28.4 C
Mumbai
March 7, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ, ಕಲ್ಯಾಣ : ಮೇ 1ರಂದು ಮಹಾರಾಷ್ಟ್ರ ದಿನಾಚರಣೆ






ಕಲ್ಯಾಣ, 24/04/25: “ಕರ್ನಾಟಕ ನಮ್ಮ ಜನ್ಮಭೂಮಿಯಾದರೆ ಮಹಾರಾಷ್ಟ್ರ ನಮ್ಮ ಕರ್ಮಭೂಮಿ.ಹಾಗೆ ಕರ್ನಾಟಕ ರಾಜ್ಯೋತ್ಸವದೊಂದಿಗೆ ಮಹಾರಾಷ್ಟ್ರ ರಾಜ್ಯೋತ್ಸವವನ್ನೂ ಆಚರಿಸಬೇಕೆಂಬ” ಸಂಘದ ಸಲಹೆಗಾರ ಡಾ. ಸುರೇಂದ್ರ ಶೆಟ್ಟಿಯವರ ಆಶಯದಂತೆ ಕಳೆದ 10 ವರ್ಷಗಳಿಂದ ನಾವು ಆಚರಿಸುತ್ತಿದ್ದು, ಈ ವರ್ಷ ಮೇ 1ರಂದು ಕಲ್ಯಾಣ(ಪ)ದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಸಂಜೆ 5ರಿಂದ ಆಚರಿಸಲಾಗುವುದು. ಈ ಭವ್ಯ ಕಾರ್ಯಕ್ರಮದಲ್ಲಿ ಪ್ರಸಿದ್ಧ ನ್ಯಾಯವಾದಿ ಅಡ್ವಕೇಟ್ ಅಕ್ಷತಾ ಪ್ರಭುರವರು ಮುಖ್ಯ ಅತಿಥಿಯಾಗಿ, ಸಾಮಾಜಿಕ ಕಾರ್ಯಕರ್ತ ಶ್ರೀ ಮಿಲಿಂದ ಕುಲಕರ್ಣಿಯವರು ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶ್ರೀ ಅಭಿಜಿತ್ ವಿನಾಯಕ ಚಾಂದೆಕರ್ ರವರು ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಕಲ್ಯಾಣ ಮುಂಬಯಿ ಪರಿಸರದ ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಡಾ. ಶಶೀ ಪ್ರವೀಣ್ ಶೆಟ್ಟಿಯವರನ್ನು ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಗೈದ ಭಕ್ತಿ ಶಾಸ್ತ್ರಿ ಡಾ. ಅಮಿತ್ ಜಯಂತ್ ದೇಶಮುಖ್ ರವರನ್ನು ಸನ್ಮಾನಿಸಲಾಗುವುದು. ವಿವಿಧ ಮನೋರಂಜನೆಯಿಂದ, ಪ್ರೀತಿ ಭೋಜನದಿಂದ ಕೂಡಿದ ಈ ಭವ್ಯ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಚಂದಕಾಣಿಸಿ ಕೊಡಬೇಕಾಗಿ ಪ್ರೋಗ್ರಾಮ್ ಕಮಿಟಿ ಅಧ್ಯಕ್ಷ ಶ್ರೀ ಭಾಸ್ಕರ ಶೆಟ್ಟಿ (ಗುರುದೇವ್), ಸಂಘದ ಅಧ್ಯಕ್ಷ ಶ್ರೀ ಕೆ. ಎನ್. ಸತೀಶ ಹಾಗೂ ಸಮಸ್ತ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿಕೊಂಡಿದ್ದಾರೆ.



Related posts

ಆಗಸ್ಟ್ 3ರಂದು ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಬಾಲ್ಕೂಮ್ ಥಾಣೆ, ಆಶ್ರಯದಲ್ಲಿ ಮಂದಾರ್ತಿ ಮೇಳದ ಕಲಾವಿದರಿಂದ “ಜಗನ್ಮಾತೆ ಶ್ರೀ ವನದುರ್ಗಿ” ಯಕ್ಷಗಾನ ಪ್ರದರ್ಶನ

Mumbai News Desk

ಆಗಸ್ಟ್ 2 ಥಾಣೆಯಲ್ಲಿ : ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ ಮತ್ತು ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ ಇದರ ಜಂಟಿ ಆಯೋಜನೆಯಲ್ಲಿ “ರಾಮ ದರ್ಶನ- ಗದಾಯುದ್ಧ” ಯಕ್ಷಗಾನ ಪ್ರದರ್ಶನ.

Mumbai News Desk

ಡೊಂಬಿವಿಲಿ ಕನ್ನಡಿಗರ ಸ್ನೇಹ ಬಳಗ – ಸೆ.28 ರಂದು ನವರಾತ್ರಿ ವಿಶೇಷ: ಅರಿಶಿನ-ಕುಂಕುಮ ಕಾರ್ಯಕ್ರಮ

Mumbai News Desk

ತೋಕೂರು ಮದ್ದೇರಿ ದೈವಸ್ಥಾನ. ಮೇ 7 ರಿಂದ 9 ವರೆಗೆ ಪ್ರತಿಷ್ಠಿತೆ, ನೇಮೋತ್ಸವ.

Mumbai News Desk

ಹಿಂದೂ ಸಂಗಮ ಆಯೋಜನಾ ಸಮಿತಿ ಮೂಲ್ಕಿ : ಜ. 25ರಂದು “ಭವ್ಯ ಹಿಂದೂ ಸಂಗಮ”

Mumbai News Desk

ಜುಲೈ 20 : ವೀರ ಕೇಸರಿ ಸಂಘ ಮೀರಾ -ಭಾಯಂದರ್ ವತಿಯಿಂದ ಭಗವದ್ಗೀತಾ ಪರೀಕ್ಷಾ ಸ್ಪರ್ಧೆ

Mumbai News Desk