33.2 C
Karnataka
April 19, 2025
ಸುದ್ದಿ

ನೇತ್ರಾವತಿ ನದಿ ನೀರು ಕಲುಷಿತ – ಸರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ತೋನ್ಸೆ ಜಯಕ್ರಷ್ಣ ಶೆಟ್ಟಿ ಆಗ್ರಹ



ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಹಾಗೂ ಭಾರತದ ಪವಿತ್ರ ನದಿಗಳ್ಳಲ್ಲಿ ಒಂದಾಗಿರುವ ನೇತ್ರಾವತಿ ನದಿ ನೀರು ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಂಡು, ನದಿ ನೀರನ್ನು ಸಂರಕ್ಷಿಸುವಂತೆ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗಾಗಿ ಕಾರ್ಯವೆಸಗುತ್ತಿರುವ ಏಕೈಕ ಸರಕಾತೇರ ಸಂಸ್ಥೆಯಾದ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿ ಆಗ್ರಹಿಸಿದ್ದಾರೆ.
ಏಪ್ರಿಲ್ 18ರಂದು ಉಡುಪಿಯ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಯಕೃಷ್ಣ ಶೆಟ್ಟಿ ಅವರು ಮಂಗಳೂರು ಮತ್ತು ಬಂಟ್ವಾಳಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ ನೇತ್ರಾವತಿಯ ನದಿಯ ನೀರು ಕಲುಷಿತಗೊಳ್ಳುತ್ತಿದ್ದು, ಈ ಬಗ್ಗೆ ಸರಕಾರದ ಗಮನ ಸೆಳೆಯಲು ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದು , ಈ ಕುರಿತು ಶೀಘ್ರದಲ್ಲಿ ಸಮಿತಿಯ ನಿಯೋಗ ರಾಜ್ಯದ ಪರಿಸರ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿಯಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಅವಳಿ ಜಿಲ್ಲೆಗಳ ನದಿ ನೀರು ಸಂರಕ್ಷಣೆಯ ಮಾಡುವ ಬೇಡಿಕೆಯನ್ನು ಸಚಿವರ ಮುಂದೆ ಇಡಲಿದೆ. ಹಾಗೂ ಮೇ ತಿಂಗಳ ಕೊನೆಯ ವಾರದಲ್ಲಿ ಸಮಿತಿ ಮಂಗಳೂರಿನಲ್ಲಿ ಧರಣಿ ನಡೆಸಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಡಿ ಕೋಟ್ಯಾನ್, ಉಪಾಧ್ಯಕ್ಷ, ಕೆ ಪಿ ಜಗದೀಶ್ ಅಧಿಕಾರಿ, ಜಿಲ್ಲಾ ಉಪಕಾರ್ಯಧ್ಯಕ್ಷ ಅರುಣ್ ಪ್ರಕಾಶ್ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಸುರೇಂದ್ರ ಮೆಂಡನ್ ಉಪಸ್ಥಿತರಿದ್ದರು.

Related posts

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk

ವಸಯಿ ತಾಲೂಕ ಮೊಗವೀರ ಸಂಘದ ಆಯೋಜನೆಯಲ್ಲಿ ವಿಟಿಎಂಎಸ್ ಟ್ರೋಪಿ 2024ಕ್ಕೆ ಚಾಲನೆ

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk