July 23, 2026
Mumbai News Kannada
ಸುದ್ದಿ

ಹಾಸ್ಯ ನಟ ರಾಕೇಶ್‌ ಪೂಜಾರಿ ಮನೆಗೆ ಕೊನೆಗೂ ರಿಷಬ್‌ ಶೆಟ್ಟಿ ದಂಪತಿ ಭೇಟಿ







 ಇತ್ತೀಚೆಗೆ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ ಹಾಸ್ಯನಟ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ನಟ ರಿಷಬ್ ಶೆಟ್ಟಿ ಭೇಟಿ ಮಾಡಿ ಕುಟುಂಸ್ಥರೊಂದಿಗೆ ಸಾಂತ್ವನ ಹೇಳಿದ್ದಾರೆ.

ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದರು. ರಾಕೇಶ್ ನಿಧನರಾದಾಗ ಈ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಅಂತಿಮ ದರ್ಶನ ಪಡೆಯಲು ಬರಲಿಲ್ಲ ಎಂಬುದು ಸಾಕಷ್ಟು ಚರ್ಚೆ ಆಗಿತ್ತು.

ಇದೀಗ 21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಥ್ ನೀಡಿದರು. ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ ಮನೆ ಇದೆ. ಅಲ್ಲಿ ರಾಕೇಶ್ ತಂಗಿ ಮತ್ತು ತಾಯಿ ವಾಸವಾಗಿದ್ದಾರೆ. ಅವರಿಗೆ ರಿಷಬ್ ಶೆಟ್ಟಿ ಸಾಂತ್ವನ ಹೇಳಿದ್ದಾರೆ.

ಅಂದಹಾಗೆ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಬಿಸಿಯಾಗಿದ್ದು, ಇದೇ ಚಿತ್ರದಲ್ಲಿ ನಟ ರಾಕೇಶ್ ಪೂಜಾರಿ ನಟಿಸಿದ್ದರು. ಈ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರಿಗೂ ಒಂದು ವಿಶೇಷ ಪಾತ್ರ ನೀಡಲಾಗಿತ್ತು. ಶೂಟಿಂಗ್​ನಲ್ಲಿ ಕೂಡ ಅವರು ಪಾಲ್ಗೊಂಡಿದ್ದರು. ಆದರೆ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ನಿಧನರಾದರು.



Related posts

ಹಿರಿಯ ರಂಗಕರ್ಮಿ, ಚಿತ್ರ ನಿರ್ಮಾಪಕ ಸದಾನಂದ ಸುವರ್ಣ ನಿಧನ

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk

ನಾವುಂದ ಮೂರ್ತೆದಾರರ ಸೊಸೈಟಿಯಿಂದ 9 ಲಕ್ಷ ರೂ. ಠೇವಣಿ ಹಣ ವಂಚನೆ : 16 ಮಂದಿಯ ವಿರುದ್ದ ಪ್ರಕರಣ ದಾಖಲು

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (13/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ

Mumbai News Desk