July 23, 2026
Mumbai News Kannada
ಸುದ್ದಿ

ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಇನ್ನಿಲ್ಲ







‘ಕಾಮಿಡಿ ಕಿಲಾಡಿಗಳು’ ಸೀಸನ್ 3ರ ವಿನ್ನರ್, ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜನಪ್ರಿಯ ಹಾಸ ಕಲಾವಿದ ರಾಕೇಶ್ ಪೂಜಾರಿ ನಿಧರಾಗಿದ್ದಾರೆ.
ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲೋಕದಲ್ಲಿ ಅಪಾರ ಖ್ಯಾತಿಗಳಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಸೋಮವಾರ ಬೆಳಗ್ಗಿನ ಜಾವ 3.30ಕ್ಕೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಉಸಿರುಳೆದಿದ್ದಾರೆ..
ಕಳೆದ ರಾತ್ರಿ ಅವರು ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿ ಡಾನ್ಸ್ ಮಾಡಿದ್ದರು.ನಿನ್ನೆಯಷ್ಟೇ ಕಾಂತರಾ ಚಾಪ್ಟರ್ 1 ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡಿದ್ದರು. ಸುಸ್ತು ಅಂತ ಸ್ನೇಹಿತರ ಬಳಿ ಹೇಳಿದಾಗ ತಕ್ಷಣ ರಾಕೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು ಎಂದು ತಿಳಿದುಬಂದಿದೆ.
ಜನಪ್ರಿಯ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು ಸೀಸನ್ -3ರ ಗ್ರಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿದ್ದ ರಾಕೇಶ್, ಉಡುಪಿಯ ಹೂಡೆ ನಿವಾಸಿಗಳಾದ ದಿನಕರ್ ಪೂಜಾರಿ ಮತ್ತು ಶಾಂಭವಿ ದಂಪತಿಗಳ ಪುತ್ರ. ರಾಕೇಶ್ ತಮ್ಮ ಶಾಲಾ ಶಿಕ್ಷಣವನ್ನು ಕೆಮ್ಮಣ್ಣು ಕಾರ್ಮೆಲ್ ಹೈಸ್ಕೂಲ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪಡೆದರು. ಅವರು ಪೈಲ್ವಾನ್, ಇದು ಎಂತ ಲೋಕವಯ್ಯ ಕನ್ನಡ ಸಿನಿಮಾ, ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೊಕೆಲ್ ತುಳು ಪ್ರಹಸನ, ನಾಟಕಗಳ್ಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ.



Related posts

ಕಾಪು ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಶಕ್ತಿ ಯೋಜನೆಯ ಅಡಿಯಲ್ಲಿ 500 ಕೋಟಿ ಪ್ರಯಾಣ – ಸಂಭ್ರಮ ಆಚರಣೆ

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಉಡುಪಿ1981-82 ಸಾಲಿನ ಹಳೆವಿದ್ಯಾರ್ಥಿಗಳಿಂದ ಸ್ನೇಹ ಸಮ್ಮಿಲನ, ಉಪನ್ಯಾಸಕರಿಗೆ ಸನ್ಮಾನ

Mumbai News Desk

ಮುಂಬಯಿ ಬಂಟರ ಸಂಘದ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರಿಗೆ ಮಾತೃ ವಿಯೋಗ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

Mumbai News Desk

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ

Mumbai News Desk