಾ ಪ್ರಕಾರಗಳಿಗೆ ಪ್ರೋತ್ಸಾಹ ನೀಡುವ ಮಹತ್ವದ ಕೇಂದ್ರವಾಗಿ ರೂಪುಗೊಳ್ಳಲಿದೆ.

ಇದರ ಉದ್ಘಾಟನಾ ಸಮಾರಂಭವು ವಿಶ್ವ ರಂಗಭೂಮಿ ದಿನವಾದ ಮಾರ್ಚ್ 27, 2025, ಗುರುವಾರದಂದು ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದ ಬಳಿಕ ಕಲಾಭಿ(ರಿ) ತಂಡದ ಕಲಾವಿದರಿಂದ ವಿಭಿನ್ನ ರಂಗ ಪ್ರಯೋಗವಾದ ಎ ಫ್ರೆಂಡ್ ಬಿಯೊಂಡ್ ದಿ ಫೆನ್ಸ್ ನಾಟಕ ಪ್ರದರ್ಶನಗೊಳ್ಳಲಿದೆ. ಈ ನಾಟಕವು ಈಗಾಗಲೇ ರಾಷ್ಟೀಯ ಮತ್ತು ಅಂತಾರಾಷ್ಟ್ರೀಯ ನಾಟಕೋತ್ಸವಗಳ್ಳಲ್ಲಿ ಪ್ರದರ್ಶನಗೊಂಡು ಜನಮನ್ನಣೆ ಗಳಿಸಿದೆ.

ಈ ನೂತನ ಕಲಾ ಕೇಂದ್ರವು ಯುವ ಕಲಾ ಪ್ರತಿಭೆಗಳಿಗೆ ಒಟ್ಟಾರೆಯಾಗಿ ಪ್ರೋತ್ಸಾಹ ನೀಡಲು, ರಂಗಭೂಮಿ ಅಭ್ಯಾಸದ ಹೊಸ ಆಯಾಮಗಳನ್ನು ಅನ್ವೇಷಿಸಿ ಪ್ರಾಯೋಗಿಸಲು ಹಾಗೂ ಕಲಾತ್ಮಕ ಸಂಸ್ಕೃತಿಯನ್ನು ಬೆಳೆಸಲು ಸಹಕಾರಿಯಾಗಲಿದೆ.

Related posts

ಶಿಕ್ಷಣ ಮತ್ತು ಸಾಮಾಜಿಕ ರಂಗದ ಅನುಪಮ ಸಾಧಕ ಹೆಜಮಾಡಿ ಕೋಡಿ ಜಯಶೀಲ ಬಂಗೇರ ಅವರಿಗೆ ಸನ್ಮಾನ.

Mumbai News Desk

ಮಹಾಕುಂಭ ಮೇಳಕ್ಕೆ ಹರಿದುಬಂದ ಭಕ್ತ ಸಾಗರ: ತ್ರಿವೇಣಿ ಸಂಗಮದಲ್ಲಿ ಕಾಲ್ತುಳಿತ; ಹಲವರ ಸಾವು ಶಂಕೆ, ಅಮೃತಸ್ನಾನಕ್ಕೆ ತಾತ್ಕಾಲಿಕ ತಡೆ

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 ಪ್ರಕಟ, 69 ಜನರಿಗೆ ರಾಜ್ಯೋತ್ಸವ , 109 ಜನರಿಗೆ ಸಾಧಕ ಪ್ರಶಸ್ತಿ, ಮುಂಬೈಯ ಸಮಾಜ ಸೇವಕ ಸದಾಶಿವ ಶೆಟ್ಟಿ ಕನ್ಯಾಡಿಗೆ ಸಾಧಕ ಪ್ರಶಸ್ತಿ.ರಾಜ್ಯೋತ್ಸವ ಪ್ರಶಸ್ತಿ 2024

Mumbai News Desk

ಬಂಟ್ವಾಳ ವೀರ ವಿಕ್ರಮ ಜೋಡುಕರೆ ಕಂಬಳ,ಧಾರ್ಮಿಕ ಮುಖಂಡ ಡಾ. ಎಮ್ ‌ಜೆ ಪ್ರವೀಣ್ ಭಟ್ ಅವರಿಗೆ ಸನ್ಮಾನ,

Mumbai News Desk

ಆಯೋದ್ಯ ಶ್ರೀರಾಮ ಮಂದಿರದಲ್ಲಿ ಹರೀಶ್ ಪೂಜಾರಿ ಅವರಿಂದ ಸೇಕ್ಸೋಪೋನ್ ವಾದನ

Mumbai News Desk