September 6, 2026
Mumbai News Kannada
ಸುದ್ದಿ

ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಇನ್ನಿಲ್ಲ





‘ಕಾಮಿಡಿ ಕಿಲಾಡಿಗಳು’ ಸೀಸನ್ 3ರ ವಿನ್ನರ್, ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜನಪ್ರಿಯ ಹಾಸ ಕಲಾವಿದ ರಾಕೇಶ್ ಪೂಜಾರಿ ನಿಧರಾಗಿದ್ದಾರೆ.
ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲೋಕದಲ್ಲಿ ಅಪಾರ ಖ್ಯಾತಿಗಳಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಸೋಮವಾರ ಬೆಳಗ್ಗಿನ ಜಾವ 3.30ಕ್ಕೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಉಸಿರುಳೆದಿದ್ದಾರೆ..
ಕಳೆದ ರಾತ್ರಿ ಅವರು ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿ ಡಾನ್ಸ್ ಮಾಡಿದ್ದರು.ನಿನ್ನೆಯಷ್ಟೇ ಕಾಂತರಾ ಚಾಪ್ಟರ್ 1 ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮ ಒಂದರಲ್ಲಿ ಪಾಲ್ಗೊಂಡಿದ್ದರು. ಸುಸ್ತು ಅಂತ ಸ್ನೇಹಿತರ ಬಳಿ ಹೇಳಿದಾಗ ತಕ್ಷಣ ರಾಕೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು ಎಂದು ತಿಳಿದುಬಂದಿದೆ.
ಜನಪ್ರಿಯ ಹಾಸ್ಯ ಕಾರ್ಯಕ್ರಮ ‘ಕಾಮಿಡಿ ಕಿಲಾಡಿಗಳು ಸೀಸನ್ -3ರ ಗ್ರಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿದ್ದ ರಾಕೇಶ್, ಉಡುಪಿಯ ಹೂಡೆ ನಿವಾಸಿಗಳಾದ ದಿನಕರ್ ಪೂಜಾರಿ ಮತ್ತು ಶಾಂಭವಿ ದಂಪತಿಗಳ ಪುತ್ರ. ರಾಕೇಶ್ ತಮ್ಮ ಶಾಲಾ ಶಿಕ್ಷಣವನ್ನು ಕೆಮ್ಮಣ್ಣು ಕಾರ್ಮೆಲ್ ಹೈಸ್ಕೂಲ್ ಮತ್ತು ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿನಲ್ಲಿ ಪಡೆದರು. ಅವರು ಪೈಲ್ವಾನ್, ಇದು ಎಂತ ಲೋಕವಯ್ಯ ಕನ್ನಡ ಸಿನಿಮಾ, ಪೆಟ್ಕಮ್ಮಿ, ಅಮ್ಮೆರ್ ಪೊಲೀಸ್, ಪಮ್ಮನ್ನೆ ದಿ ಗ್ರೇಟ್, ಉಮಿಲ್ ಮತ್ತು ಇಲ್ಲೊಕೆಲ್ ತುಳು ಪ್ರಹಸನ, ನಾಟಕಗಳ್ಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ.



Related posts

ತುಳು ಸಂಘ ಬೊರಿವಲಿ, ವಿಹಾರ ಕೂಟ, ಸ್ನೇಹ ಮಿಲನ

Mumbai News Desk

ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಬೆಂಗಳೂರು ವತಿಯಿಂದ ಪಿ.ಶಿವ ಕುಮಾರ್ ಅವರಿಗೆ ಸನ್ಮಾನ.

Mumbai News Desk

ಬಿಲ್ಲವರ ಎಸೋಸಿಯೇಶನ ನ ಮಾಜಿ ಉಪಾಧ್ಯಕ್ಷ ಸಿ. ಟಿ. ಸಾಲ್ಯಾನ್ ನಿಧನ

Mumbai News Desk

ಮತ್ಸ್ಯಗಂಧ ರೈಲಿನಲ್ಲಿ 45.8.ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

Mumbai News Desk

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (25/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk