September 6, 2026
Mumbai News Kannada
ಪ್ರಕಟಣೆ

ದೊಡ್ಡಣ್ಣ ಗುಡ್ಡೆಯ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಮೇ 9 ರಿಂದ ಮೇ 13 ಪ್ರತಿಷ್ಠಾ ವರ್ಧಂತಿ ಮಹೋತ್ಸವ





 


 

 ಉಡುಪಿ ಮೇ 7. ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಪ್ರತಿಷ್ಠ ವರ್ಧಂತಿ ಮಹೋತ್ಸವವು ಇದೇ ತಿಂಗಳ ತಾರೀಕು 9ರ ಶುಕ್ರವಾರ ಸಾಯಂಕಾಲದಿಂದ ಆರಂಭಗೊಂಡು ತಾರೀಕು 13ರ ಮಧ್ಯಾಹ್ನದವರೆಗೆ ಕ್ಷೇತ್ರದ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ.

 ಆ ಪ್ರಯುಕ್ತ ಕ್ಷೇತ್ರದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಳ್ಳಲಿದ್ದು ತಾರೀಕು 9ರ ಶುಕ್ರವಾರ ಸಂಜೆ ಗಂಟೆ ಆರರಿಂದ ರಿತ್ವಿಜರ ಆಗಮನ ಸಾಮೂಹಿಕ ಪ್ರಾರ್ಥನೆ ತೋರಣಮಹೂರ್ತ ಉಗ್ರಾಣಮಹೂರ್ತ ವಾಸ್ತು ರಾಕ್ಷೋಜ್ಞಾದಿ ಪ್ರಕ್ರಿಯೆಗಳು 

 ತಾರೀಕು ಹತ್ತರ ಭಾನುವಾರದಂದು ಶ್ರೀ ಕ್ಷೇತ್ರದ ನಾಗಾಲಯದಲ್ಲಿ ಪ್ರತಿಷ್ಠ ವರ್ಧಂತಿ ಮಹೋತ್ಸವದ ಪ್ರಯುಕ್ತ ಸರ್ವ ಪ್ರಾಯಶ್ಚಿತ ಪೂರ್ವಕ ಆಶ್ಲೇಷ ಬಲಿದಾನ , ವಟು ಆರಾಧನೆ ಬ್ರಹ್ಮಲಿಂಗೇಶ್ವರನ ಸನ್ನಿಧಾನದಲ್ಲಿ ನವಕ ಕಲಶ ಪ್ರಧಾನ ಹೋಮ ಕಲಶ ಅಭಿಷೇಕ, ಸುಬ್ರಮಣ್ಯ ಸ್ವಾಮಿಯ ಸನ್ನಿಧಾನದಲ್ಲಿ ಪವಮಾನ ಸೂಕ್ತ ಕಲಶಾಭಿಷೇಕ ಪರಿವಾರ ಪೂಜೆ ಪ್ರಸನ್ನ ಪೂಜೆ 

 ಮೇ 10 ರವಿವಾರದಂದು ಶ್ರೀ ದುರ್ಗಾ ಆದಿಶಕ್ತಿ ದೇವಿಯ ಪರಿವಾರ ದೇವರುಗಳಿಗೆ ಕಲಶಾರಾಧನೆ ಸ್ನಪನ ಕಲಶ ಅಭಿಷೇಕ  ಪರಿವಾರ ಪೂಜೆ ಅನ್ನ ಸಂತರ್ಪಣೆ 

 ತಾರೀಕು ಹನ್ನೊಂದು ಹತ್ತರ ಸಂಜೆ ಗಂಟೆ ಆರದಿಂದ ಬ್ರಹ್ಮ ಕಲಶದ ಮಂಡಲ ರಚನೆ, ಭುವನೇಶ್ವರಿ ಪೂಜೆ ಬ್ರಹ್ಮ ಕಲಶಾದಿವಾಸ ಅಧಿವಾಸ ಹೋಮಗಳು 

