30 C
Mumbai
April 24, 2026
Mumbai News Kannada
ತುಳುನಾಡು

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ





ಯಕ್ಷಗಾನ ಯುವಮನಸುಗಳಿಗೂ ಆಪ್ತವಾಗಲು ಪಟ್ಲರ ಶ್ರಮ ಕಾರಣ“ -ನಾಡೋಜ ಜಿ.ಶಂಕರ್*


ಚಿತ್ರ ವರದಿ : ದಿನೇಶ್ ಕುಲಾಲ್

ಮಂಗಳೂರು ಜೂ1. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ದಶಮ ಸಂಭ್ರಮ ಕಾರ್ಯಕ್ರಮದ ರಾಷ್ಟ್ರೀಯ ಕಲಾ ಸಮ್ಮೇಳನ ಆದಿತ್ಯವಾರ ಅಡ್ಯಾರ್ ಗಾರ್ಡನ್ ನಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಬಳಿಕ ಮಾತಾಡಿದ ನಾಡೋಜ ಜಿ.ಶಂಕರ್ ಅವರು, “ಕಳೆದ 10 ವರ್ಷಗಳಿಂದ ಪಟ್ಲ ಫೌಂಡೇಶನ್ ಟ್ರಸ್ಟ್ ಜನಮೆಚ್ಚಿದ ಕೆಲಸವನ್ನು ಮಾಡುತ್ತ ಬಂದಿದೆ. ಈಗಿನ ಪೀಳಿಗೆ ಯಕ್ಷಗಾನ ಕಲೆಯ ಬಗ್ಗೆ ಅಷ್ಟಾಗಿ ಅಭಿರುಚಿಯನ್ನು ಹೊಂದಿಲ್ಲ. ಆದರೆ ಪಟ್ಲರ ಕಾರ್ಯ ಸಾಧನೆಯಿಂದ ಯಕ್ಷಗಾನ ಇಂದು ಯುವ ಮನಸುಗಳಿಗೂ ಆಪ್ತವಾಗಿದೆ. ಉಡುಪಿಯಲ್ಲೂ ನಮ್ಮ ಟ್ರಸ್ಟ್ ಪಟ್ಲರ ಜೊತೆಗೆ ಕೈಜೋಡಿಸಲಿದೆ. ಇದೊಂದು ಒಳ್ಳೆಯ ಕಾರ್ಯಕ್ರಮ. ಪಟ್ಲರ ಜೊತೆಗೆ ಎಲ್ಲರೂ ಒಗ್ಗಟ್ಟಾಗಿ ದುಡಿದಾಗ ಕಲಾವಿದರ ಬದುಕು ಹಸನಾಗುತ್ತದೆ” ಎಂದರು.
ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಮಾತಾಡಿ, “ಯಕ್ಷಗಾನ ಮಲೆನಾಡು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅತ್ಯುನ್ನತ ಕಲೆ. ನಮ್ಮ ಕ್ಷೇತ್ರದ ಮಕ್ಕಳಿಗೆ ಯಕ್ಷಗಾನ ಕಲಿಸುತ್ತಿರುವ ಪಟ್ಲ ಸತೀಶ್ ಶೆಟ್ಟಿಯವರು ಅಭಿನಂದನಾರ್ಹರು. ಇಂತಹ ಕಾರ್ಯಕ್ಕೆ ನಾವೆಲ್ಲರೂ ಬೆಂಬಲ ನೀಡಬೇಕಿದೆ“ ಎಂದರು.
ವೇದಿಕೆಯಲ್ಲಿ ಆದಿತ್ಯ ಕಿಮ್ಮನೆ, ಮಂಗಳೂರು ಕುಲಪತಿ ಪ್ರೊ.ಕೆ.ಎಲ್.ಧರ್ಮ, ರಾಜೇಶ್ ಕಾರಂತ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಮುನಿಯಾಲ್ ಉದಯ ಕುಮಾರ್ ಶೆಟ್ಟಿ, ದಶಮ ಸಂಭ್ರಮದ ಅಧ್ಯಕ್ಷ ಶಶಿಧರ್ ಶೆಟ್ಟಿ ಬರೋಡ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾ ಗೌರವ-2025 ಅನ್ನು ಅಲಂಗಾರು ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಈಶ್ವರ ಭಟ್, ಮಂಗಳೂರು ವಿವಿ ಮಾಜಿ ಕುಲಪತಿ ಪ್ರೊ. ಬಿ.ಎ. ವಿವೇಕ್ ರೈ, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ನಿವೃತ್ತ ಯೋಧ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರ ಸುಳ್ಯ ಇದರ ಜೀವನ್ ರಾಮ್ ಸುಳ್ಯ ಅವರಿಗೆ ಪ್ರದಾನ ಮಾಡಲಾಯಿತು. ಸಾಹಿಲ್ ರೈ ಕಾರ್ಯಕ್ರಮ ನಿರೂಪಿಸಿದರು.
B. Dinesh Kulal
Mob.: 9821868674



Related posts

ಹೆಜಮಾಡಿ ಕುದುರೆ ಜಾರಂದಾಯ ದೈವಸ್ಥಾನ – ವಾರ್ಷಿಕ ಬಂಡಿ ನೇಮೋತ್ಸವ ಸಂಪನ್ನ

Mumbai News Desk

ನಾಗೇಶ ಎಲ್. ಕುಲಾಲ್ ಕುಳಾಯಿ ಅವರು ಸ್ವರ್ಣ ಕುಂಭ ಸಹಕಾರಿ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆ

Mumbai News Desk

ಮುಲ್ಕಿ ಸೀಮೆಯ ಅರಸು ಕಂಬಳಕ್ಕೆ ಚಾಲನೆ. ಕಂಬಳ ತುಳುನಾಡಿನ ಸಂಸ್ಕೃತಿಯ ಪ್ರತೀಕ:ಐಕಳ ಹರೀಶ್ ಶೆಟ್ಟಿ

Mumbai News Desk

ತುಳು ರಂಗಭೂಮಿಯಲ್ಲಿ ಐತಿಹಾಸಿಕ ಮೈಲಿಗಲ್ಲು:ಶ್ರೀಮತಿ ಲಾವಣ್ಯ ವಿಶ್ವಾಸ್ ದಾಸ್ ನಿರ್ದೇಶನದ “ಜೋಡು ಜೀಟಿಗೆ “ 100ನೇ ಪ್ರದರ್ಶನ – 100 ಕಲಾವಿದರಿರುವ ಏಕೈಕ ತಂಡದ ಅಪೂರ್ವ ಸಾಧನೆ

Mumbai News Desk

ಕನ್ನಡ ಕಿರುತೆರೆ ನಟಿ, ‘ಬಿಗ್ ಬಾಸ್’ ಖ್ಯಾತಿಯ ಕಾವ್ಯ ಶಾಸ್ತ್ರೀ ಅವರಿಂದ ಕಾಪು ಶ್ರೀ ಹೊಸ ಮಾರಿಗುಡಿ ದೇವಿಗೆ ವಿಶೇಷ ಪೂಜೆ: ನವದುರ್ಗಾ ಲೇಖನ ಸಮರ್ಪಣೆ

Mumbai News Desk

ಕಲ್ಯಾಣಪುರ : ಸಂತೆಕಟ್ಟೆ ಬಿಲ್ಲವರ ಸೇವಾಸಂಘ (ರಿ ), ನಯಂಪಳ್ಳಿ – ಸಂತೆಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆ

Mumbai News Desk