September 6, 2026
Mumbai News Kannada
ಸುದ್ದಿ

ಡಾ.ಈಶ್ವರ ಅಲೆವೂರು ಅವರಿಗೆ  ಕೆ.ವಿ.ಆರ್ ಠಾಗೋರ್ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ





ಚಿತ್ರ ವರದಿ ದಿನೇಶ್ ಕುಲಾಲ್ 

  ಕುಂಬ್ಳೆ ಮೇ4.   ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ದಿ ಪ್ರಾಧಿಕಾರ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಮತ್ತು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಬೆಂಗಳೂರು ಈ ನಾಲ್ಕು ಸಂಸ್ಥೆಗಳು ಮೇ 3 ರಂದು ಕಾಸರಗೋಡು ಜಿಲ್ಲೆಯ ಸೀತಾಂಗೋಳಿಯ ಅಲಯನ್ಸ್ ಕನ್ವೆನ್ಶನ್ ಸೆಂಟರ್ ನಲ್ಲಿ ಆಯೋಜಿಸಿದ ಕನ್ನಡ ಸಂಸ್ಕೃತಿ ಉತ್ಸವ ಮತ್ತು‌ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2025 ರ ಕೆ.ವಿ.ಆರ್ ಠಾಗೋರ್ ಸ್ಮರಣಾರ್ಥ ಶ್ರೀಮತಿ ಭಾಗ್ಯ ಠಾಗೋರ್ ಇವರು ನೀಡುವ ಶಾಲು ಸ್ಮರಣಿಕೆ ಪ್ರಶಸ್ತಿ ಪತ್ರ,  ಹತ್ತು ಸಾವಿರ ರೂಪಾಯಿ ನಗದು ಒಳಗೊಂಡ ದತ್ತಿನಿಧಿ ಪ್ರಶಸ್ತಿಯನ್ನು ಮುಂಬಯಿಯ  ಅಕ್ಷಯ ಮಾಸಿಕದ ಸಂಪಾದಕ ಡಾ.ಈಶ್ವರ ಅಲೆವೂರು ಅವರಿಗೆ ಪ್ರದಾನಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಕೃಷಿ ಸಚಿವ ಎಸ್.ಚೆಲುವರಾಯ ಸ್ವಾಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಅಧ್ಯಕ್ಷ ಶಿವಾನಂದ ತಗಡೂರು, ಸ್ವಾಗತ ಸಮಿತಿ ಅಧ್ಯಕ್ಷ ಕೆ ಕೆ ಶೆಟ್ಟಿ ಕುತ್ತಿಕಾರು,ಮುಂಬಯಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಥೋಮಸ್ ಡಿಸೋಜಾ,ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ  ಸಂಜೀವ ಕುಮಾರ್  ಅತಿವಾಳೆ, ಶಿವರೆಡ್ಡಿ ಖ್ಯಾಡೆದ್,  ಶಂಕರ ಡಿ, ಅರಿಬೈಲು ಗೋಪಾಲ ಶೆಟ್ಟಿ , ಸುಕುಮಾರ ಕುದ್ರೆಪಾಡಿ,ಎನ್ ಚೆನಿಯಪ್ಪ ನಾಯ್ಕ, ಟಿಎಂ ಶಾಹಿದ್, ಕಾರ್ತಿಕ್ ಶೆಟ್ಟಿ , ಸಂಘದ ಅಧ್ಯಕ್ಷ  ರವಿ‌ ನಾಯ್ಕಾಪ್, ರಫೀಕ್ ಮಾಸ್ತರ್,ಗಂಗಾಧರ್ ತೆಕ್ಕೆಮೂಲೆ, ಗೌರವ ಅಧ್ಯಕ್ಷ ಎ ಆರ್ ಸುಬ್ಬಯ್ಯಕಟ್ಟೆ, ಕೋಶಾಧಿಕಾರಿ ಶ್ರೀಕಾಂತ್ ಕೆ ಎಸ್ ಮೊದಲಾದವರು ಉಪಸ್ಥಿತರಿದ್ದರು.

B. Dinesh Kulal

Mob.: 9821868674



Related posts

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಜಾನ್ವಿ ರಾಜೇಶ್ ಕುಲಾಲ್ ರವರಿಗೆ 87%_ಅಂಕ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (31/05/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಸುರವಿ ಹಂಡೇಲ್ ಇವರ ಭರತನಾಟ್ಯ ಆರಂಗೇಟ್ರಮ್

Mumbai News Desk

ಬೆಂಗಳೂರು – ಮುಂಬೈ ನಡುವೆ ಸೂಪರ್‌ಫಾಸ್ಟ್‌ ರೈಲು; ಗುಡ್‌ನ್ಯೂಸ್‌ ಕೊಟ್ಟ ಸಂಸದ ತೇಜಸ್ವಿ ಸೂರ್ಯ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (01/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk