September 6, 2026
Mumbai News Kannada
ಸುದ್ದಿ

ಕಾರ್ಕಳ : ಹಟ್ಟಿಯಲ್ಲಿ ಬೆಂಕಿ ಅವಘಡದಲ್ಲಿ ಇಹಲೋಕ ತ್ಯಜಿಸಿದ ಕಂಬಳದ ಕೋಣಗಳು





ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯ ಹಟ್ಟಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಎರಡು ಕಂಬಳ ಕೋಣಗಳು ಅಸುನೀಗಿದ ಘಟನೆ ಮೇ 30ರಂದು ರಾತ್ರಿ ನಡೆದಿದೆ.
ಮೇಲಾಡಿ ಬಾವ ಅಶೋಕ್ ಶೆಟ್ಟಿ ಅವರಿಗೆ ಸೇರಿದ ಹಟ್ಟಿಯಲ್ಲಿ ಈ ಘಟನೆ ನಡೆದಿದ್ದು, ಹಲವಾರು ಕಂಬಳ ಕೂಟಗಳಲ್ಲಿ ಬಹುಮಾನ ಪಡೆದಿದ್ದ ಅಪ್ಪು ಮತ್ತು ತೋನ್ಸೆ ಎಂಬ ಕೋಣಗಳು ಮೃತಪಟ್ಟಿವೆ.
ಅಪ್ಪು ಮತ್ತು ತೋನ್ಸೆ ಕೋಣಗಳು 2022- 23 ಋತುವಿನ ಕಂಬಳದಲ್ಲಿ ಕನೆಹಲಗೆ ವಿಭಾಗದಲ್ಲಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದವು. ಅದರಲ್ಲೂ ತೋನ್ಸೆ ಕೋಣವು ನೇಗಿಲು ಕಿರಿಯ, ನೇಗಿಲು ಹಿರಿಯ, ಹಗ್ಗ ಹಿರಿಯ, ಅಡ್ಡ ಹಲಗೆ, ಕನೆಹಲಗೆ ವಿಭಾಗದಲ್ಲಿ ಸ್ಪರ್ಧಿಸಿ ಎಲ್ಲಾ ವಿಭಾಗದಲ್ಲಿ ಪ್ರಶಸ್ತಿ ಪಡೆದು ಸಾಧನೆ ಮಾಡಿದೆ. ಮತ್ತೊಂದು ಕೋಣ ಅಪ್ಪು ಕನೆಹಲಗೆ ಮತ್ತು ಅಡ್ಡ ಹಲಗೆ ವಿಭಾಗದಲ್ಲಿ ಸಾಧನೆ ಮಾಡಿದೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗುತಿದೆ. ಅದೆಷ್ಟೋ ಕಂಬಳ ಕರೆಗಳಲ್ಲಿ ಓಡಿ ಪ್ರಶಸ್ತಿಗೆ ಕೊರಳೋಡಿದ್ದ ಕೋಣಗಳೆರಡು ಯಾರೂ ಊಹಿಸದ ರೀತಿಯಲ್ಲಿ ಇಹಲೋಕ ತ್ಯಜಿಸಿದ್ದು ಒಂದು ದುರಂತ.



Related posts

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಸರಳ ಸಜ್ಜನಿಕೆಯ ಸಮಾಜ ಸೇವಕ ಕೃಷ್ಣ ಶೀನ ಸಾಲಿಯಾನ್ ನಿಧನ

Mumbai News Desk

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ

Mumbai News Desk

ಆರ್ಯಭಟ ಪುರಸ್ಕೃತ ಕೆ.ಕೆ. ಶೆಟ್ಟರಿಗೆ ಹುಟ್ಟೂರ ಅಭಿನಂದನೆ

Mumbai News Desk

ಕರ್ನಾಟಕದ ಜನರಿಗೆ ಹೊಸ ವರ್ಷಕ್ಕೆ ಶಾಕ್ ನೀಡಿದ ಸರ್ಕಾರ – ಬಸ್ ಪ್ರಯಾಣ ದರ ಶೇಕಡ 15ರಷ್ಟು ಏರಿಕೆ

Mumbai News Desk

ರಾಕ್ಷಸ ಪಾತ್ರಗಳಲ್ಲಿ ಮೆರೆದು, ಯಕ್ಷರಂಗದಲ್ಲಿ ಮಿಂಚಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಇನ್ನಿಲ್ಲ

Mumbai News Desk