30.9 C
Mumbai
June 8, 2026
Mumbai News Kannada
ಸುದ್ದಿ

ಪೊಲಿಪು ಶ್ರೀಧರ್ ಕಾಂಚನ್ ನಿಧನ






ಸಮಾಜದ ವಿವಿಧ ಕ್ಷೇತ್ರಗಳಲ್ಲಿ ತನ್ನ ಸೇವೆಯನ್ನು ಸಲ್ಲಿಸಿದ ಮೋಗವೀರ ಸಮಾಜದ ಮುಂದಾಳು ಶ್ರೀಧರ್ ಕಾಂಚನ್ (69)ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು (ಎ. 15) ಮಧ್ಯಾಹ್ನ ನಿಧನಹೊಂದಿದರು.

ಅವರು ಪೊಲಿಪು ಮೊಗವೀರ ಸಭಾದ ಅಧ್ಯಕ್ಷರಾಗಿ, ಕಾಪು ಹೊಸ ಮಾರಿಗುಡಿ ದೇವಸ್ಥಾನದ ಸರಕಾರದ ನಾಮ ನಿರ್ದೇಶನ ಟ್ರಸ್ಟಿಯಾಗಿ, ಕಾಂಚನ್ ಮೂಲಸ್ಥಾನ ಪೊಲಿಪು ಇದರ ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಓರ್ವ ಅಪ್ರತಿಮ ಹಾಸ್ಯ ಕಲಾವಿದರಾದ ಅವರು ಲಕ್ಷ್ಮೀ ನಾರಾಯಣ ಕಲಾವೃಂದ, ಹಾಗೂ ಇತರ ನಾಟಕ ತಂಡಗಳಲ್ಲಿ ತನ್ನ ಹಾಸ್ಯಭಿನಯದ ಮೂಲಕ ಕಲಾ ರಸಿಕರ ಮನಗೆದ್ದಿದ್ದರು.
ಶ್ರೀಧರ್ ಕಾಂಚನ್ ಅವರ ನಿಧನಕ್ಕೆ ಕಾಪು ಶಾಸಕ
ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪೊಲಿಪು ಮೊಗವೀರ ಸಭಾದ ಮುಂಬೈ ಶಾಖೆಯ ಪದಾಧಿಕಾರಿಗಳು, ಸದಸ್ಯರು, ಪೋಲಿಪು ಶಾಲಾ ಹಳೇ ವಿದ್ಯಾರ್ಥಿ ಸಂಘ ಮುಂಬೈಯ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ವಸಯಿ ತಾಲೂಕ ಹೋಟೆಲ್ ಎಸೋಸಿಯೇಶನಿಂದ  ಪ್ರತಿಭಟನೆ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಮಂಗಳೂರಿನ ಕುಲಾಲ ಭವನ ಲೋಕಾರ್ಪಣೆ; 

Mumbai News Desk

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಿಂದ ಯೋಗಿ ಆದಿತ್ಯನಾಥ್ ಇವರ ಭೇಟಿ.

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk