30.5 C
Mumbai
June 8, 2026
Mumbai News Kannada
ಸುದ್ದಿ

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ





ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪಾಕಿಸ್ತಾನ ಪ್ರೇರಿತ ಉಗ್ರ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ.
ಮೇ. 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಹಿಡಿತದಲ್ಲಿರುವ ಒಂಬತ್ತು ಸ್ಥಳಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡಿದ್ದು, ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ನೆಲೆಗಳನ್ನು ಪ್ರಮುಖವಾಗಿ ಗುರಿಯಾಗಿಸಿ ಭಾರತೀಯ ಸೇನೆ ದಾಳಿ ನಡೆಸಿದೆ. ಭಯೋತ್ಪಾದಕರ ಅನೇಕ ಅಡಗುತಾಣಗಳು ನಾಶವಾಗಿವೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪಿಓಕೆಯಲ್ಲಿ ತನ್ನ ಸೇನಾ ಜಮಾವಣೆ ಹೆಚ್ಚಿಸಲು ಪ್ರಾರಂಭಿಸಿತ್ತು.
ಸರಿಯಾಗಿ ಪಹಲ್ಗಾಮ್ ದಾಳಿಯ ಎರಡು ವಾರಗಳ ಬಳಿಕ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಿರುವ ಭಾರತ 9ನೇಲೆಗಳನ್ನು ಧ್ವಂಸ ಮಾಡಿದೆ ಭಾರತದ ಅಮಾಯಕ 26 ಜೀವಗಳನ್ನು ಬಲಿ ಪಡೆದ ಹಾಗೂ ಭಾರತದಲ್ಲಿ ಇನ್ನಷ್ಟು ಭಯೋತ್ಪಾದಕ ದಾಳಿ ಬಗ್ಗೆ ಯೋಜನೆ ರೂಪಿಸುತಿದ್ದ ನೆಲೆಗಳು ಇವೇ ಎಂದು ಭಾರತೀಯ ಸೇನೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ರಾತ್ರಿ ಇಡೀ ಪಾಕಿಸ್ತಾನದ ವಿರುದ್ಧದ ಕಾರ್ಯಚರಣಿಯ ಮೇಲ್ವಿಚಾರಣೆ ಮಾಡಿದ್ದರು ಎಂದು ಹೆಸರು ಬಹಿರಂಗ ಪಡಿಸಲು ಬಯಸದ ಭಾರತೀಯ ಅಧಿಕಾರಿಯೊಬ್ಬರು ಹೇಳಿದರು.



Related posts

ಭಾರತ್ ಬ್ಯಾಂಕ್‌ ನ ಗೋರೆಗಾಂವ್ ಶಾಖೆಯ ಗಣೇಶ್ ಪೂಜಾರಿ ಸೇವಾ ನಿವೃತ್ತಿ

Mumbai News Desk

ಇರಾನ್-ಅಮೆರಿಕ ಸಂಘರ್ಷ: ಶಾಂತಿ ಮಾತುಕತೆ ವಿಫಲ ಮತ್ತೆ ಯುದ್ಧದ ಅಂಚಿನಲ್ಲಿ ಮಧ್ಯಪ್ರಾಚ್ಯ

Mumbai News Desk

ಮಂಗಳೂರು-ಮಸ್ಕತ್ ನೇರ ವಿಮಾನಯಾನ ಭಾನುವಾರದಿಂದ (ಮಾ. 1)ಪುನರಾರಂಭ: ಕ್ಯಾಪ್ಟನ್ ಬ್ರಿಜೇಶ್ ಚೌಟ

Mumbai News Desk

ಮಾಜಿ ಶಾಸಕ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆಗೆ ಶರಣು

Mumbai News Desk

ಮಂಗಳೂರು ವಕೀಲರ ಸಂಘದ ಚುನಾವಣೆ: ಜಗದೀಶ ಕೆ. ಶೇಣವ ನೂತನ ಅಧ್ಯಕ್ಷರಾಗಿ ಆಯ್ಕೆ

Mumbai News Desk

ನವಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

Mumbai News Desk