30.5 C
Mumbai
June 8, 2026
Mumbai News Kannada
ಸುದ್ದಿ

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ:





ಉಡುಪಿ: ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 1981-82 ರ ಹಳೆ ವಿದ್ಯಾರ್ಥಿಗಳ ಸಮ್ಮಿಲನ ಉಪನ್ಯಾಸಕರ ಉಪಸ್ಥಿತಿಯಲ್ಲಿ ಜರಗಿತು. ನಿವೃತ್ತ ಉಪನ್ಯಾಸಕರಾದ ಡಾ| ಎಂ.ಆರ್.ಹೆಗಡೆ, ಡಾ| ಟಿ.ಎನ್.ರಾಮಕೃಷ್ಣ (TNR), ಮೋಹನ್ ಕಲ್ಲೂರಾಯರವರು ಅತಿಥಿಗಳಾಗಿ ಭಾಗವಹಿಸಿದ್ದರು. ಕಾರ್ಯಕ್ರಮವು ಜಾನಕಿಯವರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡಿತು. ಸುಧಾಕರ ಶೆಟ್ಟಿಯವರು ಸ್ವಾಗತಿಸಿದರು. ನಂತರ ಉಪನ್ಯಾಸಕರಿಗೆ ಗೌರವಾರ್ಪಣೆ ಮಾಡಿ ಗುರುಗಳ ಆಶೀರ್ವಾದ ಪಡೆದು ಕೃತಾರ್ಥರೆನಿಸಿಕೊಂಡರು. ಜೀವನದ ಮೌಲ್ಯಗಳ ಬಗ್ಗೆ ಉಪನ್ಯಾಸಕರು ಸಂದೇಶ ನೀಡಿ ಮುಂದಿನ ಜೀವನಕ್ಕೆ ಶುಭ ಹಾರೈಸಿದರು. ಮುಂದಿನ ವರ್ಷ 60ರ ಸಂಭ್ರಮದಲ್ಲಿರುವ ಕಾಲೇಜಿನ ಇತಿಹಾಸದಲ್ಲಿ ಇಂತಹ ಸಮ್ಮಿಲನ ನಡೆದದ್ದು ಪ್ರಥಮ ಎಂದರು.
ಕಾರ್ಯಕ್ರಮಕ್ಕೆ ಆಗಮಿಸಿದ ವಿಧ್ಯಾರ್ಥಿಗಳು ತಮ್ಮ ತಮ್ಮ ಪರಿಚಯ ನೀಡಿ ಕಾರ್ಯಕ್ರಮದ ಬಗ್ಗೆ ಸಂತಸ ವ್ಯಕ್ತಪಡಿಸಿದರು.ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಯೋಜಿಸಿದ ಅಲೆವೂರು ನಾಗರಾಜ ಆಚಾರ್ಯ, ಬೈಕಾಡಿ ಸೂರಪ್ಪ ಕುಂದರ್ ಮುಂಬಯಿ, ಹಾಗೂ ಸಕು ಪಾಂಗಾಳ ಇವರನ್ನು ಉಪನ್ಯಾಸಕರು ಗೌರವಿಸಿದರು.
ಮನೋರಂಜನೆಗಾಗಿ ಮುಂಬಯಿಯ ಜಾದೂಗಾರ ಸೂರಪ್ಪ ಕುಂದರ್ ಹಾಗೂ ಶಾಂತಾರಾಮ ಶೆಟ್ಟಿ ಬಳ್ಳಾರಿಯವರು ಜಾದೂ ಪ್ರದರ್ಶನ ನೀಡಿ ರಂಜಿಸಿದರು. ಸಕು ಪಾಂಗಾಳ ಕಾರ್ಯಕ್ರಮ ನಿರೂಪಿಸಿದರು.ಕೊನೆಯಲ್ಲಿ ಸುರೇಶ್ ಬೈಲೂರು ವಂದನಾರ್ಪಣೆ ಗೈದರು.



Related posts

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಅರ್ಹ ಸಂಶೋಧನ ವಿದ್ಯಾರ್ಥಿಗಳಿಗೆ ಜಯಲೀಲಾ ಟ್ರಸ್ಟ್ ನ ವತಿಯಿಂದ ಗೌರವ ಧನ

Mumbai News Desk

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk

ಮಂಗಳೂರು ವಕೀಲರ ಸಂಘದ ಚುನಾವಣೆ: ಜಗದೀಶ ಕೆ. ಶೇಣವ ನೂತನ ಅಧ್ಯಕ್ಷರಾಗಿ ಆಯ್ಕೆ

Mumbai News Desk

ಅನಿತಾ ಪಿ. ತಾಕೊಡೆ ಅವರಿಗೆ ಹುಟ್ಟೂರ ಸನ್ಮಾನ

Mumbai News Desk

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk