28.4 C
Mumbai
March 7, 2026
Mumbai News Kannada
ಸುದ್ದಿ

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ





ಭಾರತೀಯ ರೈಲ್ವೆ, ಮುಂಬೈ ಮತ್ತು ಮಂಗಳೂರನ್ನು ನೇರವಾಗಿ ಸಂಪರ್ಕಿಸುವ ಹೊಸ ವಂದೇ ಭಾರತ್ ರೈಲನ್ನು ಪರಿಚಯಿಸಲು ತಯಾರಾಗಿದೆ. ಈಗ ಅಸ್ತಿತ್ವದಲ್ಲಿರುವ ಮುಂಬೈ – ಗೋವಾ ಮತ್ತು ಮಂಗಳೂರು – ಗೋವಾ ಒಂದೇ ಭಾರತ್ ಮಾರ್ಗವನ್ನು ವಿಲೀನಗೊಳಿಸುವ ಯೋಜನೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರಯಾಣದ ಸಮಯವನ್ನು ಕಡಿಮೆಮಾಡಲಿದೆ.
ಪ್ರಸ್ತುತ ಮುಂಬೈ ಗೋವಾ ವಂದೇ ಭಾರತ್ ರೈಲು ಮುಂಬೈಯಿಂದ ಬೆಳಗ್ಗೆ 5:25ಕ್ಕೆ ಹೊರಟು ಮಧ್ಯಾಹ್ನ 1.10ಕ್ಕೆ ಗೋವಾ ತಲುಪುತ್ತದೆ. ಹೊಸ ಯೋಜನೆ ಅಡಿಯಲ್ಲಿ ರೈಲು ಮುಂದುವರಿದು ಸಂಜೆ 6 ಗಂಟೆಗೆ ಮಂಗಳೂರು ತಲಪಲಿದೆ. ಅದೇ ರೀತಿ ಪ್ರಸ್ತುತ ಬೆಳಿಗ್ಗೆ 8:30 ಕ್ಕೆ ಹೊರಟು 1.10ಕ್ಕೆ ಗೋವಾ ತಲುಪುವ ಮಂಗಳೂರು- ಗೋವಾ ವಂದೇ ಭಾರತ್ ರೈಲು ಮುಂಬೈಗೆ ವಿಸ್ತರಿಸಲ್ಪಟ್ಟು ರಾತ್ರಿ 9ರ ತನಕ ಮುಂಬೈ ತಲುಪುತ್ತದೆ.
ಈ ಮಾರ್ಗ ವಿಸ್ತರಣೆಗೆ ಒಂದು ಪ್ರಮುಖ ಕಾರಣವೆಂದರೆ ಮಂಗಳೂರು – ಗೋವಾ ವಂದೇ ಭಾರತ್ ರೈಲು ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವುದು, ವರದಿಗಳ ಪ್ರಕಾರ ಪ್ರಯಾಣಿಕರ ಸಂಖ್ಯೆ ಶೇಕಡ 40ಕ್ಕಿಂತ ಕಡಿಮೆ ಇದ್ದು, ಇದು ಅತ್ಯಂತ ಕಡಿಮೆ ಬಳಕೆಯಲ್ಲಿರುವ ವಂದೇ ಭಾರತ್ ಸೇವೆಗಳಲ್ಲಿ ಒಂದಾಗಿದೆ.
ಈ ಯೋಜನೆಯಡಿ ವಂದೇ ಭಾರತ್ ಎಕ್ಸ್ಪ್ರೆಸ್ ಆರಂಭವಾದರೆ, ಪ್ರಯಾಣಕರು ಕೇವಲ 12 ಗಂಟೆಗಳಲ್ಲಿ ಮುಂಬೈ ಅಥವಾ ಮಂಗಳೂರು ತಲುಪಬಹುದು.
ಈ ಪ್ರಾಸ್ತಾವಿತ ವಿಸ್ತರಣೆಯು ಯಶಸ್ವಿಯಾದರೆ ಮುಂಬೈ- ಮಂಗಳೂರು ವಂದೇ ಭಾರತ್ ಕೊಂಕಣ ಕರಾವಳಿಯ ಪ್ರಯಾಣಿಕರಿಗೆ ವೇಗವಾದ ಮತ್ತು ಹೆಚ್ಚು ಪರಿಣಾಮಕಾರಿ ಪ್ರಯಾಣದ ಆಯ್ಕೆಯನ್ನು ಒದಗಿಸಬಹುದು. ಅದಾಗ್ಯೂ, ವಿಸ್ತೃತ ಮಾರ್ಗವು ಹೆಚ್ಚಿನ ಜನದಟ್ಟಣೆಯನ್ನು ಉಳಿಸಬಹುದೇ, ಮತ್ತು ಕಾರ್ಯಚರಣೆಯ ಅಡೆತಡೆಗಳನ್ನು ತಪ್ಪಿಸಬಹುದೇ ಎಂಬುದು ನಿಜವಾದ ಪರೀಕ್ಷೆಯಾಗಿದೆ.



Related posts

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Mumbai News Desk

ಕರ್ನಾಟಕ ಸಂಘ ಪನ್ವೆಲ್ ರಾಜ್ಯೋತ್ಸವ ದಿನಾಚರಣೆ .

Mumbai News Desk

ತುಳು ಕೂಟದ ಫೌಂಡೇಶನ್, ನಲ್ಲಸೋಪಾರ , ಶ್ರೀದೇವಿ ಯಕ್ಷಕಲಾ ನಿಲಯ ವಿರಾರ್-ನಲ್ಲಸೋಪರ  ವಾರ್ಷಿಕೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಮಂತ್ರಾಲಯ ಪರಿಮಳ’ ಪ್ರಶಸ್ತಿ ಪ್ರದಾನ

Mumbai News Desk

ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಸಂಸ್ಥಾಪಕ ಎನ್ ವಿನಯ ಹೆಗ್ಡೆ ನಿಧನ

Mumbai News Desk