30.9 C
Mumbai
June 8, 2026
Mumbai News Kannada
ಪ್ರಕಟಣೆ

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು, ಮಹಾರಾಷ್ಟ್ರ ಘಟಕ ವತಿಯಿಂದ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನ





ಮುಂಬೈ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇದರ ಮಹಾರಾಷ್ಟ್ರ ರಾಜ್ಯ ಮುಂಬೈ ಘಟಕದ ವತಿಯಿಂದ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ 27 ಏಪ್ರಿಲ್ 2025 ರವಿವಾರದಂದು ಮೈಸೂರು ಅಸೋಸಿಯೇಶನ್ ರಂಗ ಮಂದಿರ ಭಾವುದಾಜಿ ರಸ್ತೆ ಮಾತುಂಗ (ಪೂರ್ವ) ಜರುಗಲಿದೆ.

ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನದಾಧ್ಯಕ್ಷತೆಯನ್ನು ಮುಂಬೈ ವಿಶ್ವ ವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಾಸ್ಥರಾಗಿರುವ ಡಾ ಜಿ. ಎನ್. ಉಪಾಧ್ಯ ವಹಿಸಲಿದ್ದಾರೆ. ಸಮ್ಮೇಳನವನ್ನು ಬೆಳಗ್ಗೆ 10 ಗಂಟೆಗೆ ಡಾ ಎಚ್ ಎಸ್ ಅನುಪಮ ಅವರು ಜ್ಯೋತಿ ಬೆಳಗಿ ಉದ್ಘಾಟನೆ ಮಾಡಲಿದ್ದಾರೆ.ಉದ್ಘಾಟನೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಸಿದ್ಧ ಸಾಹಿತಿ ಎನ್ ಶೈಲಜಾ ಹಾಸನ್ ಅವರು ವಹಿಸಲಿದ್ದಾರೆ.ಮುಖ್ಯ ಅತಿಥಿ ಗಳಾಗಿ ಶ್ರೀ ಪ್ರವೀಣ ಭೋಜ ಶೆಟ್ಟಿ ಅವರು ಅಧ್ಯಕ್ಷರು ಬಂಟ್ಸ್ ಸಂಘ ಕುರ್ಲಾ ಅವರು ಭುವನೇಶ್ವರಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ.ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ಇದರ ಅಧ್ಯಕ್ಷ ಶ್ರೀ ಕೊಟ್ರೇಶ್ ಎಸ್ ಉಪ್ಪಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.

ಈ ಸಮ್ಮೇಳನವು ಕೇಂದ್ರ ಸಾಹಿತ್ಯ ವೇದಿಕೆ ಮಹಾರಾಷ್ಟ್ರ ಘಟಕದ ಅಧ್ಯಕ್ಷ ಶ್ರೀ ವಿಶ್ವೇಶ್ವರ ಎನ್ ಮೇಟಿ ಅವರ ನೇತೃತ್ವದಲ್ಲಿ ನಡೆಯಲಿದೆ. ಈ ಸಮ್ಮೇಳನದಲ್ಲಿ ಖ್ಯಾತ ಪತ್ರ ಕರ್ತ ಶ್ರೀನಿವಾಸ ಜೋಕಟ್ಟೆ ಅವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ವಿಶ್ವೇಶ್ವರ ಎನ್.ಮೇಟಿ ಅವರ
‘ಹಳ್ಳಿ ಎಂಬ ಬಳ್ಳಿ’ತೋಳ ನೂರು ಒಂದು ಸಾಂಸ್ಕೃತಿಕ ಅಧ್ಯಾಯನ ಕೃತಿ,ಶಿವಲೀಲಾ ಶಂಕರ ಅವರ ‘ಬೇಲಿಯಾಚಿನ ಪಿಸು ಮಾತು’ ಕವನ ಸಂಕಲನ, ಡಾ ಎಚ್ ಕೆ. ಹಸೀನಾ ಅವರ ‘ಬೊಗಸೆ ಯೊಳಗಿನ ದರ್ದ’, ಫ್ಲಾವಿಯಾ ಆಲ್ಬುಕರ್ಕ ಅವರ ‘ಪ್ಯಾರಿ ಪದಾಂ’, ಕವನ ಸಂಕಲನ ಲೋಕಾರ್ಪಣೆಯಾಗಲಿವೆ.

