24.5 C
Karnataka
June 11, 2025
ತುಳುನಾಡು

ಮೂಲ್ಕಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜೃಂಭಣೆಯ ದೃಢ ಕಲಶಾಭಿಷೇಕ



ಮೂಲ್ಕಿ ಕಾರ್ನಡು ಶ್ರೀ ಹರಿಹರಿ ಕ್ಷೇತ್ರದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ದೃಢ ಕಳಲಶಾಭಿಷೇಕ ಬುಧವಾರ ಬೆಳಗ್ಗೆ 8:30ರ ಮಿಥುನ ಲಗ್ನ ಸುಮುಹೂರ್ತದಲ್ಲಿ, ಶ್ರೀ ದೇವರಿಗೆ ದೃಢ ಕಲಶಾಭಿಷೇಕ, ಕ್ಷೇತ್ರದ ತಂತ್ರಿಗಳಾದ ಶಿಬರೂರು ಗೋಪಾಲಕೃಷ್ಣ ತಂತ್ರಿ ಹಾಗೂ ಅರ್ಚಕ ಹಯಗ್ರೀವ ಪಡ್ಡಿಲ್ಲಾಯ ನೇತೃತ್ವದಲ್ಲಿ ನಡೆಯಿತು.


ಈ ಸಂದರ್ಭ ಕ್ಷೇತ್ರದ ಆಡಳಿತ ಮೋಕ್ತೇಸರ ಎಂ ಎಚ್ ಅರವಿಂದ ಪೂಂಜಾ, ಸುನಿಲ್ ಆಳ್ವ, ವೈ ಏನ್ ಸಾಲ್ಯಾನ್, ಹರ್ಷರಾಜ ಶೆಟ್ಟಿ, ಮಧು ಆಚಾರ್ಯ, ಹರಿಶ್ಚಂದ್ರ ಪಿ ಸಾಲ್ಯಾನ್, ಪ್ರವೀಣ್ ಕೋಟ್ಯಾನ್, ಕೃಷ್ಣ ದೇವಾಡಿಗ, ದಿವಾಕರ್ ಕೋಟ್ಯಾನ್, ಉದಯ ಶೆಟ್ಟಿ ಕಾರ್ನಾಡ್, ಹರಿಹರ, ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಶಶಿಂದ್ರ ಸಾಲ್ಯಾನ್, ರವಿ ಕುಮಾರ್, ರಾಘವೇಂದ್ರ ರಾವ್, ನೂತನ್ ಶೆಟ್ಟಿ, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್, ವಿದ್ವಾನ್ ನಾಗೇಶ್ ಬಪ್ಪನಾಡು, ಪುರಂದರ ಸಾಲ್ಯಾನ್,, ರಂಗನಾಥ ಶೆಟ್ಟಿ, ಶಿವರಾಂ ಜಿ ಅಮೀನ್, ಶರತ್ ಕುಬೆವೂರು, ಸುಧೀರ್ ಕೋಟ್ಯಾನ್, ಭವಾನಿ ಶಂಕರ್, ಉದಯಕುಮಾರ್, ಗೋಪಿನಾಥ್ ಪೂಜಾರಿ, ನಿವೃತ್ತ ಪ್ರಾಂಶುಪಾಲರು ವಿಷ್ಣುಮೂರ್ತಿ, ಶಶಿಂದ್ರ ಅಮೀನ್ ಮತ್ತಿತರರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಬ್ರಹ್ಮಕಲಶದ ವಿಧಿ ವಿಧಾನಗಳನ್ನು ನೆರವೇರಿಸಿದ ಶಿಬರೂರು ಗೋಪಾಲಕೃಷ್ಣ ತಂತ್ರಿ ಅವರನ್ನು ಅರವಿಂದ ಪೂಂಜಾ ಅವರು ಗೌರವಿಸಿ ಬ್ರಹ್ಮಕಲಶದ ಎಲ್ಲ ವಿಧಿ ವಿಧಾನಗಳನ್ನು ಒಳ್ಳೆಯ ರೀತಿಯಿಂದ ನೆರವೇರಿಸಿ ಕೊಟ್ಟಂತ ತಂತ್ರಿಯರಿಗೆ ಕೃತಜ್ಞತೆಯನ್ನು ಹೇಳಿದರು. ಅದರಂತೆ ಬ್ರಹ್ಮಕಲಶಕ್ಕೆ ಸಹಕರಿಸಿದ ಎಲ್ಲ ಭಕ್ತರನ್ನು, ಸಂಘ ಸಂಸ್ಥೆ ಪದಾಧಿಕಾರಿಗಳಿಗೂ ಕೃತಜ್ಞತೆ ಸಲ್ಲಿಸಿದರು. ಬ್ರಹ್ಮಕಲಶದ ಸವಿಸ್ತಾರ ವರದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದ ಪತ್ರಕರ್ತರಿಗೆ ವಂದಿಸಿ, ಮುಂದೆ ದೇವಸ್ಥಾನದ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಬೇಕಾಗಿ ಹೇಳಿದರು.

Related posts

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಇಂದಿನಿಂದ ಮಾ. 5ರ ತನಕ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Mumbai News Desk

ಉಡುಪಿಯಲ್ಲಿ ನಡೆದ ಕುಣಿತ ಭಜನಾ ಸೇವೆಯಲ್ಲಿ ಎಲ್ಲರ ಗಮನ ಸೆಳೆದ ಲಕ್ಷ್ಮಿ ಚೆನ್ನಕೇಶವ ಭಜನಾ ಮಂಡಳಿ ಮಾಣಿಕೊಳಲು ತಂಡದ ಪುಟಾಣಿಗಳು

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮ ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಶ್ರೀ ಚಕ್ರ ಪೀಠ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ದೊಡ್ಡಣ್ಣಗುಡ್ಡೆ ಮಹಾ ಚಂಡಿಕಾಯಾಗ ಮಹಾ ಮಂತ್ರಕ್ಷತೆ ಸಂಪನ್ನ

Mumbai News Desk

ಮಧೂರು ಶ್ರೀ ಮದನಂತೇಶ್ವರ ದೇಗುಲ; ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ

Mumbai News Desk

ಕಾಪು ಮಾರಿಯಮ್ಮ ನ ಅನುಗ್ರಹ, ಭಾರತ ಟಿ20 ತಂಡದ ನಾಯಕನಾದ ಸೂರ್ಯಕುಮಾರ ಯಾದವ್.

Mumbai News Desk