September 6, 2026
Mumbai News Kannada
ಪ್ರಕಟಣೆ

ಎ 4: ಮೀರಾ – ಭಾಯಂದರ್ ತುಳು – ಕನ್ನಡಿರಿಂದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರಿಗೆ ಸನ್ಮಾನ.






ತುಳು – ಕನ್ನಡಿಗ 200 ಕ್ಕಿಂತ ಹೆಚ್ಚು ಕಲಾವಿದರಿಂದ ಯಕ್ಷ-ಗಾನ- ನಾಟ್ಯ ಸಂಭ್ರಮ.

ಮೀರಾ ರೋಡ್ :. ಪ್ರತಾಪ್ ಸರ್ ನಾಯಕ್ ಫೌಂಡೇಶನ್ ಆಶ್ರಯದಲ್ಲಿ ಆಯೋಜಿಸಿರುವ
ಚೈತ್ರ ನವರಾತ್ರೋತ್ಸವ ಕಾರ್ಯಕ್ರಮದಲ್ಲಿ ಮೀರಾ – ಭಾಯಂದರ್ ಸಂಘಟಕ ಬಂಟರ ಸಂಘ, ಮುಂಬೈಯ ಬಂಟರ ಸಂಘದ ಜೊತೆ ಕಾರ್ಯದರ್ಶಿ ಗಿರೀಶ್ ಶೆಟ್ಟಿ ತೆಳ್ಳಾರು ಮತ್ತು ಮೀರಾ – ಭಾಯಂದರ್ ಭಾರತೀಯ ಜನತಾ ಪಕ್ಷದ ಮುಖಂಡ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಗುತ್ತು ನೇತೃತ್ವದಲ್ಲಿ ತುಳು ಕನ್ನಡಿಗರ ಒಗ್ಗಟ್ಟಿನಲ್ಲಿ ಎ. 4 ರಂದು ಶುಕ್ರವಾರ ಸಂಜೆ ಗಂಟೆ 6:00 ರಿಂದ 9:00ರ ವರೆಗೆ
ನಾಮ್ಹಾರ್ ಗೋಖಲೆ ಮೈದಾನ, ಬೆವರ್ಲಿ ಪಾರ್ಕ್‌, ಆ‌ರ್.ಬಿ.ಕೆ ಶಾಲೆ ಹತ್ತಿರ, ಮೀರಾ ಭಾಯಂದರ್ ಇಲ್ಲಿ ಮಹಾರಾಷ್ಟ್ರದ ನೂತನ
ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಇವರಿಗೆವಿಶೇಷ ಸನ್ಮಾನ ಹಾಗೂ ತುಳು – ಕನ್ನಡಿಗ 200 ಕ್ಕಿಂತ ಹೆಚ್ಚು ಕಲಾವಿದರಿಂದ ಯಕ್ಷ-ಗಾನ ನಾಟ್ಯ ಸಂಭ್ರಮ ನಡೆಯಲಿದೆ.
ಮೀರಾ – ಭಾಯಂದರ್ ನ ತುಳು – ಕನ್ನಡಿಗರು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ, ಹೋಟೆಲ್ ಉದ್ಯಮಿಗಳ, ರಾಜಕೀಯ ನಾಯಕರ ಉಪಸ್ಥಿತಿಯಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ.
ಪ್ರಪ್ರಥಮ ಬಾರಿಗೆ ಸುಮಾರು 200 ತುಳು ಕನ್ನಡದ ಕಲಾವಿದರು ತಮ್ಮ ನೃತ್ಯ ಪ್ರದರ್ಶನವನ್ನು ನೀಡಲಿದ್ದಾರೆ.
ಮೀರಾ – ಭಾಯಂದರ್ ನ ಜನಪ್ರಿಯ ಶಾಸಕರಾಗಿ ತುಳು ಕನ್ನಡಿಗರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಾ ಬಂದಿರುವ ಪ್ರತಾಪ್ ಸರ್ ನಾಯಕ್ ಈ ಬಾರಿಯ ಮಹಾರಾಷ್ಟ್ರ ಸರಕಾರದ ಆಡಳಿತದಲ್ಲಿ ಸಾರಿಗೆ ಸಚಿವರಾಗಿದ್ದು ಅವರನ್ನು ಸನ್ಮಾನಿಸಲಾಗುವುದು.
ಕಾರ್ಯಕ್ರಮದ ಕೊನೆಯಲ್ಲಿ ಪ್ರೀತಿ ಭೋಜನದ ವ್ಯವಸ್ಥೆ ಮಾಡಲಾಗಿದೆ.
ತುಳು ಕನ್ನಡಿಗರು ಈ ಕಾರ್ಯಕ್ರಮದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಸಂಘಟಕರಾದಗಿರೀಶ್ ಶೆಟ್ಟಿ ತೆಳ್ಳಾರು, ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಗುತ್ತು ಹಾಗೂ ಮೀರಾ- ಭಾಯಂದರ್ ನ ತುಳು ಕನ್ನಡಿಗರು ವಿನಂತಿಸಿಕೊಂಡಿದ್ದಾರೆ.



Related posts

ಗಣೇಶಪುರಿ ಶ್ರೀ ನಿತ್ಯಾನಂದ ಬಾಬಾ ದರ್ಶನದಲ್ಲಿ ತಾತ್ಕಾಲಿಕ ಬದಲಾವಣೆ: ವಿಗ್ರಹ ನವೀಕರಣ ಹಿನ್ನೆಲೆ ಏಪ್ರಿಲ್ 27 ರಿಂದ ದರ್ಶನ ಸ್ಥಗಿತ

Mumbai News Desk

ಕನ್ನಡ ಹಾಗೂ ಶಾಸ್ತ್ರೀಯ ಗಾಯನಕ್ಕೆ ವೇದಿಕೆ; ಮೈಸೂರು ಅಸೋಸಿಯೇಷನ್‌ನಿಂದ ಸಂಗೀತ ಸ್ಪರ್ಧೆ

Mumbai News Desk

ಜ. 11 ರಂದು ಮುಂಬಯಿಯಲ್ಲಿ ಶ್ರೀ ಸತ್ಯಧರ್ಮ ದೇವೀ ದೇವಸ್ಥಾನ ಮುಕ್ಕ, ಮಂಗಳೂರು ಇದರ ಜೀರ್ಣೋದ್ದಾರ ಹಾಗೂ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನಾ ಸಭೆ.

Mumbai News Desk

ಶ್ರೀ ಮಹಾವಿಷ್ಣು ಮಂದಿರದಲ್ಲಿ ಮಾರ್ಚ್ 16 ಶನಿವಾರ ವಾರ್ಷಿಕ ಸತ್ಯನಾರಾಯಣ ಮಹಾಪೂಜೆ ಹಾಗೂ ಸಾಮೂಹಿಕ ಶನಿ ಪೂಜೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk

ಎ. 6 ರಂದು ನಗರದ ಹೆಸರಾಂತ ಕನ್ನಡ ಮಾಸಿಕ ಛಾಯಾಕಿರಣ ಪತ್ರಿಕೆಯ ದಶಮಾನೋತ್ಸವ

Mumbai News Desk