30.5 C
Mumbai
June 8, 2026
Mumbai News Kannada
ಸುದ್ದಿ

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ





ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ​~ ಹೆಚ್ ಡುಂಡಿರಾಜ್

ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ.

ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ ಹೋ​ಮ್ ಸ್ಟೇ ಆವರಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

ಸಹಜವಾಗಿ ಬರೆದರೆ ಅದು ಕಾವ್ಯ ಮಯ, ಯಾರದೋ ಒತ್ತಾಯಕ್ಕೆ ಬರೆದರೆ ಕಾವ್ಯ ಮಾಯ , ದೊಡ್ಡ ದೊಡ್ಡ ಶಬ್ದ, ಪ್ರಾಸ, ಛಂದಸ್ಸು, ಲಯಬದ್ಧವಾಗಿ ಬರೆದದ್ದೂ ಕೆಲವೊಮ್ಮೆ ಕವಿತೆಗಳಾಗೋದಿಲ್ಲ. ಕವಿತೆ ಸರಳವಾಗಿದ್ದು ಕೇಳುಗರ, ಓದುಗರ ಗಮನ ಸೆಳೆಯುವಂತಿರಬೇಕು. ಹಾಡು, ನಾಟಕ ಬರೆಯುವವರಿಗೆ ಇಂದು ​ಪ್ರೋತ್ಸಾಹ ವಿರಳವಾಗಿದೆ. ನಳ್ಳಿ ತಿರುಗಿಸಿದರೆ ನೀರು ಬರೋದಿಲ್ಲ. ಆದರೆ ವಾಟ್ಸ್ಯಾಪ್ ಆನ್ ಮಾಡಿದರೆ ನೂರಾರು ಕವಿತೆಗಳು ಬರುತ್ತವೆ​. ಕವಿತೆ ತಪಸ್ಸು, ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ಎಂದು ಹೇಳಿದರು.

​ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ​ಪ್ರೊಫಸರ್ ಶಂಕರ್, ಉದ್ಯಮಿ ವಿಶ್ವನಾಥ ಶೆಣೈ, ಲೇಖಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪಸ್ಥಿತರಿದ್ದರು.
ಲಹರಿ ಪ್ರಾರ್ಥಿಸಿದರು. ಶಿಲ್ಪಾ ಜೋಶಿ ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ​ ಕಸಾಪ ಘಟಕ ಅಧ್ಯಕ್ಷ ರವಿರಾಜ​ ಎಚ್. ಪಿ. ಪ್ರಾಸ್ತಾವಿಕ ಮಾತನಾಡಿದರು. ಜನಾರ್ದನ ಕೊಡವೂರು ವಂದಿಸಿದರು.



Related posts

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ಖಾರ್ ಪೂರ್ವ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಗೌರವ ಪ್ರಧಾನ ಕಾರ್ಯದರ್ಶಿಯಾದ ಯೋಗೇಶ್ ಕೆ. ಹೆಜ್ಮಾಡಿ ಹಾಗೂ ಅವರ ಧರ್ಮಪತ್ನಿಯವರಾದ ಲೀಲಾವತಿ ವೈ. ಹೆಜ್ಮಾಡಿ* ಯವರು ದಾಂಪತ್ಯ ಜೀವನದ ಸುವರ್ಣ ಮಹೋತ್ಸವಕ್ಕೆ ಪಾದಾರ್ಪಣೆ

Mumbai News Desk

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk

ಕೇಂದ್ರ ಬಜೆಟ್ 2026 : ವಿಕಸಿತ ಭಾರತ – 2047ಕ್ಕೆ ಭದ್ರ ಬುನಾದಿ

Mumbai News Desk

ಶ್ರೀ ರಾಮಲಲ್ಲಾನ ಅಭಿಷೇಕಕ್ಕಾಗಿ ಸಂಗ್ರಹಿಸಿದ ಕಾವೇರಿ ತೀರ್ಥಕ್ಕೆ, ಜ.15ರಂದು, ಶ್ರೀ ಕ್ಷೇತ್ರ ಶಂಕರಪುರ ಮಠದಲ್ಲಿ ವಿಶೇಷ ಪೂಜೆ.

Mumbai News Desk