July 22, 2026
Mumbai News Kannada
ಸುದ್ದಿ

  ’ಕಾಂತಾರ ಚಾಪ್ಟರ್ 1’ ಸೆಟ್​​ನಲ್ಲಿ ಮತ್ತೊಂದು ಭಾರಿ ಅವಘಡ, ರಿಷಬ್ ಶೆಟ್ಟಿ ಸಹಿತ 30 ಜನ ಸಹಕಲಾವಿದರುಅಪಾಯದಿಂದ ಪಾರು







ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದು, ಈ ಸಿನಿಮಾದ ಚಿತ್ರೀಕರಣದ ವೇಳೆ ಒಂದರ ಹಿಂದೊಂದರಂತೆ ಅವಘಡಗಳು ಸಂಭವಿಸುತ್ತಲೇ ಇವೆ. ಸಿನಿಮಾನಲ್ಲಿ ನಟಿಸಿದ್ದ ಮೂವರು ಈಗಾಗಲೇ ಪ್ರಾಣ ಬಿಟ್ಟಿದ್ದಾರೆ.
ಎರಡು ದಿನಗಳ ಹಿಂದೆ ಸಹ ಕಲಾವಿದ ವಿಜು ವಿಕೆ ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಇದೀಗ ಚಿತ್ರೀಕರಣದ ವೇಳೆ ದೋಣಿ ಮಗುಚಿ ಬಿದ್ದ ಘಟನೆ ನಡೆದಿದೆ.
ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ‘ಕಾಂತಾರ’-1 ಚಿತ್ರದ ಕೊನೆ ಹಂತದ ಚಿತ್ರೀಕರಣ ನಡೆಯುತ್ತಿದೆ. ಶನಿವಾರ ಚಿತ್ರೀಕರಣ ನಡೆಯುತ್ತಿದ್ದ ವೇಳೆ ರಿಷಬ್ ಶೆಟ್ಟಿ ಸೇರಿ 30 ಜನ ಕಲಾವಿದರಿದ್ದ ದೋಣಿ ಇದ್ದಕ್ಕಿದ್ದಂತೆ ಮಗುಚಿ ಬಿದ್ದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಕಲಾವಿದರು, ತಂತ್ರಜ್ಞರು ಎಲ್ಲರೂ ಈಜಿ ದಡ ಸೇರಿದ್ದಾರೆ. ಬೋಟ್‌ನಲ್ಲಿದ್ದವರು ಬಚಾವಾದರೂ ಕ್ಯಾಮೆರಾ ಇನ್ನಿತರೆ ಸೆಟ್ ಪ್ರಾಪರ್ಟಿಗಳು ನೀರು ಪಾಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಬೆನ್ನಲ್ಲೇ ಚಿತ್ರೀಕರಣವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಸಲಾಗಿದ್ದು, ಒಂದರ ಹಿಂದೆ ಒಂದರಂತೆ ಘಟನೆ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಚಿತ್ರತಂಡ ಇದೀಗ ಭಯಭೀತಗೊಂಡಿದೆ ಎನ್ನಲಾಗಿದೆ. ಈ ಹಿಂದೆ ರಿಷಬ್‌ ಶೆಟ್ಟಿಗೆ ಮಂಗಳೂರಿನ ಕದ್ರಿ ಬಾರೆಬೈಲ್‌ ಪಂಜುರ್ಲಿ ದೈವ ಎಚ್ಚರಿಕೆ ನೀಡಿತ್ತು. ಅದರ ಬೆನ್ನಲ್ಲೇ ಮತ್ತಷ್ಟು ಅವಘಡಗಳ ಸಂಭವಿಸುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.



Related posts

ಜನಪ್ರಿಯ ಗಾಯಕ ಪಂಕಜ್ ಉಧಾಸ್ ಇನ್ನಿಲ್ಲ

Mumbai News Desk

ಮುಂಬೈ : ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಪ್ರವೇಶ ಪ್ರಾರಂಭ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (11/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ‌ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ

Mumbai News Desk

ಮಹಾರಾಷ್ಟ್ರ ದಲ್ಲಿ ಭೀಕರ ರೈಲು ಅಪಘಾತ – ರೈಲಿನಡಿ ಸಿಲುಕಿ 7 ಜನರ ದುರಂತ ಸಾವು

Mumbai News Desk

ಸಂಸದ ಕೋಟ ಅವರ ಅವಿರತ ಪ್ರಯತ್ನದ ಫಲ :ಫೆ. 17ರಿಂದ ಮತ್ಸ್ಯಗಂಧ ಎಕ್ಸ್ಪ್ರೆಸ್ ರೈಲು ಅತ್ಯಾಧುನಿಕ ತಂತ್ರಜ್ಞಾನದ ಎಲ್ಎಚ್ ಬಿ ಕೋಚ್ ಮೂಲಕ ಪ್ರಯಾಣ

Mumbai News Desk