30 C
Mumbai
April 24, 2026
Mumbai News Kannada
ಸುದ್ದಿ

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು





ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯ ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಎರಡು ಕಂಬಳ ಕೋಣಗಳು ಅಸುನೀಗಿದ ಘಟನೆ ಮೇ 30ರಂದು ರಾತ್ರಿ ನಡೆದಿದೆ.
ಮೇಲಾಡಿ ಬಾವ ಅಶೋಕ್ ಶೆಟ್ಟಿ ಅವರಿಗೆ ಸೇರಿದ ಹಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಹಲವಾರು ಕಂಬಳ ಕೂಟಗಳಲ್ಲಿ ಬಹುಮಾನ ಪಡೆದಿದ್ದ ಅಪ್ಪು ಮತ್ತು ತೋನ್ಸೆ ಎಂಬ ಕೋಣಗಳು ಮೃತಪಟ್ಟಿವೆ.
ಅಪ್ಪು ಮತ್ತು ತೋನ್ಸೆ ಕೋಣಗಳು 2022- 23 ಋತುವಿನ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಅದರಲ್ಲೂ ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ, ಕನೆಹಲಗೆ ವಿಭಾಗದಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿದೆ. ಮತ್ತೊಂದು ಕೋಣ ಅಪ್ಪು ಕನೆಹಲಗೆ ಮತ್ತು ಅಡ್ಡ ಹಲಗೆ ವಿಭಾಗದಲ್ಲಿ ಸಾಧನೆ ಮಾಡಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತಿದೆ. ಅದೆಷ್ಟೋ ಕಂಬಳ ಕರೆಗಳಲ್ಲಿ ಓಡಿ ಪ್ರಶಸ್ತಿಗೆ ಕೊರಳೋಡಿದ್ದ ಕೋಣಗಳೆರಡು ಯಾರೂ ಊಹಿಸದ ರೀತಿಯಲ್ಲಿ ಇಹಲೋಕ ತ್ಯಜಿಸಿದ್ದು ಒಂದು ದುರಂತ.



Related posts

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

Mumbai News Desk

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk

ಭಾಯಂದರ್ (ಪೂ) ಕ್ರೌನ್ ಬಿಸಿನೆಸ್ ಹೋಟೆಲ್ ಉದ್ಘಾಟನೆ.

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk