28.4 C
Mumbai
March 7, 2026
Mumbai News Kannada
ಸುದ್ದಿ

ಓಟಗಾರ ಬಾಕಿಯಾದರೂ ಬಹುಮಾನ ಗೆದ್ದ ಹೊಸ್ಮಾರು ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟರ ಕೋಣಗಳು. ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಗುರುಪುರ ಕಂಬಳ.





—–

ಮಂಗಳೂರು, ಎ. 17: ಕೋಣಗಳಿಗೆ ಕಟ್ಟಿದ್ದ ನೇಗಿಲು ಕಳಚಿ ಬಿದ್ದು ಓಟಗಾರ ಬಾಕಿಯಾದರೂ ಕೋಣಗಳು  ಶಿಸ್ತಿನಿಂದ ಓಡಿ ಪ್ರಥಮ ಬಹುಮಾನ ಪಡೆದ ಅಪರೂಪದ ಸನ್ನಿವೇಶಕ್ಕೆ ಗುರುಪುರದ ‘ಮೂಳೂರು-ಅಡ್ಡರು’ ಜೋಡುಕರೆ ಕಂಬಳ ಸಾಕ್ಷಿಯಾಯಿತು.

ಆಗಿದ್ದೇನು?

ನೇಗಿಲು ಹಿರಿಯ ವಿಭಾಗದ ಪ್ರಿಕ್ವಾರ್ಟರ್ ಫೈನಲ್ ಪಂದ್ಯದ ‘ಚಾನ್ಸ್’ ವಿಭಾಗ ಆರಂಭವಾಯಿತು. ಹೊಸ್ಮಾರು ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟರ ‘ಬಿ’ ಕೋಣಗಳು (‘ಬಾರ್ಗಿ’ ಹಾಗೂ ‘ಬೊಳ್ಳೆ’ ಕೋಣಗಳು) ‘ಅದ್ದೂರು’ ಕರೆಯಲ್ಲಿತ್ತು. ಬಂಬ್ರಾಣಬೈಲು ವಂದಿತ್ ಶೆಟ್ಟಿ ಕೋಣ ಓಡಿಸಲು ತಯಾರಾಗಿದ್ದರು. ಮಾಣಿ ಸಾಗು ತನ್ವಿ ಶೆಟ್ಟಿ (ಮಿನ್ನು ಹಾಗೂ ಸಂತು ಕೋಣಗಳು) ಅವರ ಕೋಣಗಳು ‘ಮೂಳೂರು’ ಕರೆಯಲ್ಲಿತ್ತು. ಎರಡೂ ಕರೆಯ ಕೋಣಗಳು ಓಟಕ್ಕೆ ಅಣಿಯಾಗಿದ್ದವು

ಆಗ ‘ಫ್ಲ್ಯಾಗ್’ ಎತ್ತಿ ಕೋಣಗಳ ಓಟಕ್ಕೆ ಸೂಚನೆಯೂ ಬಂತು. ಆದರೆ ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟಿ ಅವರ ಕೋಣಗಳ ನೇಗಿಲು ತುಂಡಾಯಿತು. ಓಟಗಾರ ಬಂಬ್ರಾಣ ವಂದಿತ್ ಶೆಟ್ಟಿ ಅವರ ಕೈಯಲ್ಲೇ ನೇಗಿಲು ಉಳಿಯಿತು. ಓಟಗಾರನಿಗೂ ಏನೂ ಮಾಡಲು ಆಗಲಿಲ್ಲ. ಆದರೆ ಜೋಡಿ ಕೋಣಗಳು ಮಾತ್ರ (‘ಬಾರ್ಗಿ’ ಹಾಗೂ ‘ಬೊಳ್ಳೆ)

ಸ್ವಲವೂ ಗೊಂದಲವಿಲ್ಲದೆ ಓಟ ಮುಂದುವರಿಸಿತು. ವೇಗದ ಓಟದಲ್ಲೇ ಸಾಗಿದ ಕೋಣಗಳು ಪ್ರತಿಸ್ಪರ್ಧಿ ಕೋಣಗಳ ಎದುರಲ್ಲಿ ಗೆಲುವಿನ ದಾಖಲೆ ಬರೆದವು.

ವಿಶೇಷವೆಂದರೆ, ಇದೇ ಕೋಣಗಳು ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯಿತು.

ಹಿಂದೆಯೂ ನಡೆದಿತ್ತು

ಈ ಹಿಂದೆ 1981ರಲ್ಲಿ ಕೊಂಬ್ರಬೈಲು ಅಮ್ಮು ಪೂಜಾರಿ ಅವರ ಜೋಡಿ ಕೋಣಗಳು ನೇಗಿಲು ಹಿರಿಯ ವಿಭಾಗದ ಫೈನಲ್ ಪಂದ್ಯದಲ್ಲಿ ನೇಗಿಲು ಓಟಗಾರನ ಕೈತಪ್ಪಿದರೂ ಕೇವಲ ಕೋಣಗಳೇ ಓಡುವ ಮೂಲಕ ಅಂದು ಪ್ರಥಮ ಸ್ಥಾನ ಬಂದಿರುವುದನ್ನು ಕಂಬಳಾಭಿಮಾನಿಗಳು ನೆನಪು ಮಾಡುತ್ತಾರೆ.



Related posts

ನೈರುತ್ಯ ಪದವೀಧರ ಕ್ಷೇತ್ರ ಚುನಾವಣೆ – ಬಿಜೆಪಿಯ ಡಾ. ಧನಂಜಯ ಸರ್ಜಿ ಗೆ ಭಾರಿ ಗೆಲುವು ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ ಸೋಲು.

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಕಲಾಪೋಷಕ .ಉದ್ಯಮಿ ಕೆ.ಕೆ. ಶೆಟ್ಟಿ ಅಹ್ಮದ್ ನಗರರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.

Mumbai News Desk

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

ಮೈತ್ರಿ ಮಲ್ಲಿಗೆ ಮಿಸ್ಸ್ ಬ್ಯೂಟಿಫುಲ್ ಐಸ್ ಪ್ರಶಸ್ತಿ, 200ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಸ್ಪರ್ಧಿಗಳಿದ್ದ ಕಣದಲ್ಲಿ ರಾಜ್ಯಕ್ಕೆ ಪ್ರಶಸ್ತಿ ಗೆದ್ದು ಕೊಟ್ಟ ಏಕೈಕ ಸಾಧಕಿ

Mumbai News Desk