July 23, 2026
Mumbai News Kannada
ಸುದ್ದಿ

ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ಗೆ ಹೊಸ ರೂಲ್ಸ್: ಜುಲೈ 1ರಿಂದ ಆಧಾರ್ ಲಿಂಕ್ ಕಡ್ಡಾಯ







ನವದೆಹಲಿ: ಭಾರತೀಯ ರೈಲ್ವೆ ಸಚಿವಾಲಯವು ತತ್ಕಾಲ್​ ಟಿಕೆಟ್​ ಬುಕಿಂಗ್ ನಿಯಮಯದಲ್ಲಿ ಹೊಸ ಬದಲಾವಣೆ ಮಾಡಿದೆ. ತತ್ಕಾಲ್​ ಟಿಕೆಟ್​ ಬುಕಿಂಗ್​ ಮಾಡಬೇಕೆಂದರೆ IRCTC ಅಧಿಕೃತ ವೆಬ್​ಸೈಟ್​ ಅಥವಾ ಆ್ಯಪ್​​ ಗೆ ಆಧಾರ್​ ಲಿಂಕ್​ ಆಗಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ಇನ್ಮುಂದೆ ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ತತ್ಕಲ್ ಟಿಕೆಟ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಏಜೆಂಟ್​ ಗಳ ಮೇಲೆ ಸಮಯದ ನಿರ್ಬಂಧ ಹೇರಿದೆ. ಈ ಬಗ್ಗೆ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹೊಸ ನಿಯಮ ಜುಲೈ 1ರಿಂದ ಈ​ ಜಾರಿಗೆ ಬರಲಿದೆ ಎಂದು ರೈಲ್ವೆ ಸಚಿವಾಲ ತಿಳಿಸಿದೆ.

01-07-2025 ರಿಂದ ಜಾರಿಗೆ ಬರುವಂತೆ ತತ್ಕಾಲ್ ಟಿಕೆಟ್‌ಗಳನ್ನು ಆಧಾರ್ ಲಿಂಕ್​ ಹೊಂದಿರುವ ಬಳಕೆದಾರರು ಮಾತ್ರ ಐಆರ್​ ಟಿಸಿ ವೆಬ್‌ಸೈಟ್ ಅಥವಾ ಅದರ ಆ್ಯಪ್​ ಮೂಲಕ ಬುಕ್ ಮಾಡಬಹುದು. ಜುಲೈ 15 ರಿಂದ ತತ್ಕಾಲ್ ಬುಕಿಂಗ್‌ಗಳಿಗೆ ಆಧಾರ್ ಆಧಾರಿತ OTP ದೃಢೀಕರಣ ಕಡ್ಡಾಯಗೊಳಿಸಲಾಗುತ್ತದೆ ಎಂದು ತಿಳಿಸಿದೆ.

