September 6, 2026
Mumbai News Kannada
ಮುಂಬಯಿ

ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ ಕಮಲಾದೇವಿ ಪ್ರಸಾದ್ ಆಸ್ರಣ್ಣ ಮತ್ತು ಹರಿನಾರಾಯಣ ಅಸ್ರಣ್ಣರಿಗೆ ಗೌರವಾರ್ಪಣೆ





ಮುಂಬಯಿ ಜೂ5. ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕಾಗಿ ಆಗಮಿಸಿದ ಕಟೀಲು ಕ್ಷೇತ್ರದ ಅರ್ಚಕರಾದ ಕಮಲಾದೇವಿ ಪ್ರಸಾದ್ ಆಸ್ರಣ್ಣ ಮತ್ತು ಹರಿನಾರಾಯಣ ಆಸ್ರಣ್ಣರನ್ನು ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಪದಾದಿಕಾರಿಗಳು ಮಲಾಡ್ ಆಹ್ವಾನಿಸಿ ವಿಶೇಷವಾಗಿ ಗೌರವಿಸಿದರು.

ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷರಾದ ನ್ಯಾ. ಜಗನ್ನಾಥ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನಡೆದ ಈ ಸರಳ ಸಮಾರಂಭದಲ್ಲಿ ಗೌರವವನ್ನು ಸ್ವೀಕರಿಸಿ ಮಾತನಾಡಿದ ಕಮಲಾದೇವಿ ಪ್ರಸಾದ್ ಆಸ್ರಣ್ಣ ರು ನೀವು ನೀಡಿದ ಎಲ್ಲಾ ಗೌರವ ಸನ್ಮಾನವು ಶ್ರೀ ದೇವಿಗೆ ಸಮರ್ಪಣೆಯಾಗಿದೆ, ಶ್ರೀದೇವಿಯು ನಿಮ್ಮೆಲ್ಲರನ್ನು ಅನುಗ್ರಹಿಸಲಿ ಹಾಗೂ ಇನ್ನೂ ಕೂಡ ಸಾಮಾಜಿಕ, ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವಂತಹ ಶಕ್ತಿ ನೀಡಲಿ ಎಂದು ಹಾರೈಸಿದರು.

ಮಲಾಡ್ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಗೆ ಆರಂಭದಿಂದಲೇ ಮಾರ್ಗದರ್ಶನವನ್ನು ನೀಡುತ್ತಿದ್ದ ಬರುತ್ತಿದ್ದ ಕಮಲಾದೇವಿ ಪ್ರಸಾದ್ ಆಸ್ರಣ್ಣ ಮತ್ತು ಹರಿನಾರಾಯಣ ಆಸ್ರಣ್ಣರನ್ನು 16ನೇ ವರ್ಷದ
ಶ್ರೀ ವರಮಹಾಲಕ್ಷ್ಮೀ ಪೂಜೆ ಆಗಸ್ಟ್ 10 ರಂದು ನಡೆಯಲಿದ್ದು ಗೌರವದಿಂದ ಆಮಂತ್ರಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯವಾದಿ ಜಗನ್ನಾಥ್ ಶೆಟ್ಟಿ ಮತ್ತು ಮೋಹಿನಿ ಜೆ ಶೆಟ್ಟಿ, ದಂಪತಿ ವಿಶೇಷವಾಗಿ ಶಾಲು ಫಲ ಪುಷ್ಪಗಳನ್ನು ನೀಡಿ ಗೌರವಿಸಿದರು.
ಸಮಿತಿಯ ಉಪಾಧ್ಯಕ್ಷ ಕುಮರೇಶ್ ಆಚಾರ್ಯ, ಕೋಶಾಧಿಕಾರಿ ಸುರೇಂದ್ರ ಆಚಾರ್ಯ, ಜೊತೆ ಕಾರ್ಯದರ್ಶಿ ಲಕ್ಷ್ಮಣ್ ರಾವ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶ್ರೀಮತಿ ಕೆ.ಆಚಾರ್ಯ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ರತ್ನ ಡಿ. ಕುಲಾಲ್ ಯುವ ವಿಭಾಗದ ಉಪಕಾರ್ಯಾಧ್ಯಕ್ಷೆ ಪ್ರಣಿತ ವರುಣ್ ಶೆಟ್ಟಿ ಮತ್ತು ಪ್ರತೀಕ್ ಜೆ ಶೆಟ್ಟಿ, ಉಪಸ್ಥಿತರಿದ್ದರು
B. Dinesh Kulal
Mob.: 9821868674



Related posts

ವಸಾಯಿ ಕರ್ನಾಟಕ ಸಂಘ ಮಹಿಳಾ ವಿಭಾಗದ ನವರಾತ್ರಿ ಉತ್ಸವ: ಸಂಸ್ಕೃತಿ ಮತ್ತು ಸಾಧನೆಗಳ ಸಮಾಗಮ

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ 59ನೇ ನವರಾತ್ರಿ ಉತ್ಸವ ಸಂಪನ್ನ

Mumbai News Desk

ಮೀರಾ ರೋಡ್   ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ 34ನೇ ವಾರ್ಷಿಕ ಮಹಾಪೂಜೆ ಭಕ್ತಿ ಸಂಭ್ರಮದೊಂದಿಗೆ ಸಂಪನ್ನ,

Mumbai News Desk

ಅನಿತಾ ಪಿ.ತಾಕೊಡೆಯವರಿಗೆ ಚೆಂಬೂರು ಕರ್ನಾಟಕ ಸಂಘ ಕೊಡಮಾಡುವ “ಅರಾಟೆ ನಾಗಮ್ಮ ಶೇಷಪ್ಪ ಪೂಜಾರಿ ಸ್ಮಾರಕ ಪ್ರಶಸ್ತಿ”

Mumbai News Desk

ಮುಂಬಯಿ ನ್ಯೂಸ್ ವೀಕ್ಷಕರ / ಓದುಗರ ಮನೆ, ಮನೆ ಗಣಪತಿ

Mumbai News Desk

ಮುಂಬಯಿ ಕನ್ನಡ ಸಂಘದ ವತಿಯಿಂದ ಕನ್ನಡ ಮಾಧ್ಯಮದ ಮಕ್ಕಳಿಗೆ ಧನ ಸಹಾಯ ವಿತರಣೆ

Mumbai News Desk