28.4 C
Mumbai
March 7, 2026
Mumbai News Kannada
ಸುದ್ದಿ

ಶ್ರೀಧರ ವೆಂಕಟೇಶ ಕುಲಕರ್ಣಿ ನಿಧನ






13/05/25,ಕಲ್ಯಾಣ (ಪ):ತಿಳಿಸುವುದೇನೆಂದರೆ ಸಂಘದ ಪ್ರಮುಖ ಕಾರ್ಯಕರ್ತ ಶ್ರೀ ಶ್ರೀಧರ ವೆಂಕಟೇಶ ಕುಲಕರ್ಣಿಯವರು ವಯಸ್ಸು 81,ಅಲ್ಪ ಕಾಲದ ಅನಾರೋಗ್ಯದ ನಂತರ 11/05/25ರಂದು ಮಧ್ಯಾಹ್ನ ತಮ್ಮ ಸ್ವಗ್ರಹದಲ್ಲಿ ದೈವಾಧೀನರಾಗಿದ್ದಾರೆ ಎಂದು ತಿಳಿಸುವುದಕ್ಕೆ ವಿಷಾದಿಸುತ್ತೇವೆ. ಬಾಗಲಕೋಟ, ಕರ್ನಾಟಕದಲ್ಲಿ 1944ರಲ್ಲಿ ಜನಿಸಿದ ಶ್ರೀಯುತರು ಉದ್ಯೋಗ ನಿಮಿತ್ತ 1967ರಲ್ಲಿ ಮುಂಬೈಗೆ ಆಗಮಿಸಿದ್ದು, ಮಹಾರಾಷ್ಟ್ರ ಸರಕಾರದಲ್ಲಿ ಎಕ್ಸಸೖಸ್(Excise) ವಿಭಾಗದಲ್ಲಿ ಅಧಿಕಾರಿಗಳಾಗಿ 38 ವರ್ಷ ಕಾರ್ಯ ನಿರ್ವಹಿಸಿ 2005ರಲ್ಲಿ ನಿವೃತ್ತರಾದರು. ತಮ್ಮ ಉದ್ಯೋಗ ಅವಧಿಯಲ್ಲಿ ಓರ್ವ ನಿಷ್ಟಾವಂತ ಪ್ರಾಮಾಣಿಕ ಅಧಿಕಾರಿಯಾಗಿ ಹೆಸರು ಗಳಿಸಿದ ಶ್ರೀಯುತರು ಸಂಘದ ಮಹಾ ಪೋಷಕರು ಹಾಗೂ ಸಂಪರ್ಕ ಅಧಿಕಾರಿಗಳಾಗಿ ಉತ್ತಮವಾಗಿ ಕಾರ್ಯ ನಿರ್ವಹಿಸಿದರು. ಹಲವಾರು ಅಖಿಲ ಭಾರತ ಹೊರನಾಡ ಕನ್ನಡಿಗರ ಸಮಾವೇಶಗಳಲ್ಲಿ ಸಂಘವನ್ನು ಪ್ರತಿನಿಧಿಸಿದ ಇವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಕೂಡಾ ಆಗಿದ್ದರು. ಮೃತರ ಆತ್ಮಕ್ಕೆ ಸದ್ಗತಿ ಕೋರುತ್ತಾ, ಪತ್ನಿ, ಮಕ್ಕಳು, ಮೊಮ್ಮಕ್ಕಳು, ಸಮಸ್ತ ಹಿತ ಚಿಂತಕರು ಹಾಗೂ ಸಂಘದ ಸದಸ್ಯರಿಗೆ ಇವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.
ಅಧ್ಯಕ್ಷರು ಹಾಗೂ ಸಮಸ್ತ ಸದಸ್ಯರು
ಕರ್ನಾಟಕ ಸಂಘ, ಕಲ್ಯಾಣ



Related posts

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ಬಾಲಿವುಡ್ ನ ಹಿರಿಯ ದಿಗ್ಗಜ ನಟ ಧರ್ಮೇಂದ್ರ ಇನ್ನಿಲ್ಲ, ‘ಹೀಮ್ಯಾನ್’ ಕಳೆದುಕೊಂಡ ಭಾರತೀಯ ಚಿತ್ರರಂಗ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ : ಶರನ್ನವರಾತ್ರಿ ಉತ್ಸವ ಆರಂಭ

Mumbai News Desk

ಚಿತ್ರರಂಗದ ಮಿನುಗು ತಾರೆ ರೀಟಾ ಆರ್. ಅಂಚನ್ ವಿಧಿವಶ

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk