September 6, 2026
Mumbai News Kannada
ಸುದ್ದಿ

ಹಾಸ್ಯ ನಟ ರಾಕೇಶ್‌ ಪೂಜಾರಿ ಮನೆಗೆ ಕೊನೆಗೂ ರಿಷಬ್‌ ಶೆಟ್ಟಿ ದಂಪತಿ ಭೇಟಿ





 ಇತ್ತೀಚೆಗೆ ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ ಹಾಸ್ಯನಟ ರಾಕೇಶ್ ಪೂಜಾರಿ ಮನೆಗೆ ಕೊನೆಗೂ ನಟ ರಿಷಬ್ ಶೆಟ್ಟಿ ಭೇಟಿ ಮಾಡಿ ಕುಟುಂಸ್ಥರೊಂದಿಗೆ ಸಾಂತ್ವನ ಹೇಳಿದ್ದಾರೆ.

ಕಾಂತಾರ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ರಾಕೇಶ್ ಪೂಜಾರಿ ಬಳಿಕ ಪಾರ್ಟಿಯೊಂದರಲ್ಲಿ ಭಾಗಿಯಾಗಿದ್ದ ವೇಳೆ ಅಲ್ಲಿಯೇ ಕುಸಿದು ಸಾವನ್ನಪ್ಪಿದ್ದರು. ರಾಕೇಶ್ ನಿಧನರಾದಾಗ ಈ ಸಿನಿಮಾದ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಅಂತಿಮ ದರ್ಶನ ಪಡೆಯಲು ಬರಲಿಲ್ಲ ಎಂಬುದು ಸಾಕಷ್ಟು ಚರ್ಚೆ ಆಗಿತ್ತು.

ಇದೀಗ 21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಅವರ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಥ್ ನೀಡಿದರು. ಉಡುಪಿಯ ಹೂಡೆಯಲ್ಲಿ ರಾಕೇಶ್ ಪೂಜಾರಿ ಮನೆ ಇದೆ. ಅಲ್ಲಿ ರಾಕೇಶ್ ತಂಗಿ ಮತ್ತು ತಾಯಿ ವಾಸವಾಗಿದ್ದಾರೆ. ಅವರಿಗೆ ರಿಷಬ್ ಶೆಟ್ಟಿ ಸಾಂತ್ವನ ಹೇಳಿದ್ದಾರೆ.

ಅಂದಹಾಗೆ ನಟ-ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ಬಿಸಿಯಾಗಿದ್ದು, ಇದೇ ಚಿತ್ರದಲ್ಲಿ ನಟ ರಾಕೇಶ್ ಪೂಜಾರಿ ನಟಿಸಿದ್ದರು. ಈ ಚಿತ್ರದಲ್ಲಿ ರಾಕೇಶ್ ಪೂಜಾರಿ ಅವರಿಗೂ ಒಂದು ವಿಶೇಷ ಪಾತ್ರ ನೀಡಲಾಗಿತ್ತು. ಶೂಟಿಂಗ್​ನಲ್ಲಿ ಕೂಡ ಅವರು ಪಾಲ್ಗೊಂಡಿದ್ದರು. ಆದರೆ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಅವರು ನಿಧನರಾದರು.



Related posts

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಮೂಳೂರು: ಬಿಕ್ರಿಗುತ್ತು ಶಕುಂತಳಾ ಡಿ ಹೆಗ್ಡೆ ನಿಧನ

Mumbai News Desk

ಬಂದೂಕು ತೊರೆದು ಕೈಮಗ್ಗ ಸೀರೆಯುಟ್ಟು ರ್ಯಾಂಪ್ (Ramp)ವಾಕ್ ಮಾಡಿದ ಮಾಜಿ ನಕ್ಸಲರು: ‘ಲೆನಿನ್‌ನಿಂದ ಲಿನೆನ್‌ವರೆಗೆ…

Mumbai News Desk

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು

Mumbai News Desk

ಮುಂಬೈ : ಮೊಗವೀರ ಸಮುದಾಯದ ಹಿರಿಯ ಮುಖಂಡ ಗುಂಡಿ ವಿ. ಕೆ. ಸುವರ್ಣ ನಿಧನ

Mumbai News Desk

ಹಿರಿಯ ಸಾಹಿತಿ ಪತ್ರಕರ್ತ ಶ್ರೀ ಪರಮಾನಂದ ಸಾಲ್ಯಾನ್ ರಿಗೆ ರಂಗಭಾಸ್ಕರ- 2026 ಪ್ರಶಸ್ತಿ ಪ್ರದಾನ

Mumbai News Desk