34.2 C
Karnataka
April 15, 2025
ಸುದ್ದಿ

ಪೊಲಿಪು ಶ್ರೀಧರ್ ಕಾಂಚನ್ ನಿಧನ




ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ಸಲ್ಲಿಸಿದ ಮೋಗವೀರ ಸಮಾಜದ ಮುಂದಾಳು ಶ್ರೀಧರ್ ಕಾಂಚನ್ (69)ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಎ. 15) ಮಧ್ಯಾಹ್ನ ನಿಧನಹೊಂದಿದರು.

ಅವರು ಪೊಲಿಪು ಮೊಗವೀರ ಸಭಾದ ಅಧ್ಯಕ್ಷರಾಗಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಸರಕಾರದ ನಾಮ ನಿರ್ದೇಶನ ಟ್ರಸ್ಟಿಯಾಗಿ, ಕಾಂಚನ್ ಮೂಲಸ್ಥಾನ ಪೊಲಿಪು ಇದರ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಓರ್ವ ಅಪ್ರತಿಮ ಹಾಸ್ಯ ಕಲಾವಿದರಾದ ಅವರು ಲಕ್ಷ್ಮೀ ನಾರಾಯಣ ಕಲಾವೃಂದ, ಹಾಗೂ ಇತರ ನಾಟಕ ತಂಡಗಳಲ್ಲಿ ತನ್ನ ಹಾಸ್ಯಭಿನಯದ ಮೂಲಕ ಕಲಾ ರಸಿಕರ ಮನಗೆದ್ದಿದ್ದರು.
ಶ್ರೀಧರ್ ಕಾಂಚನ್ ಅವರ ನಿಧನಕ್ಕೆ ಕಾಪು ಶಾಸಕ
ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪೊಲಿಪು ಮೊಗವೀರ ಸಭಾದ ಮುಂಬೈ ಶಾಖೆಯ ಪದಾಧಿಕಾರಿಗಳು, ಸದಸ್ಯರು, ಪೋಲಿಪು ಶಾಲಾ ಹಳೇ ವಿದ್ಯಾರ್ಥಿ ಸಂಘ ಮುಂಬೈಯ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.

Related posts

ವಿಧಾನ ಪರಿಷತ್ ಉಪಚುನಾವಣೆ – ಬಿಜಿಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mumbai News Desk

ಐಸಿಎಸ್ ಸಿ  10 ತರಗತಿಯ ಫಲಿತಾಂಶ – ಪೂರ್ಣ ಶ್ರೀಧರ ಭಂಡಾರಿ.ಶೇ  98.2% ಅಂಕ 

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ

Mumbai News Desk

ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ ಮುಂಬಯಿ ವಿಭಾಗದ ಕಾರ್ಯದರ್ಶಿಯಾಗಿ ಮಹಾದೇವ ಪೂಜಾರಿ ಆಯ್ಕೆ

Mumbai News Desk

ಯುಎಇ ಬಂಟ್ಸ್ ನ  “ಕ್ರೀಡಾ ಉತ್ಸವ -2025”

Mumbai News Desk