 ಮೇ 12 ಸೋಮವಾರ ಬೆಳಿಗ್ಗೆ ಗಂಟೆ ಆರರಿಂದ ಸ್ವಸ್ತಿ ಪುಣ್ಯಾಹವಾಚನ ಪಂಚಾಮೃತ ಅಭಿಷೇಕ, ಬೆಳಿಗ್ಗೆ 8.20ಕ್ಕೆ ಒದಗುವ ವೃಷಭ ಲಗ್ನ ಸುಮಹೂರ್ತದಲ್ಲಿ ಶ್ರೀಚಕ್ರ ಪೀಠ ಸುರಪೂಜಿತೆಗೆ ಪಂಚವಂಶತೆ ದ್ರವ್ಯ ಮೀಳಿತ ಅಷ್ಟೋತ್ತರ ಶತ ಬ್ರಹ್ಮಕುಂಬಾಭಿಷೇಕ ಪ್ರಸನ್ನ ಪೂಜೆ ಮಹಾಪೂಜೆ ಪಲ್ಲಪ ಪೂಜೆ ಮಹಾ ಅನ್ನ ಸಂತರ್ಪಣೆ, ಸಂಜೆ ಗಂಟೆ ಆರರಿಂದ ಆರಾಧನಾ ರಂಗ ಪೂಜಾ ಮಹೋತ್ಸವ ಬಲಿ ಉತ್ಸವ ಪಲ್ಲಕ್ಕಿ ಉತ್ಸವ ವಸಂತ ಪೂಜೆ ಅಷ್ಟಾವಧಾನ ಸೇವೆ ರಾತ್ರಿ ಪೂಜೆ ಪ್ರಸಾದ ವಿತರಣೆ 

 ಮೇ 13ರ ಮಂಗಳವಾರ ಬೆಳಿಗ್ಗೆ ಗಂಟೆ 8 ರಿಂದ ಶ್ರೀ   ಆರಾಧನೆ  ಮಹಾಸಂಪ್ರೋಕ್ಷಣೆ ಮಹಾಮಂತ್ರಾಕ್ಷತೆ ಮಹಾ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ  ಶ್ರೀಮತಿ ಕುಸುಮ ನಾಗರಾಜ್ ತಿಳಿಸಿರುತ್ತಾರೆ



Related posts

ಆ. 10 ರಂದು ಬಂಟರ ಸಂಘ ಮುಂಬಯಿ ವಸಯಿ – ದಹಾಣು ಪ್ರಾದೇಶಿಕ ಸಮಿತಿ ಮಹಿಳಾ ವಿಭಾಗದಿಂದ “ಆಟಿಡೊಂಜಿ ಬಂಟೆರ ಮಿನದನ” ಕಾರ್ಯಕ್ರಮ

Mumbai News Desk

ಶ್ರೀ ಸಿದ್ಧಿ ವಿನಾಯಕ ಯಕ್ಷಗಾನ ಮಂಡಳಿ ಮುಂಬಯಿ: ಇಂದು ಘನ್ಸೋಲಿಯಲ್ಲಿ 21ನೇ ವರ್ಷದ ಸಂಭ್ರಮಾಚರಣೆ; ‘ಪಂಜುರ್ಲಿ ಪ್ರತಾಪ’ ಯಕ್ಷಗಾನ ಪ್ರದರ್ಶನ

Mumbai News Desk

ಶಹಾಡ್‌ನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ 64ನೇ ವಾರ್ಷಿಕೋತ್ಸವ: ಏ. 12ರಿಂದ ಧಾರ್ಮಿಕ ಸಂಭ್ರಮ

Mumbai News Desk

ಶ್ರೀ ಮದ್ಭಾರತ ಮಂಡಳಿ ಮುಂಬೈ : ಜೂನ್ 20ರಿಂದ 149ನೇ ಪುಣ್ಯ ಗ್ರಂಥ ಪಾರಾಯಣ ಪ್ರಾರಂಭ

Mumbai News Desk

25 ವರ್ಷಗಳ ಪರಿಸರ ಕಾಳಜಿ, ಕರಾವಳಿ ಅಭಿವೃದ್ಧಿಯ ದೂರದೃಷ್ಟಿ: ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಾಧನೆಯ ಪಯಣ

Mumbai News Desk

ಎ. 12 ರಿಂದ 18 ರ ವರಗೆ ಶ್ರೀ ಕ್ಷೇತ್ರ ಉಂಡಾರು ಶ್ರೀವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವಾರ್ಷಿಕ ಉತ್ಸವ.

Mumbai News Desk