32 C
Mumbai
April 24, 2026
Mumbai News Kannada
ಸುದ್ದಿ

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಯಕ್ಷಗಾನ ತಾಳಮದ್ದಳೆ, ಕಟೀಲ್ ಕ್ಷೇತ್ರದಲ್ಲಿ ವಿಶೇಷ ಪೂಜೆ.





ಮಂಗಳೂರು ಜೂ13.; ಮಲಾಡ್ ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಯ 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಆಗಸ್ಟ್ 10ರಂದು ಮಲಾಡ್ ದತ್ತ ಮಂದಿರ್  ರೋಡ್ ನ ಸ್ವಾಮಿ ನಾರಾಯಣ ಸಭಾಂಗಣದಲ್ಲಿ ನಡೆಯಲಿದೆ.

ಅಂದು ಮಧ್ಯಾಹ್ನ 3:30 ಕ್ಕೆ ಪೂಜಾ ಸಮಿತಿಯ ಮಹಿಳಾ ಸದಸ್ಯರಿಂದ ಶ್ರೀ ಶನೀಶ್ವರ ಮಹಾತ್ಮೆ ಎಂಬ ಯಕ್ಷಗಾನ ತಾಳಮದ್ದಲೆ, ಯಕ್ಷ ಗುರು ನಾಗೇಶ್ ಪೂಳಲಿ ಅವರ ಮಾರ್ಗದರ್ಶನದಲ್ಲಿ ನಡೆಯಲಿದ್ದು ಈ ಬಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಸನ್ನಿಧಿಯಲ್ಲಿ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಶೆಟ್ಟಿ  ಮತ್ತು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಶ್ರೀಮತಿ ಕೆ ಆಚಾರ್ಯ ಅವರ ಉಪಸ್ಥಿತಿಯಲ್ಲಿ ಕಟೀಲು ಶ್ರೀ ದುರ್ಗೆಗೆ ವಿಶೇಷ ಪೂಜೆಯನ್ನು ಮಾಡಿ ಪ್ರಾರ್ಥನೆಯನ್ನು  ನಡೆಸಿ ಪ್ರಸಾದವನ್ನು ಸ್ವೀಕರಿಸಲಾಯಿತು.

 ಈ ಸಂದರ್ಭದಲ್ಲಿ ಪೂಜಾ ಸಮಿತಿಯ ಉಪಾಧ್ಯಕ್ಷರುಗಳಾದ ಕುಮಾರೇಶ್ ಆಚಾರ್ಯ, ದಿನೇಶ್ ಪೂಜಾರಿ ನಿಂಜೂರು, ದಿನೇಶ್ ಕುಲಾಲ್, ಲಾಸ್ಯ ಕುಲಾಲ್, ಚೇತನ ಪೂಜಾರಿ.ಪಾಲ್ಗೊಂಡಿದ್ದರು.

ಇತ್ತೀಚೆಗೆ ತಾಳ ಮದ್ದಳೆಯ ಮೂಹೂರ್ತ ಮಲಾಡಿನಲ್ಲಿ ನಡೆಯಿತು. 



Related posts

ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

ಕಲಂಬೋಲಿ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಂಸ್ಥೆ ಇದರ ಮಹಿಳಾ ವಿಭಾಗದ ಹರಸಿನ ಕುಂಕುಮ ಕಾಯ೯ಕ್ರಮ.

Mumbai News Desk

ಪಡುಬಿದ್ರೆ-ಪಣಿಯೂರು ರೈಲ್ವೆ ನಿಲ್ದಾಣದಲ್ಲಿ ಮಂಗಳೂರು-ಕುರ್ಲಾ(ಬಾಂಬೆ) ಮತ್ತ್ವಗಂಧ ರೈಲ್ವೆ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ರಾಜ್ಯ ರೈಲ್ವೆ ಖಾತೆ ಸಚಿವ ವಿ ಸೋಮಣ್ಣಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ

Mumbai News Desk

ಮಂಗಳೂರಿನ ರೈಲು ಬಳಕೆದಾರರ ದೀರ್ಘ ಕಾಲದ ಬೇಡಿಕೆಗಳ ಈಡೇರಿಕೆಗೆ ತ್ವರಿತ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ರೈಲ್ವೆ ಪ್ರಯಾಣಿಕರ ಸಮಿತಿ ಒತ್ತಾಯ.

Mumbai News Desk

ಶಿಕ್ಷಣತಜ್ಞ ಶ್ರೀಧರ್ ಸುವರ್ಣರಿಗೆ ‘ಭಾರತ ರತ್ನ ಐಕಾನಿಕ್ ಪ್ರಶಸ್ತಿ 2025’

Mumbai News Desk