30.5 C
Mumbai
June 8, 2026
Mumbai News Kannada
ಸುದ್ದಿ

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು





ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯ ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಎರಡು ಕಂಬಳ ಕೋಣಗಳು ಅಸುನೀಗಿದ ಘಟನೆ ಮೇ 30ರಂದು ರಾತ್ರಿ ನಡೆದಿದೆ.
ಮೇಲಾಡಿ ಬಾವ ಅಶೋಕ್ ಶೆಟ್ಟಿ ಅವರಿಗೆ ಸೇರಿದ ಹಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಹಲವಾರು ಕಂಬಳ ಕೂಟಗಳಲ್ಲಿ ಬಹುಮಾನ ಪಡೆದಿದ್ದ ಅಪ್ಪು ಮತ್ತು ತೋನ್ಸೆ ಎಂಬ ಕೋಣಗಳು ಮೃತಪಟ್ಟಿವೆ.
ಅಪ್ಪು ಮತ್ತು ತೋನ್ಸೆ ಕೋಣಗಳು 2022- 23 ಋತುವಿನ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಅದರಲ್ಲೂ ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ, ಕನೆಹಲಗೆ ವಿಭಾಗದಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿದೆ. ಮತ್ತೊಂದು ಕೋಣ ಅಪ್ಪು ಕನೆಹಲಗೆ ಮತ್ತು ಅಡ್ಡ ಹಲಗೆ ವಿಭಾಗದಲ್ಲಿ ಸಾಧನೆ ಮಾಡಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತಿದೆ. ಅದೆಷ್ಟೋ ಕಂಬಳ ಕರೆಗಳಲ್ಲಿ ಓಡಿ ಪ್ರಶಸ್ತಿಗೆ ಕೊರಳೋಡಿದ್ದ ಕೋಣಗಳೆರಡು ಯಾರೂ ಊಹಿಸದ ರೀತಿಯಲ್ಲಿ ಇಹಲೋಕ ತ್ಯಜಿಸಿದ್ದು ಒಂದು ದುರಂತ.



Related posts

ಸಾಣೂರು : ಮುಟ್ಟಿ ಸಿ.ಕುಕ್ಯಾನ್ ನಿಧನ.

Mumbai News Desk

ದೇವಿಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಅಮೃತ ಮಹೋತ್ಸವ ‘ಶ್ರೀ ದುರ್ಗಾಮೃತ’ ಸ್ಮರಣ ಸಂಚಿಕೆ ಬಿಡುಗಡೆ

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಉಡುಪಿಯಲ್ಲಿ ಜರಗಿದ ಯಶಸ್ವಿ ಸರಣಿ ಕಾರ್ಯಕ್ರಮಗಳು

Mumbai News Desk

ಧಾರ್ಮಿಕ ಕ್ಷೇತ್ರಗಳ ಬಗ್ಗೆ ಸ್ಥಾಪಿತ ಹಿತಾ ಶಕ್ತಿಗಳ ಅಪಪ್ರಚಾರ ಮೂಲಕ ಭಕ್ತಾಭಿಮಾನಿಗಳ ದಿಕ್ಕು ತಪ್ಪಿಸುವುದು ಸನಾತನ ಧರ್ಮಕ್ಕೆ ಮಾರಕ – ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಫರಂಗಿಪೇಟೆ : ನಾಪತ್ತೆಯಾದ ದಿಗಂತ್ 10 ದಿನಗಳ ಬಳಿಕ ಇಂದು (ಮಾ. 8) ಉಡುಪಿಯಲ್ಲಿ ಪತ್ತೆ

Mumbai News Desk