July 23, 2026
Mumbai News Kannada
ಸುದ್ದಿ

ಮಂಗಳೂರು: ಬಜ್ಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ







ಮಂಗಳೂರಿನಲ್ಲಿ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ನಡೆಸಿ ಕೊಲೆ ಮಾಡಲಾಗಿದೆ. ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಹತ್ಯೆಯ ಪ್ರಮುಖ ಆರೋಪಿಯಾಗಿದ್ದ ಸುಹಾಸ್ ಶೆಟ್ಟಿ ಹಲವು ಕೊಲೆ, ಕೊಲೆಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಮಂಗಳೂರಿನಲ್ಲಿ ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಮೇಲೆ ತಲವಾರು ದಾಳಿ ಮಾಡಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನ ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ.

ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದೆ. 2022ರ ಜುಲೈ 28ರಂದು ಸುರತ್ಕಲ್ ನ ಫಾಜಿಲ್ ಹತ್ಯೆ ಮಾಡಲಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಜಿಲ್ ಹತ್ಯೆ ಮಾಡಿದ್ದರು. ಇದರಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು. ಸುಹಾಸ್‌ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದನು. ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ. ಇನ್ನು ಸುಹಾಸ್ ಶೆಟ್ಟಿ ಹಲವು ಕೊಲೆ, ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದನು.

ಇಂದು ಸಂಜೆ ನಡೆದ ದಾಳಿಯಿಂದ ಗಂಭೀರ ಸ್ಥಿತಿಯಲ್ಲಿರುವ ಸುಹಾಸ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ದಾಖಲು ಮಾಡಲಾಗಿತ್ತು.. ಆದರೆ, ತಲವಾರು ದಾಳಿಗೆ ತುತ್ತಾಗಿದ್ದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾಗಿದ್ದಾರೆ. ಮಂಗಳೂರಿನಲ್ಲಿ ರೌಡಿ ಶೀಟರ್, ಹಿಂದೂ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಮಂಗಳೂರಿನ ಎ.ಜೆ‌‌ ಆಸ್ಪತ್ರೆ ಎದುರು ಹಿಂದೂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಆಸ್ಪತ್ರೆಗೆ ಬಿಜೆಪಿ ಮತ್ತು ಹಿಂದೂ ಸಂಘಟನೆ ನಾಯಕರ ಆಗಮಿಸಿದ್ದಾರೆ

.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk

ಜೆಸಿಐ ಕಾಪು ಘಟಕಕ್ಕೆ 2026ನೇ ಸಾಲಿನ ನೂತನ ಅಧ್ಯಕ್ಷ : ಜೆಸಿ ವಿಕ್ಕಿ ಪೂಜಾರಿ ಮಡುಂಬು

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ಗಮ್ಮತ್ ಕಲಾವಿದೆರ್ ಅವರ ‘ಪೋನಗ ಕೊನೊಪರ’ ನಾಟಕದ ಮುಹೂರ್ತ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ

Mumbai News Desk