April 25, 2025
ಪ್ರಕಟಣೆ

ಕರ್ನಾಟಕ ಸಂಘ, ಕಲ್ಯಾಣ : ಮೇ 1ರಂದು ಮಹಾರಾಷ್ಟ್ರ ದಿನಾಚರಣೆ




ಕಲ್ಯಾಣ, 24/04/25: “ಕರ್ನಾಟಕ ನಮ್ಮ ಜನ್ಮಭೂಮಿಯಾದರೆ ಮಹಾರಾಷ್ಟ್ರ ನಮ್ಮ ಕರ್ಮಭೂಮಿ.ಹಾಗೆ ಕರ್ನಾಟಕ ರಾಜ್ಯೋತ್ಸವದೊಂದಿಗೆ ಮಹಾರಾಷ್ಟ್ರ ರಾಜ್ಯೋತ್ಸವವನ್ನೂ ಆಚರಿಸಬೇಕೆಂಬ” ಸಂಘದ ಸಲಹೆಗಾರ ಡಾ. ಸುರೇಂದ್ರ ಶೆಟ್ಟಿಯವರ ಆಶಯದಂತೆ ಕಳೆದ 10 ವರ್ಷಗಳಿಂದ ನಾವು ಆಚರಿಸುತ್ತಿದ್ದು, ಈ ವರ್ಷ ಮೇ 1ರಂದು ಕಲ್ಯಾಣ(ಪ)ದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಸಂಜೆ 5ರಿಂದ ಆಚರಿಸಲಾಗುವುದು. ಈ ಭವ್ಯ ಕಾರ್ಯಕ್ರಮದಲ್ಲಿ ಪ್ರಸಿದ್ಧ ನ್ಯಾಯವಾದಿ ಅಡ್ವಕೇಟ್ ಅಕ್ಷತಾ ಪ್ರಭುರವರು ಮುಖ್ಯ ಅತಿಥಿಯಾಗಿ, ಸಾಮಾಜಿಕ ಕಾರ್ಯಕರ್ತ ಶ್ರೀ ಮಿಲಿಂದ ಕುಲಕರ್ಣಿಯವರು ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತ ಶ್ರೀ ಅಭಿಜಿತ್ ವಿನಾಯಕ ಚಾಂದೆಕರ್ ರವರು ಗೌರವ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಕಲ್ಯಾಣ ಮುಂಬಯಿ ಪರಿಸರದ ಪ್ರಸಿದ್ಧ ಸಾಮಾಜಿಕ ಕಾರ್ಯಕರ್ತೆ ಡಾ. ಶಶೀ ಪ್ರವೀಣ್ ಶೆಟ್ಟಿಯವರನ್ನು ಹಾಗೂ ಆಧ್ಯಾತ್ಮಿಕ ಕ್ಷೇತ್ರದಲ್ಲಿ ಬಹಳಷ್ಟು ಸಾಧನೆಗೈದ ಭಕ್ತಿ ಶಾಸ್ತ್ರಿ ಡಾ. ಅಮಿತ್ ಜಯಂತ್ ದೇಶಮುಖ್ ರವರನ್ನು ಸನ್ಮಾನಿಸಲಾಗುವುದು. ವಿವಿಧ ಮನೋರಂಜನೆಯಿಂದ, ಪ್ರೀತಿ ಭೋಜನದಿಂದ ಕೂಡಿದ ಈ ಭವ್ಯ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಚಂದಕಾಣಿಸಿ ಕೊಡಬೇಕಾಗಿ ಪ್ರೋಗ್ರಾಮ್ ಕಮಿಟಿ ಅಧ್ಯಕ್ಷ ಶ್ರೀ ಭಾಸ್ಕರ ಶೆಟ್ಟಿ (ಗುರುದೇವ್), ಸಂಘದ ಅಧ್ಯಕ್ಷ ಶ್ರೀ ಕೆ. ಎನ್. ಸತೀಶ ಹಾಗೂ ಸಮಸ್ತ ಕಾರ್ಯಕಾರಿ ಸಮಿತಿ ಸದಸ್ಯರು ವಿನಂತಿಸಿಕೊಂಡಿದ್ದಾರೆ.

Related posts

ವರ್ಲಿ ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿಬೀಡು ಪೌಂಡೇಶನ್, ಡಿ.22ರಂದು 30ನೇ ವರ್ಷದ ಶ್ರೀ ಅಯ್ಯಪ್ಪ ಮಹಾಪೂಜೆ, ಅನ್ನಸಂತರ್ಪಣೆ, ಗುರುವಂದನೆ,

Mumbai News Desk

ತಥಾಸ್ತು ಫೌಂಡೇಶನ್ ಮಲಾಡ್, ಮೇ 24ರಿಂದ 25ರ ತನಕ ಧಾರ್ಮಿಕ ಉತ್ಸವ, ಕೊರಗಜ್ಜ ನೆಮೋತ್ಸವ.

Mumbai News Desk

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ  ಶ್ರೀಪಾದರು ಡಿ.20ರಿಂದ 22 ವರೆಗೆ ಸಾಂತಾಕ್ರೂಜ್  ಪೇಜಾವರ ಮಠದಲ್ಲಿ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ ವತಿಯಿಂದ (ನಾಳೆ) ಫೆ.26 ರಂದು ಪಾನಕ ಸೇವೆ

Mumbai News Desk

ಕುಮಾರ  ಕ್ಷತ್ರಿಯ ಸಂಘ  59 ನೇ ವಾರ್ಷಿಕ ಮಹಾಸಭೆ, ಪೆ.16 :   ಸತ್ಯನಾರಾಯಣ ಮಹಾಪೂಜೆ, ಹಳದಿ ಕುಂಕುಮ

Mumbai News Desk

ಫೆ.12 ರಿಂದ 16 ವರಗೆ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಕುಂಭ ಮಹೋತ್ಸವ,

Mumbai News Desk