May 7, 2025
ಸುದ್ದಿ

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ



ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಗೆ ಕೊನೆಗೂ ಭಾರತೀಯ ಸೇನೆ ಪಾಕಿಸ್ತಾನ ಪ್ರೇರಿತ ಉಗ್ರ ನೆಲೆಗಳ ಮೇಲೆ ದಾಳಿ ಮಾಡುವ ಮೂಲಕ ಪ್ರತಿಕಾರ ತೀರಿಸಿಕೊಂಡಿದೆ.
ಮೇ. 7ರ ನಸುಕಿನಲ್ಲಿ ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನದ ಹಿಡಿತದಲ್ಲಿರುವ ಒಂಬತ್ತು ಸ್ಥಳಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ಮಾಡಿದ್ದು, ಪಾಕಿಸ್ತಾನಿ ಮಿಲಿಟರಿ ವಕ್ತಾರರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ಈ ದಾಳಿಯಲ್ಲಿ ಇಲ್ಲಿಯವರೆಗೆ ಮೂವರು ಸಾವನ್ನಪ್ಪಿದ್ದಾರೆ ಮತ್ತು ಅನೇಕ ಭಯೋತ್ಪಾದಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಜೈಷ್-ಎ-ಮೊಹಮ್ಮದ್ ಮತ್ತು ಲಷ್ಕರ್-ಎ-ತೊಯ್ಬಾ ನೆಲೆಗಳನ್ನು ಪ್ರಮುಖವಾಗಿ ಗುರಿಯಾಗಿಸಿ ಭಾರತೀಯ ಸೇನೆ ದಾಳಿ ನಡೆಸಿದೆ. ಭಯೋತ್ಪಾದಕರ ಅನೇಕ ಅಡಗುತಾಣಗಳು ನಾಶವಾಗಿವೆ. ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನವು ಪಿಓಕೆಯಲ್ಲಿ ತನ್ನ ಸೇನಾ ಜಮಾವಣೆ ಹೆಚ್ಚಿಸಲು ಪ್ರಾರಂಭಿಸಿತ್ತು.
ಸರಿಯಾಗಿ ಪಹಲ್ಗಾಮ್ ದಾಳಿಯ ಎರಡು ವಾರಗಳ ಬಳಿಕ ಭಯೋತ್ಪಾದಕರಿಗೆ ತಕ್ಕ ಪಾಠ ಕಲಿಸಿರುವ ಭಾರತ 9ನೇಲೆಗಳನ್ನು ಧ್ವಂಸ ಮಾಡಿದೆ ಭಾರತದ ಅಮಾಯಕ 26 ಜೀವಗಳನ್ನು ಬಲಿ ಪಡೆದ ಹಾಗೂ ಭಾರತದಲ್ಲಿ ಇನ್ನಷ್ಟು ಭಯೋತ್ಪಾದಕ ದಾಳಿ ಬಗ್ಗೆ ಯೋಜನೆ ರೂಪಿಸುತಿದ್ದ ನೆಲೆಗಳು ಇವೇ ಎಂದು ಭಾರತೀಯ ಸೇನೆ ತಿಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ರಾತ್ರಿ ಇಡೀ ಪಾಕಿಸ್ತಾನದ ವಿರುದ್ಧದ ಕಾರ್ಯಚರಣಿಯ ಮೇಲ್ವಿಚಾರಣೆ ಮಾಡಿದ್ದರು ಎಂದು ಹೆಸರು ಬಹಿರಂಗ ಪಡಿಸಲು ಬಯಸದ ಭಾರತೀಯ ಅಧಿಕಾರಿಯೊಬ್ಬರು ಹೇಳಿದರು.

Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ನ ಪ್ರಶಸ್ತಿ ಸ್ವೀಕರಿಸಿದ ಫೂಲ್‌ಬಸನ್ ಬಾಯಿ ಯಾದವ್ ಆಶಯ : ಅಹಂ, ಆಸೆಯಿಂದ ಕೇಡು; ಕರ್ಮ ಒಳಿತಿನ ಬೀಡು

Mumbai News Desk

2023_24 ನೇ  12  ನೇ ತರಗತಿ ಪರೀಕ್ಷಾ ಫಲಿತಾಂಶ ಡೊಂಬಿವಲಿ (ಪೂ)  ಧೃತಿ ಶ್ರೀಧರ್ ಮೂಲ್ಯ ಶೇ 81.17 ಅಂಕ 

Mumbai News Desk

ಪಿಯುಸಿ ವಿಜ್ಞಾನ ವಿಭಾಗ ಪರೀಕ್ಷೆ ಕುಮಾರಿ ಶ್ರೇಯಾ ಪಿ ಕುಲಾಲ್ ರವರಿಗೆ 90%_ಅಂಕ.

Mumbai News Desk

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

ಕುಲಾಲ ಸಂಘ ಮುಂಬೈ  ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ಅವರಿಗೆ ಮಂಗಳೂರುನಲ್ಲಿ  ಗೌರವ,

Mumbai News Desk

ಪಡುಬಿದ್ರಿ ನಡಿಪಟ್ನ ಮೊಗವೀರ ಮಹಾಸಭಾ ಮುಂಬಯಿ ಶಾಖೆಯ 136ನೇ ವಾರ್ಷಿಕ ಮಹಾಸಭೆ.

Mumbai News Desk