ಈ ಸಮ್ಮೇಳನದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಶರಣ ಸಂಕುಲ ರತ್ನ ರಾಷ್ಟೀಯ ಪ್ರಶಸ್ತಿಯನ್ನು ಮುಂಬೈ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಶ್ರೀ ಮನೋಹರ ಎಂ ಕೋರಿ ಅವರು ಪ್ರದಾನ ಮಾಡಲಿದ್ದಾರೆ.ಕರ್ನಾಟಕ ಶಿರೋಮಣಿ ರಾಜ್ಯ ಪ್ರಶಸ್ತಿಯನ್ನು ಖ್ಯಾತ ಸಾಹಿತಿ ಎನ್ ಶೈಲಜಾ ಹಾಸನ ಅವರು ಪ್ರದಾನ ಮಾಡಲಿದ್ದಾರೆ.

ಮಧ್ಯಾಹ್ನದ ಸಾಹಿತ್ಯ ಗೋಷ್ಠಿಯು ಡಾ ಬಿ. ಸಿ ನಾಗರಾಜ ಅವರ ಅಧ್ಯಕ್ಷ ತೆಯಲ್ಲಿ ಜರುಗಲಿದೆ. ಈ ಸಾಹಿತ್ಯ ಗೋಷ್ಠಿಯಲ್ಲಿ ‘ಕನ್ನಡ ಸಾಹಿತ್ಯಕ್ಕೆ ಮಹಾರಾಷ್ಟ್ರದ ಕೊಡುಗೆ’ ಎಂಬ ವಿಷಯ ಕುರಿತು ಖ್ಯಾತ ಸಾಹಿತಿ ರಂಗ ಕಲಾವಿದ ಡಾ ಭರತ ಕುಮಾರ ಪೋಲಿಪು ಅವರು ಉಪನ್ಯಾಸ ನೀಡಲಿದ್ದಾರೆ.ಈ ಸಮ್ಮೇಳನದಲ್ಲಿ ನಡೆಯಲಿರುವ ಕಾವ್ಯ ಗೋಷ್ಠಿ ಯಲ್ಲಿ 24 ಜನ ಕವಿ-ಕವಯತ್ರಿಯರು ಕವಿತೆ ವಾಚನ ಮಾಡಲಿದ್ದಾರೆ.

ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ (ರಿ) ಬೆಂಗಳೂರು ಮಹಾರಾಷ್ಟ್ರ ಘಟಕ ವತಿಯಿಂದ ನಡೆಯಲಿರುವ ಅಖಿಲ ಭಾರತ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವರಿಗೂ ಸುಸ್ವಾಗತ ಕೋರುವ ಕೇಂದ್ರ ಸಮಿತಿಯ ಟ್ರಸ್ಟಿಗಳು ಮತ್ತು ಮಹಾರಾಷ್ಟ್ರ ಘಟಕದ ಪದಾಧಿಕಾರಿಗಳು

ಸಮ್ಮೇಳನಕ್ಕೆ ಆಗಮಿಸುವ ಕನ್ನಡಾಭಿನಿಗಳು ಸಾಹಿತಿಗಳಿಗೆ ಉಪಹಾರ ಮತ್ತು ಮೃಷ್ಟಾನ್ನ ಭೋಜನದ ವ್ಯವಸ್ಥೆ ಯನ್ನ ಮಾಡಲಾಗಿದೆ.



Related posts

ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ  ಮಹಾನಗರದ ವಿವಿಧ ಉಪ ನಗರಗಳಲ್ಲಿ    ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ

Mumbai News Desk

ಮಾ7:   ಒಕ್ಕಲಿಗರ ಸಂಘ ಮಹಾರಾಷ್ಟ್ರ, (ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುಸ್ತಕ ವಿತರಣೆ,

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಸಾವರ್ಕರ್ ನಗರ ಥಾಣೆ : ಆಗಸ್ಟ್ 10ರಂದು “ತುಳುನಾಡ ಬಲಿಯೇಂದ್ರ” ಯಕ್ಷಗಾನ ತಾಳಮದ್ದಳೆ

Mumbai News Desk

ಆ. 3 ರಿಂದ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯಲ್ಲಿಶರನ್ನವರಾತ್ರಿ ಮಹೋತ್ಸವ.

Mumbai News Desk

ಶ್ರೀ ದೇವಿ ಯಕ್ಷ ಕಲಾ ನಿಲಯ ನಾಲಾಸೋಪಾರ ವಿರಾರ್ , ಜು 7:ಯಕ್ಷಗಾನ ತರಬೇತಿ ಶಿಬಿರದ ಮುಹೂರ್ತ.

Mumbai News Desk

ನಟನಾ ನೃತ್ಯ ಅಕಾಡೆಮಿ, ಪವಾಯಿ: ಡಿ. 14 ರಂದು ಬಂಟರ ಭವನದಲ್ಲಿ ನಾಲ್ಕು ವಿದ್ಯಾರ್ಥಿನಿಯರ ಭರತನಾಟ್ಯ ಆರಂಗೇಟ್ರಮ್

Mumbai News Desk