July 23, 2026
Mumbai News Kannada
ಸುದ್ದಿ

ಡಾ.ಈಶ್ವರ ಅಲೆವೂರು ಅವರಿಗೆ  ಕೆ.ವಿ.ಆರ್ ಠಾಗೋರ್ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ







ಚಿತ್ರ ವರದಿ ದಿನೇಶ್ ಕುಲಾಲ್ 

  ಕುಂಬ್ಳೆ ಮೇ4.   ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿಪ್ರದೇಶ ಅಭಿವೃದ್ದಿ ಪ್ರಾಧಿಕಾರ,ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಮತ್ತು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಬೆಂಗಳೂರು ಈ ನಾಲ್ಕು ಸಂಸ್ಥೆಗಳು ಮೇ 3 ರಂದು ಕಾಸರಗೋಡು ಜಿಲ್ಲೆಯ ಸೀತಾಂಗೋಳಿಯ ಅಲಯನ್ಸ್ ಕನ್ವೆನ್ಶನ್ ಸೆಂಟರ್ ನಲ್ಲಿ ಆಯೋಜಿಸಿದ ಕನ್ನಡ ಸಂಸ್ಕೃತಿ ಉತ್ಸವ ಮತ್ತು‌ ದತ್ತಿನಿಧಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ 2025 ರ ಕೆ.ವಿ.ಆರ್ ಠಾಗೋರ್ ಸ್ಮರಣಾರ್ಥ ಶ್ರೀಮತಿ ಭಾಗ್ಯ ಠಾಗೋರ್ ಇವರು ನೀಡುವ ಶಾಲು ಸ್ಮರಣಿಕೆ ಪ್ರಶಸ್ತಿ ಪತ್ರ,  ಹತ್ತು ಸಾವಿರ ರೂಪಾಯಿ ನಗದು ಒಳಗೊಂಡ ದತ್ತಿನಿಧಿ ಪ್ರಶಸ್ತಿಯನ್ನು ಮುಂಬಯಿಯ  ಅಕ್ಷಯ ಮಾಸಿಕದ ಸಂಪಾದಕ ಡಾ.ಈಶ್ವರ ಅಲೆವೂರು ಅವರಿಗೆ ಪ್ರದಾನಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಕೃಷಿ ಸಚಿವ ಎಸ್.ಚೆಲುವರಾಯ ಸ್ವಾಮಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಅಧ್ಯಕ್ಷ ಶಿವಾನಂದ ತಗಡೂರು, ಸ್ವಾಗತ ಸಮಿತಿ ಅಧ್ಯಕ್ಷ ಕೆ ಕೆ ಶೆಟ್ಟಿ ಕುತ್ತಿಕಾರು,ಮುಂಬಯಿ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಥೋಮಸ್ ಡಿಸೋಜಾ,ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ  ಸಂಜೀವ ಕುಮಾರ್  ಅತಿವಾಳೆ, ಶಿವರೆಡ್ಡಿ ಖ್ಯಾಡೆದ್,  ಶಂಕರ ಡಿ, ಅರಿಬೈಲು ಗೋಪಾಲ ಶೆಟ್ಟಿ , ಸುಕುಮಾರ ಕುದ್ರೆಪಾಡಿ,ಎನ್ ಚೆನಿಯಪ್ಪ ನಾಯ್ಕ, ಟಿಎಂ ಶಾಹಿದ್, ಕಾರ್ತಿಕ್ ಶೆಟ್ಟಿ , ಸಂಘದ ಅಧ್ಯಕ್ಷ  ರವಿ‌ ನಾಯ್ಕಾಪ್, ರಫೀಕ್ ಮಾಸ್ತರ್,ಗಂಗಾಧರ್ ತೆಕ್ಕೆಮೂಲೆ, ಗೌರವ ಅಧ್ಯಕ್ಷ ಎ ಆರ್ ಸುಬ್ಬಯ್ಯಕಟ್ಟೆ, ಕೋಶಾಧಿಕಾರಿ ಶ್ರೀಕಾಂತ್ ಕೆ ಎಸ್ ಮೊದಲಾದವರು ಉಪಸ್ಥಿತರಿದ್ದರು.

B. Dinesh Kulal

Mob.: 9821868674



Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ಮಹಾರಾಷ್ಟ್ರ ಬಂದ್! ತೆರಿಗೆ ಹೆಚ್ಚಳ ಖಂಡಿಸಿ ಜುಲೈ 14 ರಂದು ಭಾರತೀಯ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳ ಸಂಘ (AHAR) ಮುಷ್ಕರಕ್ಕೆ ಕರೆ.

Mumbai News Desk

ರಾಷ್ಟ್ರ, ಕರ್ನಾಟಕ ಮತ್ತು ಮಹಾರಾಷ್ಟ್ರದ ಇಂದಿನ ಸಂಕ್ಷಿಪ್ತ ಮುಖ್ಯಾಂಶಗಳು

Mumbai News Desk

ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಗೆ ಸ್ಪಂದನೆ : ಉಡುಪಿ – ಕುಂದಾಪುರದಿಂದ ತಿರುಪತಿಗೆ ನೇರ ರೈಲು ಆರಂಭ

Mumbai News Desk

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk