September 6, 2026
Mumbai News Kannada
ಸುದ್ದಿ

ಓಟಗಾರ ಬಾಕಿಯಾದರೂ ಬಹುಮಾನ ಗೆದ್ದ ಹೊಸ್ಮಾರು ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟರ ಕೋಣಗಳು. ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾದ ಗುರುಪುರ ಕಂಬಳ.





—–

ಮಂಗಳೂರು, ಎ. 17: ಕೋಣಗಳಿಗೆ ಕಟ್ಟಿದ್ದ ನೇಗಿಲು ಕಳಚಿ ಬಿದ್ದು ಓಟಗಾರ ಬಾಕಿಯಾದರೂ ಕೋಣಗಳು  ಶಿಸ್ತಿನಿಂದ ಓಡಿ ಪ್ರಥಮ ಬಹುಮಾನ ಪಡೆದ ಅಪರೂಪದ ಸನ್ನಿವೇಶಕ್ಕೆ ಗುರುಪುರದ ‘ಮೂಳೂರು-ಅಡ್ಡರು’ ಜೋಡುಕರೆ ಕಂಬಳ ಸಾಕ್ಷಿಯಾಯಿತು.

ಆಗಿದ್ದೇನು?

ನೇಗಿಲು ಹಿರಿಯ ವಿಭಾಗದ ಪ್ರಿಕ್ವಾರ್ಟರ್ ಫೈನಲ್ ಪಂದ್ಯದ ‘ಚಾನ್ಸ್’ ವಿಭಾಗ ಆರಂಭವಾಯಿತು. ಹೊಸ್ಮಾರು ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟರ ‘ಬಿ’ ಕೋಣಗಳು (‘ಬಾರ್ಗಿ’ ಹಾಗೂ ‘ಬೊಳ್ಳೆ’ ಕೋಣಗಳು) ‘ಅದ್ದೂರು’ ಕರೆಯಲ್ಲಿತ್ತು. ಬಂಬ್ರಾಣಬೈಲು ವಂದಿತ್ ಶೆಟ್ಟಿ ಕೋಣ ಓಡಿಸಲು ತಯಾರಾಗಿದ್ದರು. ಮಾಣಿ ಸಾಗು ತನ್ವಿ ಶೆಟ್ಟಿ (ಮಿನ್ನು ಹಾಗೂ ಸಂತು ಕೋಣಗಳು) ಅವರ ಕೋಣಗಳು ‘ಮೂಳೂರು’ ಕರೆಯಲ್ಲಿತ್ತು. ಎರಡೂ ಕರೆಯ ಕೋಣಗಳು ಓಟಕ್ಕೆ ಅಣಿಯಾಗಿದ್ದವು

ಆಗ ‘ಫ್ಲ್ಯಾಗ್’ ಎತ್ತಿ ಕೋಣಗಳ ಓಟಕ್ಕೆ ಸೂಚನೆಯೂ ಬಂತು. ಆದರೆ ಸೂರ್ಯಶ್ರೀ ರತ್ನಾ ಸದಾಶಿವ ಶೆಟ್ಟಿ ಅವರ ಕೋಣಗಳ ನೇಗಿಲು ತುಂಡಾಯಿತು. ಓಟಗಾರ ಬಂಬ್ರಾಣ ವಂದಿತ್ ಶೆಟ್ಟಿ ಅವರ ಕೈಯಲ್ಲೇ ನೇಗಿಲು ಉಳಿಯಿತು. ಓಟಗಾರನಿಗೂ ಏನೂ ಮಾಡಲು ಆಗಲಿಲ್ಲ. ಆದರೆ ಜೋಡಿ ಕೋಣಗಳು ಮಾತ್ರ (‘ಬಾರ್ಗಿ’ ಹಾಗೂ ‘ಬೊಳ್ಳೆ)

ಸ್ವಲವೂ ಗೊಂದಲವಿಲ್ಲದೆ ಓಟ ಮುಂದುವರಿಸಿತು. ವೇಗದ ಓಟದಲ್ಲೇ ಸಾಗಿದ ಕೋಣಗಳು ಪ್ರತಿಸ್ಪರ್ಧಿ ಕೋಣಗಳ ಎದುರಲ್ಲಿ ಗೆಲುವಿನ ದಾಖಲೆ ಬರೆದವು.

ವಿಶೇಷವೆಂದರೆ, ಇದೇ ಕೋಣಗಳು ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆಯಿತು.

ಹಿಂದೆಯೂ ನಡೆದಿತ್ತು

ಈ ಹಿಂದೆ 1981ರಲ್ಲಿ ಕೊಂಬ್ರಬೈಲು ಅಮ್ಮು ಪೂಜಾರಿ ಅವರ ಜೋಡಿ ಕೋಣಗಳು ನೇಗಿಲು ಹಿರಿಯ ವಿಭಾಗದ ಫೈನಲ್ ಪಂದ್ಯದಲ್ಲಿ ನೇಗಿಲು ಓಟಗಾರನ ಕೈತಪ್ಪಿದರೂ ಕೇವಲ ಕೋಣಗಳೇ ಓಡುವ ಮೂಲಕ ಅಂದು ಪ್ರಥಮ ಸ್ಥಾನ ಬಂದಿರುವುದನ್ನು ಕಂಬಳಾಭಿಮಾನಿಗಳು ನೆನಪು ಮಾಡುತ್ತಾರೆ.



Related posts

*ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಹರಿಶ್ಚಂದ್ರ ಹೆಜಮಾಡಿ ಇನ್ನಿಲ್ಲ

Mumbai News Desk

ಸಾಧಕ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಉಡುಪಿಯಲ್ಲಿ ಭವ್ಯ ಸನ್ಮಾನ: ದೇಶದ ಭವಿಷ್ಯ ಕಟ್ಟಲು ಮಕ್ಕಳಿಗೆ ಸಂಸ್ಕಾರ ಅಗತ್ಯ – ಶ್ರೀ ಶೀರೂರು ಶ್ರೀಗಳು

Mumbai News Desk

ಭಾರತ್ ಬ್ಯಾಂಕ್ ನ ಕಾರ್ಯಧ್ಯಕ್ಷ ಸೂರ್ಯಕಾಂತ್ ಜೆ ಸುವರ್ಣರಿಗೆ ಅತ್ಯುತ್ತಮ ಬ್ಯಾಂಕ್ ಕಾರ್ಯಧ್ಯಕ್ಷ ಪ್ರಶಸ್ತಿ.

Mumbai News Desk

ಉಡುಪಿ ಜಿಲ್ಲೆಯಲ್ಲಿ ವರುಣನ ಸಿಂಚನ: ಬಿಸಿಲಿನ ಬೇಗೆಯಿಂದ ಜನರಿಗೆ ತಂಪು ನೀಡಿದ ಮಳೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (13/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ” ಬಂಟರ ಮಹಾಸಮಾಗಮ

Mumbai News Desk