July 23, 2026
Mumbai News Kannada
ಸುದ್ದಿ

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ








ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ ಎಸ್ ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರಾದ ದಿ. ಶ್ರೀ ರಾಘವ ಸುವರ್ಣರವರ ಧರ್ಮಪತ್ನಿ ಶ್ರೀಮತಿ ಕುಸುಮ ಸುವರ್ಣರವರು (76) ದಿನಾಂಕ 25-03-2025ರಂದು ಸ್ವಲ್ಪ ಸಮಯದ ಅನಾರೋಗ್ಯದಿಂದ ನಿಧನರಾದರು. ಮೃತರು ಧಾರ್ಮಿಕ ವಿಧಿವಿಧಾನಗಳನ್ನು ಅಳವಡಿಸಿಕೊಂಡು ಜನರಿಗೆ ಮಾರ್ಗದರ್ಶಕರಾಗಿದ್ದರು. ಮೃತರು ಒಂದು ಗಂಡು, ಮೂರು ಹೆಣ್ಣು ಮಕ್ಕಳನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಅವರ ನಿಧನಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್, ಮಾಜಿ ಸಚಿವರು ಅಭಯಚಂದ್ರ ಜೈನ್, ಮಾಜಿ ಸಚಿವರಾದ ವಿನಾಯಕ ಕುಮಾರ್‌ ಸೊರಕೆ, ಮೂಲ್ಕಿ ನಗರ ಪಂಚಾಯತ್‌ ಅಧ್ಯಕ್ಷ ಸತೀಶ್‌ ಅಂಚನ್, ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ವಾಮನ ಕೋಟ್ಯಾನ್ ಮಾಜಿ ಅಧ್ಯಕ್ಷರಾದ ಹರಿಶ್ಚಂದ್ರ ಪಿ ಸಾಲಿಯಾನ್, ಗೋಪಿನಾಥ ಪಡಂಗ, ಪ್ರಕಾಶ್ ಸುವರ್ಣ, ದನಂಜಯ ಮಟ್ಟು, ನಾರಾಯಣಗುರು ಸಮಾಜ ಸೇವಾ ಸಂಘ ಕೆ.ಎಸ್‌.ರಾವ್‌ ನಗರ ಇದರ ಅಧ್ಯಕ್ಷರಾದ ಮಹಾಬಲ ಸನಿಲ್, ಬಿಲ್ಲವ ಮುಖಂಡ ಜನಾರ್ದನ ಬಂಗೇರ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಅಸೀಫ್ ಇವರೆಲ್ಲರು ಸಂತಾಪ ವ್ಯಕ್ತಪಡಿಸಿದ್ದಾರೆ.



Related posts

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬೈ ವಾರ್ಷಿಕ ವಿಹಾರಕೂಟ ಮತ್ತು ಪ್ರತಿಭಾ ಪುರಸ್ಕಾರ

Mumbai News Desk

ಸಂಗೀತ ಲೋಕದ ಧ್ರುವತಾರೆ ಆಶಾ ಭೋಂಸ್ಲೆ ಇನ್ನಿಲ್ಲ: ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟ

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ಲಚ್ಚಿ ಪೂಜಾರಿ ನಿಧನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (18/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk