30.5 C
Mumbai
June 8, 2026
Mumbai News Kannada
ಕ್ರೀಡೆ

ಕರುನಾಡ ಸಿರಿ ಸಂಸ್ಥೆ : ಯಶಸ್ವಿಯಾಗಿ ಸಂಪನ್ನಗೊಂಡ ಕ್ರಿಕೆಟ್ ಮಹೋತ್ಸವ





‘ಕರುನಾಡ ಸಿರಿ’ ಸಂಸ್ಥೆಯು ದಿನಾಂಕ 20 ಏಪ್ರಿಲ್ 2025 ರಂದು ಸ್ಯಾಂತಾಕ್ರೂಜ್ ನ ಮಿಲನ್ ಸಬ್ ವೇ ಬಳಿಯ ಲಯನ್ಸ್ ಕ್ಲಬ್ ಮೈದಾನದಲ್ಲಿ ಕ್ರಿಕೆಟ್ ಮಹೋತ್ಸವವನ್ನು ವಿಜೃಂಭಣೆಯಿಂದ ಆಯೋಜಿಸಿತ್ತು. ಮಕ್ಕಳಿಗೆ ಹಾಗೂ ಹಿರಿಯರಿಗಾಗಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸಲಾಗಿದ್ದ ಕ್ರಿಕೆಟ್ ಮಹೋತ್ಸವ ಬೆಳಿಗ್ಗೆ 09.30 ಯಿಂದ ಸಂಜೆ 05.30 ವರೆಗೆ ನಡೆಯಿತು. ಇದರಲ್ಲಿ ಹಿರಿಯರ ಒಟ್ಟು 08 ತಂಡಗಳು ಭಾಗವಹಿಸಿದರೆ, ಮಕ್ಕಳ 10 ತಂಡಗಳು ಭಾಗವಹಿಸಿದವು. ಹಾಗೂ ಹುಡುಗಿಯರ ಹಾಗು ಹುಡುಗರ 02 ತಂಡಗಳು ಭಾಗವಹಿಸಿದ್ದವು.
ಮೊದಲಿಗೆ ಮಕ್ಕಳ ಕ್ರಿಕೆಟ್ ಟೂರ್ನಮೆಂಟ್ ನಲ್ಲಿ ”ನಮಸ್ಟಟ್ಸ್ ಕೋಚಿಂಗ್ ಕ್ಲಾಸ್’ನ ಮಾಜಿ ಹಾಗೂ ಹಾಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದರು. ಜೊತೆಗೆ, ಧಾರವಿಯ ‘ದಿ ಹೋಪ್ ಫೌಂಡೇಷನ್’ನ ಮಕ್ಕಳೂ ಬಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಬಿಜೆಪಿ ಮಹಿಳಾ ವಿಭಾಗದ ಉಪಾಧ್ಯಕ್ಷೆ ಸುನೀತ ಶರ್ಮ ಮಾತನಾಡುತ್ತ “ನಾನು ಯಾವುದೇ ಜಾತಿ ಪಾತಿ ನಂಬುವುದಿಲ್ಲ, ನಾನು ಮಾನವಿಯತೆಯನ್ನು ನಂಬುತ್ತೇನೇ, ನಾನು ಯವಾಗಲು ನಿಮಗೆ ಸಹಕಾರ ನೀಡುತೇನೆ ಎಂದರು.
ಇನ್ನೊರ್ವ ಆತಿಥಿಯಾಗಿ ಉಪಸ್ಥಿತರಿದ್ದ ಚಂದ್ರಶೇಖರ್ ರಾವ್ ಮೆಮೋರಿಯಲ್ ಟ್ರಸ್ಟ್ ನ ಅಧ್ಯಕ್ಷೆ ಶ್ರೀದೇವಿ ರಾವ್ ಅವರು ಕರುನಾಡ ಸಿರಿಯ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ಅತಿಥಿಗಳಿಗೆ ಕರುನಾಡ ಸಿರಿಯ ಮಹಿಳ ವಿಭಾಗದ ಸದಸ್ಯರಾದ ಲಲಿತ ಗೌಡ, ಮಮತ ಗೌಡ, ಅಮ್ರತ ಗೌಡ ಅವರು ಸನ್ಮಾನ ಮಾಡಿ, ತುಳಸಿ ಗಿಡವನ್ನು ನೀಡಿದರು.

ಹಿರಿಯರ ವಿಭಾಗದಲ್ಲಿ ಲಲಿತ ಏಸ್. ಕೆ ಫೌಂಡೇಷನ್ ದ್ವಿತಿಯ ಸ್ಥಾನ ಪಡೆದರೆ, ಪ್ರೀತಮ 11 ಮೊದಲ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಯಿತು. ಮಕ್ಕಳ ವಿಭಾಗದಲ್ಲಿ ಶ್ಯಡೋ ಸ್ಟ್ರೈಕರ್ಸ ದ್ವಿತಿಯ ಸ್ಥಾನ ಪಡೆದರೆ, NS ಟೋಕೋ ರೈಡರ್ಸ ಮೊದಲ ಸ್ಥಾನ ಪಡೆಯಿತು.
ಬಾಲಚಂದ್ರ ದೇವಾಡಿಗ ಪ್ರಾರಂಭದಲ್ಲಿ ಸ್ವಾಗತಿಸಿದರು.
ಭೀಮರಾಯ ಚಿಲ್ಕ ಕೊನೆಗೆ ವಂದಿಸಿದರು.
ದುರ್ಗಪ್ಪ ಸಾರ್, ಭೀಮರಾಯ ಚಿಲ್ಕ ಪಂದ್ಯಾಟದ ವೀಕ್ಷಕ ವಿವರಣೆ ಮಾಡಿದರು.
ಕಾರ್ಯಕ್ರಮದ ಯಶಸ್ಸಿಗೆ ‘ಕರುನಾಡ ಸಿರಿ’ ತಂಡದ ಅಧ್ಯಕ್ಷರಾದ ಬಾಲಚಂದ್ರ ದೇವಾಡಿಗ ಮತ್ತು ಪ್ರಮುಖ ಸದಸ್ಯರಾದ ಅನಿಲ್ ಗೌಡ, ಯೋಗೇಶ್ ಸುಪೆಕರ, ಮಂಗೇಶ್ ರಾಯಪನೋರ್ ಅವರು ಶ್ರಮಿಸಿದರು. ಅವರ ಸಮರ್ಪಣೆ ಮತ್ತು ಸಂಘಟನಾ ಕೌಶಲ್ಯದ ಫಲವಾಗಿ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.



Related posts

ಸೈಂಟ್ ಆಗ್ನೆಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟ:

Mumbai News Desk

ವರ್ಲ್ಡ್ ಮಾಸ್ಟರ್ಸ್ ಸ್ಪೋರ್ಟ್ಸ್ ಚಾಂಪಿಯನ್‌ಪ್; ಶುಭಾ ಗುಜರನ್ ಇವರಿಗೆ ಎರಡು ಚಿನ್ನದ ಪದಕ ಮತ್ತು ಒಂದು ಬೆಳ್ಳಿ ಪದಕ

Mumbai News Desk

ಬಹುಮುಖ ಪ್ರತಿಭೆಯ ಬಾಲ ಪ್ರತಿಭೆ ಬೆಳ್ತಂಗಂಡಿಯ ಶ್ರೇಯಸ್ ಯೋಗೇಶ್ ಪೂಜಾರಿ.

Mumbai News Desk

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ 5ನೇ ಟಿ20 ಪಂದ್ಯ ರದ್ದು : ಭಾರತದ ಮುಡಿಗೆ ಟಿ20 ಸರಣಿ

Mumbai News Desk

ಸಿದ್ಧಕಟ್ಟೆ: ಕೊಡಂಗೆ ವೀರವಿಕ್ರಮ ಜೋಡುಕರೆ ಕಂಬಳ :166 ಜೋಡಿ ಭಾಗಿ

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿ: ವಿಜೃಂಭಣೆಯಿಂದ ಜರುಗಿದ 79ನೇ ವರ್ಷದ ಕಂಬಳೋತ್ಸವ

Mumbai News Desk