30 C
Mumbai
April 24, 2026
Mumbai News Kannada
ತುಳುನಾಡು

ಹೊಸ ಅಂಗಣ ತಿಂಗಳ ಕಾರ್ಯಕ್ರಮ : ಕಿಟ್ಟ ಪಂಬದರಿಗೆ ಸನ್ಮಾನ






ಮೂಲ್ಕಿ ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ಹಾಗೂ ಸಾಧಕರಿಗೆ ಗೌರವ ಕಾರ್ಯಕ್ರಮವು ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಮಾರ್ಚ್ 28 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ದೈವ ನರ್ತಕ ಕಿಟ್ಟ ಪಂಬದವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ.ಸಾ.ಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ ಹರಿಕೃಷ್ಣ ಪುನರೂರು ವಹಿಸಿದರು. ತುಳುನಾಡಿನಲ್ಲಿ ಬಹಳ ಮಂದಿ ದೈವ ನರ್ತಕರಿದ್ದು ಅವರು ತುಳು ಭಾಷೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ತುಳು ಶಬ್ದಗಳ ಅರ್ಥ ಹಾಗೂ ದೈವಗಳ ಪಾಡ್ಡನವನ್ನು ಜ್ಞಾಪಕ ಶಕ್ತಿಯಿಂದ ಹೇಳುತ್ತಾ ಬಂದಿದ್ದಾರೆ. ಇವರಲ್ಲಿರುವ ಭಾಷೆಯ ಪ್ರೇಮ ಇತರರಿಗೆ ಅನುಕರಣೆಯವಾಗಿದೆ. ಇಂತಹವರಿಗೆ ಸನ್ಮಾನ ಮಾಡುವುದು ಒಳ್ಳೆಯ ಕೆಲಸ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿದ್ದ ಮೂಲ್ಕಿ ಬ್ಯಾಂಕ್ ಆಪ್ ಬರೋಡಾ ಶಾಖೆಯ ಮ್ಯಾನೇಜರ್ ಸಚಿನ್ ಹೆಗ್ಡೆಯವರು ಹೊಸಂಗಣ ಪತ್ರಿಕೆಯು ಒಳ್ಳೆಯ ಸುದ್ದಿಗಳಿಂದ ಪ್ರತಿ ತಿಂಗಳು ಓದುಗರಿಗೆ ತಲುಪುತ್ತಿದೆ. ಮೂಲ್ಕಿಯ ಏಕೈಕ ಪತ್ರಿಕೆಯಾಗಿರುವ ಹೊಸ ಅಂಗಣವು ಇನ್ನೂ ಒಳ್ಳೆಯ ಸಾಹಿತ್ಯದಿಂದ ಜನರನ್ನು ತಲುಪಲಿ, ಏಲೆಯ ಮರೆಯಲಿರುವ ಸಾಧಕರನ್ನು ಗುರುತಿಸುವ ಕೆಲಸ ಪ್ಲೇಘನೀಯ ಎಂದು ಹೇಳಿದರು. ವೆಂಕಟೇಶ ಹೆಬ್ಬಾರ್, ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರು, ಹಬೀಬುಲ್ಲ. ಸುರಭಿಯ ಜೋನ್ ಕೋಡ್ರಸ್, ನಿವೃತ್ತ ಪ್ರಾಶುಂಪಾಲ ಶ್ಯಾಮ್ ಮಾಬೇನ್, ಹಳೆಯಂಡಿಯ ಬಂಕಿ ನಾಯಕ್, ಮೂಲ್ಕಿ ನಗರ ಪಂಚಾಯತಿಯ ಸ್ಥಾಯಿ ಸಮಿತಿಯ ಅಧ್ಯಕ್ಷ ಹರ್ಷರಾಜ ಶೆಟ್ಟಿ, ವಾಮನ ಕೋಟ್ಯಾನ್ ನಡಿಕುದ್ರು ಅತಿಕಾರಿ ಬೆಟ್ಟು ಗ್ರಾಮ ಪಂಚಾಯತಿ ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಹೊಸಅಂಗಣ ಸಂಪಾದಕ ಹರಿಶ್ಚಂದ್ರ ಪಿ ಸಾಲ್ಯಾನ್, ಉದ್ಯಮಿ ವಾಸುಪೂಜಾರಿ ಚಿತ್ರಾಪು, ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ,
ರವೀಶ್ ಕಾಮತ್ ರವರು ವಂದನಾರ್ಪಣೆ ಮಾಡಿದರು.



Related posts

ಉಡುಪಿ ಕೃಷ್ಣನಿಗೆ ‘ಪಾರ್ಥಸಾರಥಿ’ ಸುವರ್ಣ ರಥ ಸಮರ್ಪಣೆ

Mumbai News Desk

ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಕಾಪು : ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಮುಹೂರ್ತ, ಅ. 29ರ ತನಕ ಸ್ವರ್ಣ ಸಮರ್ಪಣೆಗೆ ಭಕ್ತರಿಗೆ ಅವಕಾಶ

Mumbai News Desk

ಮೂಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಸಂಸ್ಥೆಯಿಂದ ಅಂಗನವಾಡಿ ಮಕ್ಕಳಿಗೆ ಕ್ರೀಡಾ ಸಾಮಗ್ರಿ ಮತ್ತು ಕುರ್ಚಿಗಳ ಕೊಡುಗೆ

Mumbai News Desk

ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ನೂತನ ಮೊಕ್ತೆಸರರುಗಳು

Mumbai News Desk

ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ : ನವದುರ್ಗಾ ಲೇಖನ ಯಜ್ಞ ಸಂಕಲ್ಪ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk