28.4 C
Mumbai
March 7, 2026
Mumbai News Kannada
ಸುದ್ದಿ

ಹಾಸ್ಯ ನಟ ರಾಕೇಶ್‌ ಪೂಜಾರಿ ಮನೆಗೆ ಕೊನೆಗೂ ರಿಷಬ್‌ ಶೆಟ್ಟಿ ದಂಪತಿ ಭೇಟಿ





 ಇತ್ತೀಚೆಗೆ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ ಹಾಸ್ಯನಟ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ನಟ ರಿಷಬ್ ಶೆಟ್ಟಿ ಭೇಟಿ ಮಾಡಿ ಕುಟುಂಸ್ಥರೊಂದಿಗೆ ಸಾಂತ್ವನ ಹೇಳಿದ್ದಾರೆ.

ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದರು. ರಾಕೇಶ್ ನಿಧನರಾದಾಗ ಈ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಅಂತಿಮ ದರ್ಶನ ಪಡೆಯಲು ಬರಲಿಲ್ಲ ಎಂಬುದು ಸಾಕಷ್ಟು ಚರ್ಚೆ ಆಗಿತ್ತು.

ಇದೀಗ 21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಥ್ ನೀಡಿದರು. ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ ಮನೆ ಇದೆ. ಅಲ್ಲಿ ರಾಕೇಶ್ ತಂಗಿ ಮತ್ತು ತಾಯಿ ವಾಸವಾಗಿದ್ದಾರೆ. ಅವರಿಗೆ ರಿಷಬ್ ಶೆಟ್ಟಿ ಸಾಂತ್ವನ ಹೇಳಿದ್ದಾರೆ.

ಅಂದಹಾಗೆ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಬಿಸಿಯಾಗಿದ್ದು, ಇದೇ ಚಿತ್ರದಲ್ಲಿ ನಟ ರಾಕೇಶ್ ಪೂಜಾರಿ ನಟಿಸಿದ್ದರು. ಈ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರಿಗೂ ಒಂದು ವಿಶೇಷ ಪಾತ್ರ ನೀಡಲಾಗಿತ್ತು. ಶೂಟಿಂಗ್​ನಲ್ಲಿ ಕೂಡ ಅವರು ಪಾಲ್ಗೊಂಡಿದ್ದರು. ಆದರೆ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ನಿಧನರಾದರು.



Related posts

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk

ಶಾಕಿಂಗ್ ನ್ಯೂಸ್: ಕಾಮಿಡಿ ಕಿಲಾಡಿ-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಇನ್ನಿಲ್ಲ

Mumbai News Desk

ಹಿರಿಯ ರಂಗ ಕಲಾವಿದ ಸುಂದರ ಮೂಡಬಿದ್ರಿ ಕುಲಾಲ ಸಮಾಜದ ಗೌರವ. 

Mumbai News Desk

ಸುರತ್ಕಲ್: ಸಿಲಿಂಡರ್ ಸ್ಫೋಟ ಪ್ರಕರಣ ತೀವ್ರವಾಗಿ ಗಾಯಗೊಂಡ ಮಹಿಳೆಯರಿಬ್ಬರ ಸಾವು

Mumbai News Desk

ಮಣ್ಣಿನ ಮಗನ ಜಾಗತಿಕ ಗರ್ಜನೆ: ಆಸ್ಕರ್ ಅಂಗಳಕ್ಕೆ ‘ಕಾಂತಾರ ಚಾಪ್ಟರ್ ಒನ್’ ಲಗ್ಗೆ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk