July 23, 2026
Mumbai News Kannada
ಕ್ರೀಡೆ

ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ನಿವೃತ್ತಿ : 14 ವರ್ಷದ ಟೆಸ್ಟ್ ಕೆರಿಯರ್ ಅಂತ್ಯ‌







ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ. ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು.

ಟೀಂ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಇಂಗ್ಲೆಂಡ್ ಸರಣಿಗೂ ಮುನ್ನ ಕೊಹ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರೊಂದಿಗೆ 14 ವರ್ಷಗಳ ವೃತ್ತಿಜೀವನ ಅಂತ್ಯವಾಗಿದೆ.

ವಿರಾಟ್ ಕೊಹ್ಲಿ 123 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 48.7 ಸರಾಸರಿಯಲ್ಲಿ 9,230 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಮತ್ತು 31 ಅರ್ಧ ಶತಕಗಳು ಸೇರಿವೆ. 2024-25ರ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಕೊನೆಯ ಟೆಸ್ಟ್ ಪಂದ್ಯ ಆಡಿದರು. ಆ ಸರಣಿಯಲ್ಲಿ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಗಳಿಸಿ ಮಿಂಚಿದ್ದರು. ನಂತರದ ಕೊನೆಯ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಕೇವಲ 85 ರನ್ ಗಳಿಸಲು ಶಕ್ತರಾದರು.

ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಲು ಬಯಸಿರುವುದಾಗಿ ವಿರಾಟ್‌ ಕೊಹ್ಲಿ ಇತ್ತೀಚೆಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ (ಬಿಸಿಸಿಐ) ತಿಳಿಸಿದ್ದರು. ಆದರೆ, ತಮ್ಮ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದರು.

2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಕೊಹ್ಲಿ, ನಂತರ ಒಂದು ದಶಕಗಳ ಕಾಲ ತಂಡದ ಬ್ಯಾಟಿಂಗ್‌ ಆಧಾರ ಸ್ತಂಭವಾಗಿದ್ದರು. ನಂತರ ತಂಡದ ನಾಯಕತ್ವ ವಹಿಸಿಕೊಂಡರು. ಕೊಹ್ಲಿ ನಾಯಕತ್ವದಲ್ಲಿ ಭಾರತ ಟೆಸ್ಟ್‌ ತಂಡ ಪಾರುಪತ್ಯ ಮೆರೆಯಿತು. 2018-19ರಲ್ಲಿ ಆಸ್ಟ್ರೇಲಿಯಾದಲ್ಲಿ ಭಾರತ ಮೊದಲ ಬಾರಿಗೆ ಟೆಸ್ಟ್ ಸರಣಿ ಗೆದ್ದಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ ICC ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೇರಿತು. ಕೊಹ್ಲಿ ನಾಯಕತ್ವದಲ್ಲಿ ಭಾರತ 68 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 40 ಪಂದ್ಯಗಳಲ್ಲಿ ಗೆದ್ದಿದೆ.

ಟೆಸ್ಟ್‌ಗೆ ವಿದಾಯ ಘೋಷಿಸಿರುವ ಕೊಹ್ಲಿ ಏಕದಿನ ಕ್ರಿಕೆಟ್ ಮುಂದುವರಿಯಲಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ್ದು, ಭಾರತೀಯ ಕ್ರಿಕೆಟ್‌ ಪ್ರೇಮಿಗಳಿಗೆ ಬೇಸರ ತರಿಸಿರುವುದಂತೂ ಹೌದು. ಆದರೆ, ಒಂದು ದಶಕಗಳ ಕಾಲ ಕೊಹ್ಲಿ ಟೆಸ್ಟ್‌ನಲ್ಲಿ ತೋರಿದ ಪ್ರದರ್ಶನವನ್ನು ಯಾರಿಂದಲೂ ಮರೆಯಲು ಸಾಧ್ಯವಿಲ್ಲ. ಯಾಕೆಂದರೆ, ಟೆಸ್ಟ್‌ ಕ್ರಿಕೆಟ್‌ನಲ್ಲಿ ಅವರು ಮೂಡಿಸಿದ ಛಾಪು ಅಂತಹದ್ದಾಗಿದೆ.



Related posts

ಉಡುಪಿ ಜಿಲ್ಲಾ ಮಟ್ಟದ ಗ್ರಾಮೀಣ ಐಟಿ ರಸಪ್ರಶ್ನೆ ಸ್ಪರ್ಧೆ: ಪಡುಬಿದ್ರಿ ಸಾಗರ ವಿದ್ಯಾ ಮಂದಿರದ ಧೃತಿ ರವಿ ಕುಮಾರ್ ವಿಭಾಗೀಯ ಮಟ್ಟಕ್ಕೆ ಆಯ್ಕೆ

Mumbai News Desk

ಎನ್ ಕೆ ಇ ಎಸ್ ಪ್ರೊ ಕಬಡ್ಡಿ ಸೀಸನ್ 1 – ಬಹುಮಾನ ವಿತರಣೆ

Chandrahas

ಉಡುಪಿ ಮೂಲದ ಕನ್ನಡತಿ, ದುಬಾಯಿಯ ಗುಲ್ಶನ್ ಬಾನು ಕಾಜಿಯಿಂದ ಜಪಾನ್‌ನಲ್ಲಿ ಐತಿಹಾಸಿಕ ದಾಖಲೆ

Mumbai News Desk

ಭಾರತ – ಇಂಗ್ಲೆಂಡ್ 5ನೇ ಟೆಸ್ಟ್ : 6 ರನ್ ಗಳ ರೋಚಕ ಜಯಗಳಿಸಿದ ಭಾರತ, ಅಂಡರ್ಸನ್- ತೆಂಡೂಲ್ಕರ್ ಟ್ರೋಫಿ ಸಮಬಲ

Mumbai News Desk

ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್   ಲೀಗ್ ಕ್ರಿಕೆಟ್ ಟೂರ್ನಮೆಂಟ್ ಆರಂಭ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯ ಇಂಟರ್ನ್ಯಾಷನಲ್ ಶಾಲೆಯ ಆಶ್ರಯದಲ್ಲಿ ರಾಷ್ಟ್ರಮಟ್ಟದ  ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿಗಳಿಗೆ  ವಾಲಿಬಾಲ್‌ ಪಂದ್ಯಾಟ

Mumbai News Desk