32 C
Mumbai
March 7, 2026
Mumbai News Kannada
ಸುದ್ದಿ

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ





ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ​~ ಹೆಚ್ ಡುಂಡಿರಾಜ್

ಪ್ರತಿಭೆ, ಸ್ಛೂರ್ತಿ ಎರಡೂ ಕವಿಗೆ ಅಗತ್ಯವಿದ್ದು ಕಾವ್ಯ ಸಂವೇದನೆ ಬೆಳೆಸಿಕೊಳ್ಳದಿದ್ದರೆ ಉತ್ತಮ ಕವಿತೆ ರಚನೆಯಾಗದು ಎಂದು ಕವಿ ಎಚ್. ಡುಂಡಿರಾಜ್ ಹೇಳಿದ್ದಾರೆ.

ಅವರು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ​, ಉಡುಪಿ ತಾಲೂಕು ಘಟಕ, ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಆಶ್ರಯದಲ್ಲಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ ತಂಬೂರಿ ಹಾಗೂ ಕಾಯ ತಂಬೂರಿ ನಾಟಕ ಕೃತಿಯನ್ನು ಕುಂಜಿಬೆಟ್ಟು ಏಡನ್ ಇನ್ ಹೋ​ಮ್ ಸ್ಟೇ ಆವರಣದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

ಸಹಜವಾಗಿ ಬರೆದರೆ ಅದು ಕಾವ್ಯ ಮಯ, ಯಾರದೋ ಒತ್ತಾಯಕ್ಕೆ ಬರೆದರೆ ಕಾವ್ಯ ಮಾಯ , ದೊಡ್ಡ ದೊಡ್ಡ ಶಬ್ದ, ಪ್ರಾಸ, ಛಂದಸ್ಸು, ಲಯಬದ್ಧವಾಗಿ ಬರೆದದ್ದೂ ಕೆಲವೊಮ್ಮೆ ಕವಿತೆಗಳಾಗೋದಿಲ್ಲ. ಕವಿತೆ ಸರಳವಾಗಿದ್ದು ಕೇಳುಗರ, ಓದುಗರ ಗಮನ ಸೆಳೆಯುವಂತಿರಬೇಕು. ಹಾಡು, ನಾಟಕ ಬರೆಯುವವರಿಗೆ ಇಂದು ​ಪ್ರೋತ್ಸಾಹ ವಿರಳವಾಗಿದೆ. ನಳ್ಳಿ ತಿರುಗಿಸಿದರೆ ನೀರು ಬರೋದಿಲ್ಲ. ಆದರೆ ವಾಟ್ಸ್ಯಾಪ್ ಆನ್ ಮಾಡಿದರೆ ನೂರಾರು ಕವಿತೆಗಳು ಬರುತ್ತವೆ​. ಕವಿತೆ ತಪಸ್ಸು, ಋಷಿಯಾಗದವ, ಖುಷಿ ಇಲ್ಲದವ ಕವಿಯಾಗಲಾರ ಎಂದು ಹೇಳಿದರು.

​ಪ್ರೊ. ಮುರಳೀಧರ ಉಪಾಧ್ಯ ಹಿರಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಸಂಸ್ಕøತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷ ​ಪ್ರೊಫಸರ್ ಶಂಕರ್, ಉದ್ಯಮಿ ವಿಶ್ವನಾಥ ಶೆಣೈ, ಲೇಖಕಿ ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಪಸ್ಥಿತರಿದ್ದರು.
ಲಹರಿ ಪ್ರಾರ್ಥಿಸಿದರು. ಶಿಲ್ಪಾ ಜೋಶಿ ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು. ​ ಕಸಾಪ ಘಟಕ ಅಧ್ಯಕ್ಷ ರವಿರಾಜ​ ಎಚ್. ಪಿ. ಪ್ರಾಸ್ತಾವಿಕ ಮಾತನಾಡಿದರು. ಜನಾರ್ದನ ಕೊಡವೂರು ವಂದಿಸಿದರು.



Related posts

ಮುಲ್ಕಿಯ ಜನಪ್ರಿಯ ಡ್ರೈ ಫ್ರುಟ್ಸ್ ಸ್ಟೋರ್, ಕ್ಯಾನ್ ಕೋಸ್ (KANCOS)ವತಿಯಿಂದ “ಗಿವ್ ಅವೇ” ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Mumbai News Desk

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk

ಸಮಾಜ ಸೇವಕ ,ನಾನಿಲ್ತಾರ್ ಅಭಿಮಾನಿ ಬಳಗ ಮುಂಬೈ. ಅಧ್ಯಕ್ಷ ಹರೀಶ್  ಮೂಲ್ಯ ದಂಪತಿಯ ವೈವಾಹಿಕ ಜೀವನದ ಬೆಳ್ಳಿ ಹಬ್ಬ ಸಂಭ್ರಮಾಚರಣೆ 

Mumbai News Desk

ವಜ್ರೇಶ್ವರಿ ಶಿಕ್ಷಣ ಪ್ರಸಾರಕ ಮಂಡಳಿ, ಸುರೇಂದ್ರ ಕಲ್ಯಾಣ್ ಪುರ್ ನಿರ್ಮಿತ ನೂತನ ಕಟ್ಟಡದ ಉದ್ಘಾಟನೆ

Mumbai News Desk

ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ, 20ಕ್ಕೂ ಹೆಚ್ಚು ಜನರಿಗೆ ಗಾಯ, 11 ಸಾವು

Mumbai News Desk

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025ಕ್ಕೆ ಚಾಲನೆ

Mumbai News Desk