ಕಂಪ್ಯೂಟರ್​ ಆಧಾರಿತ OTP ಯ ದೃಢೀಕರಣದ ನಂತರವೇ ಭಾರತೀಯ ರೈಲ್ವೆ ಅಥವಾ ಅಧಿಕೃತ ಏಜೆಂಟ್‌ಗಳ ಮೂಲಕ ಬುಕಿಂಗ್ ಮಾಡಲು ತತ್ಕಾಲ್ ಟಿಕೆಟ್‌ಗಳು ಲಭ್ಯವಿರುತ್ತವೆ. ಇದನ್ನು ಬಳಕೆದಾರರು ಬುಕಿಂಗ್ ಸಮಯದಲ್ಲಿ ಒದಗಿಸಿದ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಏಜೆಂಟ್​​ಗಳಿಗೆ ತತ್ಕಾಲ್​ ಬುಕಿಂಗ್​ ನಿರ್ಬಂಧ
ಇನ್ನು ತತ್ಕಾಲ್​ ಟಿಕೆಟ್​ ಸಾಮಾನ್ಯ ಜನರಿಗೆ ಸಿಗಲಿ ಎನ್ನುವ ಉದ್ದೇಶದಿಂದ ರೈಲ್ವೆ ಸಚಿವಾಲಯವು ಮಹತ್ತರ ಬದಲಾವಣೆಯೊಂದನ್ನು ತಂದಿದೆ. ಅದೇನೆಂದರೆ, ಭಾರತೀಯ ರೈಲ್ವೆಯ ಅಧಿಕೃತ ಏಜೆಂಟ್​ಗಳಿಗೆ ತತ್ಕಾಲ್ ಟಿಕೆಟ್​ ಆರಂಭವಾಗುವ ಮೊದಲ 30 ನಿಮಿಷದಲ್ಲಿ ಬುಕಿಂಗ್​ ಮಾಡುವ ಅವಕಾಶವನ್ನು ನಿರ್ಬಂಧಿಸಿದೆ. ಅಂದರೆ ಬೆಳಗ್ಗೆ 10 ರಿಂದ 10.30 ರವರೆಗೆ ಎಸಿ, ಬೆಳಗ್ಗೆ 11 ರಿಂದ 11.30 ರವರೆಗೆ ಆರಂಭವಾಗುವ ನಾನ್ ಎಸಿ ಟಿಕೆಟ್​ ಗಳನ್ನು ಬುಕ್​ ಮಾಡುವುದಕ್ಕೆ ಏಜೆಂಟ್​​ಗಳಿಗೆ ಅವಕಾಶ ನೀಡಿಲ್ಲ. ಈ ಅವಧಿಯಲ್ಲಿ ಆಧಾರ್ ದೃಢೀಕರಿಸಿದವರಿಗೆ ಆದ್ಯತೆ ನೀಡಲಾಗಿದೆ. ಅದೇ ರೀತಿ ಜುಲೈ 15ರಿಂದ ತತ್ಕಾಲ್​​ ನಲ್ಲಿ ಟಿಕೆಟ್​ ಬುಕ್ ಮಾಡಲು ಆಧಾರ್ ಕಾರ್ಡ್ ಒಟಿಪಿ ದೃಢೀಕರಣವನ್ನು ಕಡ್ಡಾಯಗೊಳಿಸಲಾಗಿದೆ. ಒಟಿಪಿ ದೃಢೀಕರಣದ ನಂತರವೇ ಪಿಆರ್ ಎಸ್ ಕೌಂಟರ್​​ ಗಳ ಮೂಲಕ ಬುಕ್ಕಿಂಗ್​ ಮಾಡಲು ತತ್ಕಾಲ್ ಟಿಕೆಟ್ ಲಭ್ಯವಿರುತ್ತವೆ ಎಂದು ರೈಲ್ವೆ ಸಚಿವಾಲಯ ಮಾಹಿತಿ ನೀಡಿದೆ.



Related posts

ಕನ್ನಡ ಸಂಘ ಬಹರೈನ್‌ಗೆ ಒಂದು ಕೋಟಿ ರೂಪಾಯಿಗಳ ಅನುದಾನ – ಮುಖ್ಯಮಂತ್ರಿಗಳ ಅನುಮೋದನೆ

Mumbai News Desk

ವಸಾಯಿ : ಹರಿಶ್ಚಂದ್ರ ಜಿ. ಕುಂದರ್ ಅವರ ಅಕಾಲಿಕ ಮರಣ

Mumbai News Desk

ಸಮಾಜ ಸೇವಕಿ ದಿ. ಸುಮಿತ್ರಾ ರಾಜು ಸಾಲ್ಯಾನ್ ಅವರ ಜನ್ಮದಿನ.ವೃದ್ಧಾಶ್ರಮದಲ್ಲಿ ಆಚರಣೆ.

Mumbai News Desk

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ

Mumbai News Desk

ಧರ್ಮಸ್ಥಳ ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್

Mumbai News Desk