July 23, 2026
Mumbai News Kannada
ಸುದ್ದಿ

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.







ರೋಮನ್ ಕ್ಯಾಥೋಲಿಕ್ ಚರ್ಚನ ಮುಖ್ಯಸ್ಥ ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಪ್ರಾನ್ಸಿಸ್ ಅವರು ಇಂದು ಬೆಳಿಗ್ಗೆ (ಎ. 21) ನಿಧನರಾಗಿದ್ದಾರೆ.
ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತಿದ್ದ ಪೋಪ್ ಪ್ರಾನ್ಸಿಸ್ (88) ಅವರು ಈಸ್ಟರ್ ಸೋಮವಾರವಾಗಿರುವ ಇಂದು ವ್ಯಾಟಿಕನ್ ನ ಕಾಸಾ ಸಾಂತಾ ಮಾರ್ಟದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.
ವಿಶೇಷವೆಂದರೆ ಅವರು ಭಾನುವಾರದಂದು ಜನರನ್ನು ಉದ್ದೇಶಿಸಿ ಮಾತನಾಡಿದರು, ಆ ಸಮಯದಲ್ಲಿ ಅವರು ಚಿಂತನೆಯ ಸ್ವಾತಂತ್ರ್ಯ ಮತ್ತು ಸಹಿಷ್ಣುತೆ ಬಗ್ಗೆ ಮಾತನಾಡಿದರು.ಜನರಿಗೆ ಈಸ್ಟರ್ ಹಬ್ಬದ ಶುಭಾಶಯಗಳು ಎಂದು ಹೇಳಿದ್ದರು.ಅವರ ಧ್ವನಿ ಮೊದಲಿಗಿಂತ ಹೆಚ್ಚು ಶಕ್ತಿಶಾಲಿಯಾಗಿರುವಂತೆ ತೋರುತ್ತಿತ್ತು.
12 ವರ್ಷಗಳ ಕಾಲ ವಿಶ್ವದ 1.4 ಬಿಲಿಯನ್ ರೋಮನ್ ಕ್ಯಾಥೋಲಿಕರ ಆಧ್ಯಾತ್ಮಿಕ ನಾಯಕರಾಗಿದ್ದ ಪೋಪ್ ಫ್ರಾನ್ಸಿಸ್ ಅವರ ಮರಣವು ರೋಮನ್ ಕ್ಯಾಥೋಲಿಕ್ ಚರ್ಚಿನಲ್ಲಿ ಹೊಸ ಪೋಪ್ ಅವರನ್ನು ನೇಮಿಸುವ ಸಾಂಪ್ರದಾಯಿಕ ಮತ್ತು ನಿಗೂಢ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತದೆ. ಈ ಪ್ರಕ್ರಿಯೆಯನ್ನು ಕಾನ್ಕಗೇವ್ ಎಂದು ಕರೆಯಲಾಗುತ್ತದೆ ವಾಸ್ತವವಾಗಿ ಪೋಪ್ ಅವರನ್ನು ಕ್ಯಾಥೋಲಿಕ್ ಚರ್ಚಿನ ಸರ್ವೋಚ್ಚ ಮುಖ್ಯಸ್ಥರೆಂದು ಪರಿಗಣಿಸಲಾಗುತ್ತಿದೆ. ಅವರನ್ನು ಏಸುಕ್ರಿಸ್ತನ ಶಿಷ್ಯರಲ್ಲಿ ಪ್ರಮುಖರಾಗಿದ್ದ ಸಂತ ಪೀಟರ್ ಅವರ ಉತ್ತರಾಧಿಕಾರಿಯಂದು ಪರಿಗಣಿಸಲಾಗಿದೆ. ಈ ಕಾರಣಕ್ಕಾಗಿ ಪೋಪ್ ಚರ್ಚನ ಸಿದ್ಧಾಂತಗಳು ಮತ್ತು ನಂಬಿಕೆಗಳ ಮೇಲೆ ಸಂಪೂರ್ಣ ಅಧಿಕಾರವನ್ನು ಹೊಂದಿದ್ದಾರೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಹಾಯಧನ ವಿತರಣೆ

Mumbai News Desk

ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ ಪತ್ನಿ ವಿಜಯಲಕ್ಷ್ಮೀ ರಾವ್ ನಿಧನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (05/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ದಕ್ಷಿಣ ಕನ್ನಡ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ, ಬಿ ಜೆ ಪಿ ಅಭ್ಯರ್ಥಿಯಾಗಿ ಕಿಶೋರ್ ಕುಮಾರ್ ಪುತ್ತೂರು

Mumbai News Desk

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 ಪ್ರಕಟ, 69 ಜನರಿಗೆ ರಾಜ್ಯೋತ್ಸವ , 109 ಜನರಿಗೆ ಸಾಧಕ ಪ್ರಶಸ್ತಿ, ಮುಂಬೈಯ ಸಮಾಜ ಸೇವಕ ಸದಾಶಿವ ಶೆಟ್ಟಿ ಕನ್ಯಾಡಿಗೆ ಸಾಧಕ ಪ್ರಶಸ್ತಿ.ರಾಜ್ಯೋತ್ಸವ ಪ್ರಶಸ್ತಿ 2024

Mumbai News Desk

ಶೇಕಡಾವಾರು ಅಂಕಗಳಿಗಿಂತ ಮಗುವಿನ ನಗುವೇ ಮೇಲು: ಶೈಕ್ಷಣಿಕ ಒತ್ತಡದ ಜಗತ್ತಿಗೆ ಮುಂಬೈ ಕುಟುಂಬದ ಮಾನವೀಯ ಸಂದೇಶ

Mumbai News Desk