28.4 C
Mumbai
March 7, 2026
Mumbai News Kannada
ಸುದ್ದಿ

ಶ್ರೀ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನ : ಹೊಸ ರಥ ನಿರ್ಮಾಣ, ಅಷ್ಟಮಂಗಳ ಪ್ರಶ್ನೆಗೆ ಶೀಘ್ರ ನಿರ್ಧಾರ





ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮೂಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶನಿವಾರ (ಏ. 19)ರಂದು ವರ್ಷವಧಿ ಉತ್ಸವದಂದು ಮಹಾರಥೋತ್ಸವದ ಸಂದರ್ಭದಲ್ಲಿ ರಥದ
ಮೇಲ್ಭಾಗ ಕುಸಿದು ಬಿದ್ದಿದ್ದು ಈ ಬಗ್ಗೆ ಶೀಘ್ರದಲ್ಲಿ ಒಂಬತ್ತು ಮಾಗಣೆಯ ಸಭೆ ಕರಿದು ಮುಂದಿನ ನಿರ್ಣಯ ತೆಗೆದುಕೊಳ್ಳಲು ಆಡಳಿತ ಮಂಡಳಿ ನಿರ್ಧರಿಸಿದೆ.
ರಥದ ಮೂಲ ಸ್ವರೂಪದಲ್ಲಿ ಹೊಸ ರಥ ನಿರ್ಮಾಣಕ್ಕೆ ಚಿಂತನೆ ನಡೆಯುತ್ತಿದ್ದು, ಇದಕ್ಕೆ 2 ವರ್ಷ ತಗಲಬಹುದು.
ಹಳೆಯ ರಥ ದುರಸ್ತಿಗೋಳಿಸಲು 30 ಲಕ್ಷ ರೂಪಾಯಿ ವೆಚ್ಚವಾಗಲಿದೆ ಎಂದು ದೇವಸ್ಥಾನದ ಅನುವಂಶಿಕ ಮೊಕ್ತೇಸರ ಹಾಗೂ ಮೂಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರಸರು ಮುಂಬಯಿ ನ್ಯೂಸ್ ಗೆ ಮಾಹಿತಿ ನೀಡಿದ್ದಾರೆ.
ಸುಮಾರು 400 ವರ್ಷ ಹಳೆಯ ಬ್ರಹ್ಮರಥವನ್ನು, ಹಿಂದೆ ಹಲವು ಬಾರಿ ನವೀಕರಣಗೊಳಿಸಲಾಗಿದ್ದು, ಕಳೆದ ರಥೋತ್ಸವ ಸಂಧರ್ಭ ಮುಂಭಾಗದ ಎಡ ಚಕ್ರ ಹೂತು ಹೋಗಿತ್ತು, ಈ ಬಾರಿಯೂ ಅದೇ ಚಕ್ರದ ಒಳಭಾಗದ ಅಕ್ಸಿಲ್ ತುಂಡಾಗಿ ರಥದ ಮೇಲ್ಭಾಗ ಮುರಿದು ಬೀಳಲು ಕಾರಣವಾಯಿತು.
ರಥ ಮುರಿದ ಘಟನೆ ಬಗ್ಗೆ ಶೀಘ್ರದಲ್ಲಿ ಮೂಲ್ಕಿ ಸೀಮೆಯ ಒಂಬತ್ತು ಮಾಗಣೆಯ 32 ಗ್ರಾಮಗಳ ಭಕ್ತರ ಸಭೆ ನಡೆಸಿ, ಅಷ್ಟಮಂಗಳ ಪ್ರಶ್ನೆ ಇಡಲು ನಿರ್ಧಾರ ಮಾಡಲಾಗಿದೆ ಎಂದು ದುಗ್ಗಣ್ಣ ಸಾವಂತರಸರು ತಿಳಿಸಿದ್ದಾರೆ.



Related posts

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ 79 ನೇ ವಾರ್ಷಿಕ ಮಹಾ ಮಹಾ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ:

Chandrahas

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಳುನಾಡ ಸೇವಾ ಸಮಾಜ ಮೀರಾಭಾಯಂದರ್ ಜಂಟಿ ಆಯೋಜನೆಯಲ್ಲಿ ನಡೆಯಲಿರುವ ‘ತುಳು ಸಮ್ಮೇಳನ’ದ ಪೂರ್ವಭಾವಿ ಸಭೆ.

Mumbai News Desk

ಮೋದಿ-ಪುಟಿನ್ ಭೇಟಿ: ದ್ವಿಪಕ್ಷೀಯ ಸಂಬಂಧಗಳ ಬಲವರ್ಧನೆಗೆ ಒತ್ತು

Mumbai News Desk

ಮುಂಬೈ : ಬಾಂಬ್ ಬೆದರಿಕೆ ಕರೆ ಮಾಡಿದ್ದ ಆರೋಪಿ ನೋಯ್ಡಾದಲ್ಲಿ ಬಂಧನ

Mumbai News Desk

ಮುಂಬೈ ನ್ಯೂಸ್ ನ ಛಾಯಾಗ್ರಾಹಕ, ವರದಿಗಾರ ಧನಂಜಯ ಪೂಜಾರಿ ಅವರಿಗೆ ಮಾತೃ ವಿಯೋಗ

Mumbai News Desk

ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಉಡುಪಿ: ಕರ್ನಾಟಕದ ಮೊಟ್ಟಮೊದಲ ‘ಸಂಪೂರ್ಣ ಸಾಕ್ಷರ’ ಜಿಲ್ಲೆಯಾಗಿ ಉಡುಪಿ

Mumbai News Desk