July 23, 2026
Mumbai News Kannada
ಸುದ್ದಿ

ನೇತ್ರಾವತಿ ನದಿ ನೀರು ಕಲುಷಿತ – ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತೋನ್ಸೆ ಜಯಕ್ರಷ್ಣ ಶೆಟ್ಟಿ ಆಗ್ರಹ







ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಹಾಗೂ ಭಾರತದ ಪವಿತ್ರ ನದಿಗಳ್ಳಲ್ಲಿ ಒಂದಾಗಿರುವ ನೇತ್ರಾವತಿ ನದಿ ನೀರು ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಂಡು, ನದಿ ನೀರನ್ನು ಸಂರಕ್ಷಿಸುವಂತೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಕಾರ್ಯವೆಸಗುತ್ತಿರುವ ಏಕೈಕ ಸರಕಾತೇರ ಸಂಸ್ಥೆಯಾದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿ ಆಗ್ರಹಿಸಿದ್ದಾರೆ.
ಏಪ್ರಿಲ್ 18ರಂದು ಉಡುಪಿಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯಕೃಷ್ಣ ಶೆಟ್ಟಿ ಅವರು ಮಂಗಳೂರು ಮತ್ತು ಬಂಟ್ವಾಳಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ ನೇತ್ರಾವತಿಯ ನದಿಯ ನೀರು ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆಯಲು ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು , ಈ ಕುರಿತು ಶೀಘ್ರದಲ್ಲಿ ಸಮಿತಿಯ ನಿಯೋಗ ರಾಜ್ಯದ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಅವಳಿ ಜಿಲ್ಲೆಗಳ ನದಿ ನೀರು ಸಂರಕ್ಷಣೆಯ ಮಾಡುವ ಬೇಡಿಕೆಯನ್ನು ಸಚಿವರ ಮುಂದೆ ಇಡಲಿದೆ. ಹಾಗೂ ಮೇ ತಿಂಗಳ ಕೊನೆಯ ವಾರದಲ್ಲಿ ಸಮಿತಿ ಮಂಗಳೂರಿನಲ್ಲಿ ಧರಣಿ ನಡೆಸಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಡಿ ಕೋಟ್ಯಾನ್, ಉಪಾಧ್ಯಕ್ಷ, ಕೆ ಪಿ ಜಗದೀಶ್ ಅಧಿಕಾರಿ, ಜಿಲ್ಲಾ ಉಪಕಾರ್ಯಧ್ಯಕ್ಷ ಅರುಣ್ ಪ್ರಕಾಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸುರೇಂದ್ರ ಮೆಂಡನ್ ಉಪಸ್ಥಿತರಿದ್ದರು.



Related posts

ಕಾಪು : ಲವ ಕರ್ಕೇರ ಅವರಿಗೆ “ಅತ್ಯುತ್ತಮ ಪೊಲೀಸ್ ಸಲಹೆಗಾರ” ಮತ್ತು “ಅತ್ಯುತ್ತಮ ಪೊಲೀಸ್ ಸ್ನೇಹಿತ” ಗೌರವಾರ್ಪಣೆ

Mumbai News Desk

ನವಿ ಮುಂಬೈ – ಪ್ರಮುಖ ಪೈಪ್ ಲೈನ್ ಕಾಮಗಾರಿಗಾಗಿ ಜುಲೈ 18 – 19ರಂದು 18 ಗಂಟೆಗಳ ಕಾಲ ನೀರು ಸರಬರಾಜು ಕಡಿತ

Mumbai News Desk

ಪ್ರೇಕ್ಷಾ ಬಂಗೇರಾಗೆ ಎಂ. ಎಸ್. ಸಿ. ಯಲ್ಲಿ ಚಿನ್ನದ ಪದಕ

Mumbai News Desk

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಭಜನಾ ಕಾರ್ಯಕ್ರಮ.

Mumbai News Desk