September 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.






 

ಮಂಗಳೂರು ನ 12. ಜಾಗತಿಕ ಬಂಟರ ಸಂಘಗಳ ಒಕ್ಕೂಟದ(ರಿ.) ಮಂಗಳೂರು ಇದರ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಸಮಾಜ ಕಲ್ಯಾಣ ಯೋಜನೆಯಡಿ ಮಂಗಳೂರಿನ ತಲಪಾಡಿ ನಿವಾಸಿ  ಜಯಲತಾ ಶೆಟ್ಟಿಯವರ ವೈದ್ಯಕೀಯ ಶಸ್ತ್ರಚಿಕಿತ್ಸೆಗಾಗಿ ಮಂಜೂರಾದ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಮಂಗಳೂರಿನ ಆಶ್ರಯ ಕಾಲೋನಿ ನಿವಾಸಿ ರೇಷ್ಮಾ ಶೆಟ್ಟಿಯವರ ಪುತ್ರ 12 ವರ್ಷದ ರಿತ್ವಿಕ್ ಶೆಟ್ಟಿಯವರು ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ  ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಉಡುಪಿಯ ಹೆಗ್ಗುoಜೆ ಗ್ರಾಮದ ನಿವಾಸಿ  ವಿಜಯ ನಾಯಕ್ ರವರು ಕಾಲಿನ ಅಂಗವೈಕಲ್ಯದಿಂದ ಬಳಲುತ್ತಿದ್ದು ನಡೆದಾಡಲು ಕಷ್ಟಕರವಾಗಿದ್ದು ಅವರ ವೈದ್ಯಕೀಯ ಚಿಕಿತ್ಸೆಗಾಗಿ  ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಕಾಸರಗೋಡಿನ ನಿವಾಸಿ  ರವೀಂದ್ರ ರೈ ಯವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ವೈದ್ಯಕೀಯ ಚಿಕಿತ್ಸೆಗೆ ಮಂಜೂರಾದ ಸಹಾಯ ಧನದ ಚೆಕ್ಕನ್ನು ಅವರ ಪತ್ನಿ  ಸರಸ್ವತಿ ರೈ ಯವರಿಗೆ ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

 ಮಂಗಳೂರಿನ ಮೂಡಬಿದ್ರೆ ನಿವಾಸಿ ಶ್ರೀ ಶಿವಪ್ಪ ಶೆಟ್ಟಿಯವರು ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಅವರಿಗೆ ಮನೆ ನಿರ್ಮಾಣಕ್ಕೆ ಸಹಾಯ ಧನದ ಚೆಕ್ಕನ್ನು ಒಕ್ಕೂಟದ ಕಚೇರಿಯಲ್ಲಿ ಹಸ್ತಾoತರಿಸಿದರು.

ಈ ಸಂದರ್ಭದಲ್ಲಿ ಮಾಜಿ ಕೋಶಾಧಿಕಾರಿ ಶ್ರೀ ಕೊಲ್ಲಾಡಿ ಬಾಲಕೃಷ್ಣ ರೈ, ಕಾರ್ಯಕಾರಿ ಸಮಿತಿ ಸದಸ್ಯರಾದ ಶ್ರೀ ಅಮರೇಶ್ ಶೆಟ್ಟಿ ತಿರುವಾಜೆ, ಆಹ್ವಾನಿತ ಸದಸ್ಯರಾದ ಶ್ರೀ ರವಿರಾಜ್ ಶೆಟ್ಟಿ ಜತ್ತಬೆಟ್ಟು, ಆಡಳಿತಾಧಿಕಾರಿ ಶ್ರೀ ಸಚ್ಚಿದಾನಂದ ಹೆಗ್ಡೆ ಕೊಳ್ಕೆಬೈಲ್, ಪಲಾನುಭವಿಗಳ ಕುಟುಂಬಸ್ಥರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.



Related posts

ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಸಿಕೊಳ್ಳುವಂತೆ ಎಚ್ಚರವಹಿಸಲು ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಕರೆ

Mumbai News Desk

ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಮುಂಬೈಯ ನಿಷ್ಠಾವಂತ ಪತ್ರಕರ್ತ ನವೀನ್ ಕೆ ಇನ್ನ ಆಯ್ಕೆ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (16/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಂತಿ, ಸೌಹಾರ್ದತೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬದ್ದ : ಪತ್ರಿಕಾಗೋಷ್ಥಿಯಲ್ಲಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.

Mumbai News Desk

ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

Mumbai News Desk