28.4 C
Mumbai
March 7, 2026
Mumbai News Kannada
ಸುದ್ದಿ

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.





ರೋಮನ್ ಕ್ಯಾಥೋಲಿಕ್ ಚರ್ಚನ ಮುಖ್ಯಸ್ಥ ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಪ್ರಾನ್ಸಿಸ್ ಅವರು ಇಂದು ಬೆಳಿಗ್ಗೆ (ಎ. 21) ನಿಧನರಾಗಿದ್ದಾರೆ.
ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಪೋಪ್ ಪ್ರಾನ್ಸಿಸ್ (88) ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್ ನ ಕಾಸಾ ಸಾಂತಾ ಮಾರ್ಟದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ವಿಶೇಷವೆಂದರೆ ಅವರು ಭಾನುವಾರದಂದು ಜನರನ್ನು ಉದ್ದೇಶಿಸಿ ಮಾತನಾಡಿದರು, ಆ ಸಮಯದಲ್ಲಿ ಅವರು ಚಿಂತನೆಯ ಸ್ವಾತಂತ್ರ್ಯ ಮತ್ತು ಸಹಿಷ್ಣುತೆ ಬಗ್ಗೆ ಮಾತನಾಡಿದರು.ಜನರಿಗೆ ಈಸ್ಟರ್ ಹಬ್ಬದ ಶುಭಾಶಯಗಳು ಎಂದು ಹೇಳಿದ್ದರು.ಅವರ ಧ್ವನಿ ಮೊದಲಿಗಿಂತ ಹೆಚ್ಚು ಶಕ್ತಿಶಾಲಿಯಾಗಿರುವಂತೆ ತೋರುತ್ತಿತ್ತು.
12 ವರ್ಷಗಳ ಕಾಲ ವಿಶ್ವದ 1.4 ಬಿಲಿಯನ್ ರೋಮನ್ ಕ್ಯಾಥೋಲಿಕರ ಆಧ್ಯಾತ್ಮಿಕ ನಾಯಕರಾಗಿದ್ದ ಪೋಪ್ ಫ್ರಾನ್ಸಿಸ್ ಅವರ ಮರಣವು ರೋಮನ್ ಕ್ಯಾಥೋಲಿಕ್ ಚರ್ಚಿನಲ್ಲಿ ಹೊಸ ಪೋಪ್ ಅವರನ್ನು ನೇಮಿಸುವ ಸಾಂಪ್ರದಾಯಿಕ ಮತ್ತು ನಿಗೂಢ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ. ಈ ಪ್ರಕ್ರಿಯೆಯನ್ನು ಕಾನ್ಕಗೇವ್ ಎಂದು ಕರೆಯಲಾಗುತ್ತದೆ ವಾಸ್ತವವಾಗಿ ಪೋಪ್ ಅವರನ್ನು ಕ್ಯಾಥೋಲಿಕ್ ಚರ್ಚಿನ ಸರ್ವೋಚ್ಚ ಮುಖ್ಯಸ್ಥರೆಂದು ಪರಿಗಣಿಸಲಾಗುತ್ತಿದೆ. ಅವರನ್ನು ಏಸುಕ್ರಿಸ್ತನ ಶಿಷ್ಯರಲ್ಲಿ ಪ್ರಮುಖರಾಗಿದ್ದ ಸಂತ ಪೀಟರ್ ಅವರ ಉತ್ತರಾಧಿಕಾರಿಯಂದು ಪರಿಗಣಿಸಲಾಗಿದೆ. ಈ ಕಾರಣಕ್ಕಾಗಿ ಪೋಪ್ ಚರ್ಚನ ಸಿದ್ಧಾಂತಗಳು ಮತ್ತು ನಂಬಿಕೆಗಳ ಮೇಲೆ ಸಂಪೂರ್ಣ ಅಧಿಕಾರವನ್ನು ಹೊಂದಿದ್ದಾರೆ.



Related posts

ನವಂಬರ್ 28ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಭೇಟಿ.

Mumbai News Desk

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು

Mumbai News Desk

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ

Mumbai News Desk

ಕೇಮುಂಡೇಲು : ಅಂಗಾಗ ಕೃಷಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿದ ಡಾ. ಕೆ. ಜಿ. ಸುರೇಶ್ ರಾವ್ ಅವರಿಗೆ ಹುಟ್ಟೂರ ಅಭಿನಂದನೆ.

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk